ಬಾಳೆಹೊನ್ನೂರು: ವಿದ್ಯಾರ್ಥಿಗಳ ಜ್ಞಾನ ಮಟ್ಟ ಹೆಚ್ಚಿಸಿ, ವಿಷಯದ ಪರಿಪೂರ್ಣ ಪರಿಜ್ಞಾನ ಉಂಟು ಮಾಡಿಸಲು ಸ್ಮಾರ್ಟ್ಕ್ಲಾಸ್ ಸಹಕಾರಿಯಾಗಲಿದೆ ಎಂದು ಬಾಳೆಹೊನ್ನೂರು ಶ್ರೀಮದ್ ರಂಭಾಪುರೀ ಪೀಠದ ಡಾ.ಶ್ರೀರಂಭಾಪುರಿ ಜಗದ್ಗುರುಗಳು ಹೇಳಿದರು.
ಅವರು ಸೋಮವಾರ ರಂಭಾಪುರಿ ಪೀಠದ ಶ್ರೀಜಗದ್ಗುರು ರುದ್ರಮುನೀಶ್ವರ ವಸತಿ ಪ್ರೌಢಶಾಲೆಯಲ್ಲಿ ಜಗದ್ಗುರು ರೇಣುಕಾಚಾರ್ಯ ಕೃಪಾಪೋಷಿತ ಹಳೇವಿದ್ಯಾರ್ಥಿಗಳ ಸಂಘ ಹಾಗೂ ಕಾಂಗ್ರೆಸ್ ಮುಖಂಡ ಟಿ.ಡಿ.ರಾಜೇಗೌಡ ಅವರು ಕೊಡುಗೆ ನೀಡಿದ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಡಿಜಿಟಲ್ ತಂತ್ರಜ್ಞಾನದ ಪ್ರಾಮುಖ್ಯತೆ ನಿತ್ಯದ ಬದುಕಿನಲ್ಲಿ ಹೆಚ್ಚಿದಂತೆ ಶಿಕ್ಷ ಣ ಪದ್ದತಿಯಲ್ಲಿ ಆಮೂಲಾಗ್ರ ಬದಲಾವಣೆಯಾಗತೊಡಗಿದೆ. ಇತ್ತೀಚಿನ ಬೆಳವಣಿಗೆ ಎಂದರೆ ಸ್ಮಾರ್ಟ್ಕ್ಲಾಸ್ ಕೊಠಡಿಯನ್ನು ಡಿಟಿಎಚ್ ತಂತ್ರಜ್ಞಾನದಲ್ಲಿ ಪರಿಚಯಿಸಲಾಗುತ್ತಿದೆ. ವಿದ್ಯಾರ್ಥಿಗಳು ಉತ್ತಮ ಗುರಿಯನ್ನಿಟ್ಟುಕೊಂಡು ಶಿಕ್ಷ ಕರ ಮತ್ತು ಗುರುಗಳ ಮಾರ್ಗದರ್ಶನದಲ್ಲಿ ಗುಣಮಟ್ಟದ ಶಿಕ್ಷ ಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಬೇಕೆಂದರು.
ಕಾಂಗ್ರೆಸ್ ಮುಖಂಡ ಟಿ.ಡಿ.ರಾಜೇಗೌಡ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ, ಬೆಳೆಯುತ್ತಿರುವ ಯುವ ಜನಾಂಗಕ್ಕೆ ಯೋಗ್ಯ ಅರಿವು, ಉತ್ತಮ ಶಿಕ್ಷ ಣ, ಸಂಸ್ಕಾರ ತುಂಬಿದರೆ ಅವರು ದೇಶದ ಬಹು ದೊಡ್ಡ ಆಸ್ತಿಯಾಗಬಲ್ಲರು. ಅಲ್ಲದೆ, ಯುವ ಜನಾಂಗ ಜಾಗೃತಗೊಂಡು ಹೆಚ್ಚೆ ಹಾಕಿದರೆ ಮಾತ್ರ ನಮ್ಮ ಧರ್ಮ, ಸಂಸ್ಕೃತಿ, ಪರಂಪರೆ, ನಾಡು-ನುಡಿ ಸದೃಢವಾಗಿ ಶ್ರೀಮಂತಗೊಳ್ಳಲು ಸಾಧ್ಯ ಎಂದರು.
ಎಡೆಯೂರು ಸ್ವಾಮೀಜಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ.ಎಸ್.ಚೆನ್ನಕೇಶವಗೌಡ ಮಾತನಾಡಿದರು. ಮಳಲಿ ಮಠದ ಸ್ವಾಮೀಜಿ, ರೋಟರಿ ಅಧ್ಯಕ್ಷ ಕೆ.ಆರ್.ಪ್ರದೀಪ್ ಪಟೇಲ್, ಜೇಸಿ ಕಾರ್ಯದರ್ಶಿ ರಾಘವೇಂದ್ರ, ವಿಶ್ವಕರ್ಮ ಸಮಾಜ ಜಿಲ್ಲಾಧ್ಯಕ್ಷ ಎಂ.ಜೆ.ಮಹೇಶಾಚಾರ್, ಬಿ.ಕಣಬೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ.ಎಸ್.ಅರುಣೇಶ್ ಮತ್ತಿತರರು ಹಾಜರಿದ್ದರು.
ಐಶ್ವರ್ಯ ಮತ್ತು ತಂಡ ಪ್ರಾರ್ಥಿಸಿ, ಶಿಕ್ಷ ಕ ಕುಲಕರ್ಣಿ ನಿರೂಪಿಸಿದರು. ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಗಿರೀಶ್ ಸ್ವಾಗತಿಸಿ, ಸಂಘದ ಕಾರ್ಯದರ್ಶಿ ಸುನಿಲ್ರಾಜ್ ಭಂಡಾರಿ ವಂದಿಸಿದರು.