ಆ್ಯಪ್ನಗರ

ಹಾಸ್ಟೆಲ್‌ ನೌಕರರ ಮುಷ್ಕರ ಮುಂದಕ್ಕೆ

ಹಾಸ್ಟೆಲ್‌ ಹೊರಗುತ್ತಿಗೆ ಸಿಬ್ಬಂದಿ ಅನಿರ್ಧಿಷ್ಟ ಸಾಮೂಹಿಕ ಧರಣಿ ಆ.21 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿದೆ ಎಂದು ಹೊರಗುತ್ತಿಗೆ ನೌಕರರ ತರೀಕೆರೆ-ಅಜ್ಜಂಪುರ ತಾಲೂಕು ಅಧ್ಯಕ್ಷ ಎಸ್‌. ಶಿವಮೂರ್ತಿ ತಿಳಿಸಿದ್ದಾರೆ.

Vijaya Karnataka 17 Aug 2019, 5:00 am
ಅಜ್ಜಂಪುರ : ಹಾಸ್ಟೆಲ್‌ ಹೊರಗುತ್ತಿಗೆ ಸಿಬ್ಬಂದಿ ಅನಿರ್ಧಿಷ್ಟ ಸಾಮೂಹಿಕ ಧರಣಿ ಆ.21 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿದೆ ಎಂದು ಹೊರಗುತ್ತಿಗೆ ನೌಕರರ ತರೀಕೆರೆ-ಅಜ್ಜಂಪುರ ತಾಲೂಕು ಅಧ್ಯಕ್ಷ ಎಸ್‌. ಶಿವಮೂರ್ತಿ ತಿಳಿಸಿದ್ದಾರೆ.
Vijaya Karnataka Web hostel employees strike shift
ಹಾಸ್ಟೆಲ್‌ ನೌಕರರ ಮುಷ್ಕರ ಮುಂದಕ್ಕೆ


ಹಿಂದುಳಿದ ಅಲ್ಪ ಸಂಖ್ಯಾತ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ನೇರ ನೇಮಕಾತಿ ಮೂಲಕ ಸುಮಾರು 4000 ಅಡುಗೆಯವರು ಅಡುಗೆ ಸಹಾಯಕರನ್ನು ಭರ್ತಿ ಮಾಡಿರುವುದರಿಂದ ಆ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹೊರ ಸಂಪನ್ಮೂಲ ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಲಾಗಿದೆ. ಕಳೆದ ಹತ್ತಾರು ವರ್ಷಗಳಿಂದ ಅತ್ಯಂತ ಕಡಿಮೆ ಸಂಬಳಕ್ಕೆ ದುಡಿದು ವಿದ್ಯಾರ್ಥಿಗಳ ಸೇವೆ ಮಾಡಿದ್ದ ಹೊರಗುತ್ತಿಗೆ ಸಿಬ್ಬಂದಿಗಳ ವಿಷಯದಲ್ಲಿ ಮಾನವೀಯತೆ ದೃಷ್ಟಿಯಿಂದ ಮಧ್ಯ ಪ್ರವೇಶ ಮಾಡಿದ ರಾಜ್ಯ ಸರಕಾರ 6 ತಿಂಗಳ ಅವಧಿಗೆ ಎರಡು ಬಾರಿ ತಾತ್ಕಾಲಿಕವಾಗಿ ಸೇವೆಯಲ್ಲಿ ಮುಂದುವರಿಸಲು ಅವಕಾಶ ಮಾಡಿಕೊಟ್ಟಿತ್ತು. ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೈಗೊಳ್ಳುವ ಭರವಸೆ ನೀಡಿತ್ತು.ಆದರೆ ಈ ಭರವಸೆ ಇನ್ನು ಈಡೇರದೇ ಇರುವುದರಿಂದ ಬೀದಿ ಪಾಲಾಗಿರುವ ಸಿಬ್ಬಂದಿಗಳು ಕಣ್ಣೀರು ಹಾಕುತ್ತಿದ್ದಾರೆ. ಜೂ. 7ರಿಂದ ಮತ್ತೆ ಅವರಿಗೆ ಕೆಲಸ ನಿರಾಕರಿಸಲಾಗಿದೆ. ಸರಕಾರದ ಗಮನ ಸೆಳೆಯಲು, ಸಾಮೂಹಿಕ ಧರಣಿ ಆರಂಭಿಸಲು ನಿರ್ಧರಿಸಿದೆ. ಬೆಳಗ್ಗೆ 11 ಗಂಟೆಗೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಹೊರಡಿಲಾಗುವುದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ