ಆ್ಯಪ್ನಗರ

ಗೋವುಗಳ ಅಕ್ರಮ ಸಾಗಣೆ: ಮೂವರ ಬಂಧನ

ಕಳಸದಿಂದ ಚಿಕ್ಕಬಳ್ಳಾಪುರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಹಿಂದೂಪರ ಸಂಘಟನೆಯ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿ ಮೇರೆಗೆ ರಕ್ಷಿಸುವಲ್ಲಿ ಬಾಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

Vijaya Karnataka 25 Apr 2019, 5:00 am
ಕೊಟ್ಟಿಗೆಹಾರ : ಕಳಸದಿಂದ ಚಿಕ್ಕಬಳ್ಳಾಪುರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಹಿಂದೂಪರ ಸಂಘಟನೆಯ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿ ಮೇರೆಗೆ ರಕ್ಷಿಸುವಲ್ಲಿ ಬಾಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
Vijaya Karnataka Web illegal transport of cows three arrested
ಗೋವುಗಳ ಅಕ್ರಮ ಸಾಗಣೆ: ಮೂವರ ಬಂಧನ


ವಾಹನ ಮತ್ತು ಗೋವುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಆರೋಪಿಗಳಾದ ಚಿಕ್ಕಬಳ್ಳಾಪುರ ತಾಲೂಕು ಮಲ್ಲಪ್ಪನಹಳ್ಳಿಯ ವೆಂಕಟೇಶ್‌, ಭಾರ್ಗವ, ನರಸಿಂಹಮೂರ್ತಿ ಎಂಬುವವರನ್ನು ಬಂಧಿಸಿ, ವಿಚಾರಣೆ ಮುಂದುವರಿಸಿದ್ದಾರೆ.

ಕ್ಯಾಂಟರ್‌ ವಾಹನದಲ್ಲಿದ್ದ 23 ಗೋವುಗಳನ್ನು ರಕ್ಷಿಸಲಾಗಿದ್ದು ವಾಹನದಲ್ಲಿ ಹಿಂಸಾತ್ಮಕವಾಗಿ ಗೋವುಗಳನ್ನು ತುಂಬಿಸಿದ್ದರಿಂದ ಕೆಲವು ಗಾಯಗೊಂಡಿವೆ. ವಾಹನದಲ್ಲಿ ಮಾರಕಾಸ್ತ್ರಗಳು ಕೂಡ ಪತ್ತೆಯಾಗಿದ್ದು ಇದರ ಹಿಂದೆ ದೊಡ್ಡ ಗೋಸಾಗಣೆ ಜಾಲ ಇರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಕಡಿಮೆ ಸ್ಥಳಾವಕಾಶ ಇರುವ ಕ್ಯಾಂಟರ್‌ನಲ್ಲಿ 23 ಗೋವುಗಳನ್ನು ಅಮಾನವೀಯವಾಗಿ ತುಂಬಲಾಗಿತ್ತು. ಕ್ಯಾಂಟರ್‌ ಮುಂಭಾಗ ಮತ್ತು ಹಿಂಭಾಗದಲ್ಲಿ 2 ಬೇರೆ ಬೇರೆ ವಾಹನ ಸಂಖ್ಯೆಗಳನ್ನು ನಮೂದಿಸಲಾಗಿತ್ತು.

ಈ ಕುರಿತಂತೆ ಬಜರಂಗದಳ ತಾಲೂಕು ಸಂಚಾಲಕ ಅವಿನಾಶ್‌ ಮಾತನಾಡಿ, ಮಲೆನಾಡು ಭಾಗದಲ್ಲಿ ದನಗಳ್ಳತನ ಹಾಗೂ ಅಕ್ರಮ ಗೋಸಾಗಣೆ ಎಗ್ಗಿಲ್ಲದೇ ನಡೆಯುತ್ತಿದ್ದು, ಪೊಲೀಸ್‌ ಇಲಾಖೆ ಇದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದು ಹೀಗೆ ಮುಂದುವರಿದರೆ ಬೃಹತ್‌ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ