ಆ್ಯಪ್ನಗರ

ಮಲೆಮನೆಗೆ ಎಚ್‌ಡಿಕೆ ಭೇಟಿ

ಮೂಡಿಗೆರೆ ತಾಲೂಕಿನ ಅತಿವೃಷ್ಟಿ ಪೀಡಿತ ಪ್ರದೇಶಗಳಾದ ಹಿರೆಬೈಲ್‌, ಜಾವಳಿ, ಮಲೆಮನೆ ಗ್ರಾಮಗಳಿಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

Vijaya Karnataka 20 Aug 2019, 5:00 am
ಕೊಟ್ಟಿಗೆಹಾರ : ಮೂಡಿಗೆರೆ ತಾಲೂಕಿನ ಅತಿವೃಷ್ಟಿ ಪೀಡಿತ ಪ್ರದೇಶಗಳಾದ ಹಿರೆಬೈಲ್‌, ಜಾವಳಿ, ಮಲೆಮನೆ ಗ್ರಾಮಗಳಿಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
Vijaya Karnataka Web CKM-19ktg3


ಮನೆ ನೆಲಸಮವಾದ ಪ್ರದೇಶ ಮತ್ತು ಪ್ರವಾಹಕ್ಕೆ ಕೊಚ್ಚಿ ಹೋದ ಕಾಫಿ, ಭತ್ತದ ಗದ್ದೆಗಳನ್ನು ವೀಕ್ಷಿಸಿದರು. ಮನೆ ಕಳೆದುಕೊಂಡು ನಿರಾಶ್ರಿತರನ್ನು ಮಾತನಾಡಿಸಿ ಅವರ ಸಮಸ್ಯೆಗಳನ್ನು ಆಲಿಸಿ ಸಾಂತ್ವನ ಹೇಳಿದರು. ನಂತರ ಜಾವಳಿಯಲ್ಲಿ ಮಾತನಾಡಿದ ಅವರು, ಈ ಭಾಗದ ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿದ್ದು, ಜಿಲ್ಲಾಧಿಕಾರಿಗಳು ಅತಿವೃಷ್ಟಿಯಿಂದ ಆದ ಹಾನಿಯ ಬಗ್ಗೆ ವಿಶೇಷ ವರದಿ ತಯಾರಿಸುವಂತೆ ಸೂಚಿಸಲಾಗುವುದು ಎಂದರು.

ಮಾಜಿ ಸಚಿವರಾದ ಸಾ.ರಾ. ಮಹೇಶ್‌, ಬಿ.ಬಿ.ನಿಂಗಯ್ಯ, ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಬೋಜೆಗೌಡ, ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ, ಜೆಡಿಎಸ್‌ ಜಿಲ್ಲಾಧ್ಯಕ್ಷ ರಂಜನ್‌ ಅಜಿತ್‌ ಕುಮಾರ್‌, ತಾಲೂಕು ಅಧ್ಯಕ್ಷ ಲಕ್ಷ ್ಮಣಗೌಡ,ಜಗದೀಶ್‌, ಸಂತೋಷ್‌, ವಿನಯರಾಜ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ