ಆ್ಯಪ್ನಗರ

ಚಿಕ್ಕಮಗಳೂರು: ಭಾರಿ ಮಳೆ, ಮೂಡಿಗೆರೆ, ಶೃಂಗೇರಿ ತಾಲೂಕಿನಲ್ಲಿ ರೆಡ್‌ ಅಲರ್ಟ್‌

ಜಿಲ್ಲೆಯ ಚಾರ್ಮಾಡಿ ಘಾಟ್ 6ನೇ ತಿರುವಿನಲ್ಲಿ ಗುಡ್ಡ ಕುಸಿತಗೊಂಡಿದೆ. ಇದರಿಂದ ವಿಲ್ಲುಪುರಂ ಮಂಗಳೂರು ಹೆದ್ದಾರಿ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಕೊಟ್ಟಿಗೆ ಹಾರದಲ್ಲಿ ವಾಹನಗಳನ್ನು ಪೊಲೀಸರು ನಿಲ್ಲಿಸುತ್ತಿದ್ದಾರೆ.

Vijaya Karnataka Web 5 Aug 2020, 7:36 pm
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
Vijaya Karnataka Web ಚಿಕ್ಕಮಗಳೂರು
ಚಿಕ್ಕಮಗಳೂರು


ಮೂಡಿಗೆರೆ ಹಾಗೂ ಶೃಂಗೇರಿ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 48 ಗಂಟೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಜಿಲ್ಲೆಯ ಚಾರ್ಮಾಡಿ ಘಾಟ್ 6ನೇ ತಿರುವಿನಲ್ಲಿ ಗುಡ್ಡ ಕುಸಿತಗೊಂಡಿದೆ. ಇದರಿಂದ ವಿಲ್ಲುಪುರಂ ಮಂಗಳೂರು ಹೆದ್ದಾರಿ ಬಂದ್ ಆಗಿದೆ. ಕೊಟ್ಟಿಗೆ ಹಾರದಲ್ಲಿ ವಾಹನಗಳನ್ನು ಪೊಲೀಸರು ನಿಲ್ಲಿಸುತ್ತಿದ್ದಾರೆ.

ಮಳೆಯನ್ನ ಎದುರಿಸೋಕೆ ಜಿಲ್ಲಾಡಳಿತ ಸನ್ನದ್ಧವಾಗಿದೆ. ಈಗಾಗಲೇ ಮೆಸ್ಕಾಂ, ಪಿಡಬ್ಯೂಡಿ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಮಳೆ ಕೆಲಸದಲ್ಲಿ ನಿರತರಾಗಿದ್ದಾರೆ
.
ಇಲ್ಲಿವರೆಗೂ ಜಿಲ್ಲೆಯಲ್ಲಿ ಹತ್ತು ಮನೆಗಳು ಮರಬಿದ್ದು ಹಾನಿಯಾಗಿವೆ. ಜಿಲ್ಲೆಯಲ್ಲಿರುವ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ನದಿ ಅಕ್ಕಪಕ್ಕದಲ್ಲಿರುವ ಮನೆಗಳಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ತುಂಗಾ, ಭದ್ರಾ, ಹೇಮಾವತಿ ನದಿ ಪ್ರದೇಶದಲ್ಲಿರುವ ಜನರಿಗೂ ಸೂಚನೆ ನೀಡಲಾಗಿದೆ. ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದಲ್ಲಿ ಹತ್ತು ಕುಟುಂಬದವರನ್ನು ಸ್ಥಳಾಂತರ
ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ