ಆ್ಯಪ್ನಗರ

ವಿವಿಧೆಡೆ ನ್ಯಾಯಾಲಯ ಕಟ್ಟಡ ಶಿಲನ್ಯಾಸ,ಉದ್ಘಾಟನೆ

ಜಿಲ್ಲಾ ನ್ಯಾಯಾಂಗ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಜು. 27 ರಂದು ಬೆಳಗ್ಗೆ 10ಕ್ಕೆ ನಗರದ ಮಾದರಿ ನ್ಯಾಯಾಲಯ ಕಟ್ಟಡ ಆವರಣದಲ್ಲಿ ನೂತನ ವಕೀಲರ ಭವನ ಕಟ್ಟಡದ ಶಂಕುಸ್ಥಾಪನಾ ಸಮಾರಂಭವನ್ನು ನಡೆಯಲಿದೆ.

Vijaya Karnataka 26 Jul 2019, 5:00 am
ಚಿಕ್ಕಮಗಳೂರು :ಜಿಲ್ಲಾ ನ್ಯಾಯಾಂಗ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಜು. 27 ರಂದು ಬೆಳಗ್ಗೆ 10ಕ್ಕೆ ನಗರದ ಮಾದರಿ ನ್ಯಾಯಾಲಯ ಕಟ್ಟಡ ಆವರಣದಲ್ಲಿ ನೂತನ ವಕೀಲರ ಭವನ ಕಟ್ಟಡದ ಶಂಕುಸ್ಥಾಪನಾ ಸಮಾರಂಭವನ್ನು ನಡೆಯಲಿದೆ.
Vijaya Karnataka Web inauguration of court building in various places
ವಿವಿಧೆಡೆ ನ್ಯಾಯಾಲಯ ಕಟ್ಟಡ ಶಿಲನ್ಯಾಸ,ಉದ್ಘಾಟನೆ


ಕರ್ನಾಟಕ ಉಚ್ಛನ್ಯಾಯಾಲಯ ಆಡಳಿತಾತ್ಮಕ ನ್ಯಾಯಮೂರ್ತಿ ಎನ್‌.ಕೆ.ಸುಧೀಂದ್ರರಾವ್‌ ಶಂಕುಸ್ಥಾಪನೆ ನೆರವೇರಿಸಲಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ್‌ ಎಂ.ಅಡಿಗ ಅಧ್ಯಕ್ಷ ತೆ ವಹಿಸಲಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಎಸ್‌.ಎಸ್‌.ವೆಂಕಟೇಶ್‌, ರಾಜ್ಯ ವಕೀಲರ ಪರಿಷತ್‌ನ ಸದಸ್ಯ ಎಸ್‌.ಎಲ್‌.ಭೋಜೇಗೌಡ, ಲೋಕೋಪಯೋಗಿ ಇಲಾಖೆಯ ಅಧೀಕ್ಷ ಕ ಅಭಿಯಂತರ ರಾಜಕುಮಾರ ರೆಡ್ಡಿ ಭಾಗವಹಿಸಲಿದ್ದಾರೆ.

ತರೀಕೆರೆ : ತರೀಕೆರೆ ನ್ಯಾಯಾಲಯ ಸಂಕೀರ್ಣದ ಎರಡನೇ ಮಹಡಿಯ ಶಿಲಾನ್ಯಾಸ ಸಮಾರಂಭ ಜು.27 ರಂದು ಸಂಜೆ 4 ಗಂಟೆಗೆ ನೆರವೇರಲಿದೆ. ಕರ್ನಾಟಕ ಉಚ್ಛನ್ಯಾಯಾಲಯ ಆಡಳಿತಾತ್ಮಕ ನ್ಯಾಯಮೂರ್ತಿ ಎನ್‌.ಕೆ.ಸುಧೀಂದ್ರರಾವ್‌ ಶಿಲಾನ್ಯಾಸ ನೆರವೇರಿಸಲಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ್‌ ಎಂ.ಅಡಿಗ ಅಧ್ಯಕ್ಷ ತೆ ವಹಿಸಲಿದ್ದಾರೆ. ತರೀಕೆರೆ ವಕೀಲರ ಸಂಘದ ಅಧ್ಯಕ್ಷ ಟಿ.ಎನ್‌.ಮಹದೇವಸ್ವಾಮಿ, ಲೋಕೋಪಯೋಗಿ ಇಲಾಖೆಯ ಅಧೀಕ್ಷ ಕ ಅಭಿಯಂತರ ರಾಜಕುಮಾರ ರೆಡ್ಡಿ ಭಾಗವಹಿಸಲಿದ್ದಾರೆ.

ಕಡೂರು : ಕಡೂರು ನ್ಯಾಯಾಲಯ ಕಟ್ಟಡದಮೊದಲನೇ ಮಹಡಿಯ ಉದ್ಘಾಟನಾ ಸಮಾರಂಭ ಜು.27 ರಂದು ಮಧ್ಯಾಹ್ನ 12.30ಕ್ಕೆ ನಡೆಯಲಿದೆ.ಕರ್ನಾಟಕ ಉಚ್ಛನ್ಯಾಯಾಲಯ ಆಡಳಿತಾತ್ಮಕ ನ್ಯಾಯಮೂರ್ತಿ ಎನ್‌.ಕೆ.ಸುಧೀಂದ್ರರಾವ್‌ ಉದ್ಘಾಟಿಸಲಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ್‌ ಎಂ.ಅಡಿಗ ಅಧ್ಯಕ್ಷ ತೆ ವಹಿಸಲಿದ್ದಾರೆ.ಕಡೂರು, ವಕೀಲರ ಸಂಘದ ಅಧ್ಯಕ್ಷ ಡಿ.ಎನ್‌.ಪ್ರಕಾಶ್‌, ಲೋಕೋಪಯೋಗಿ ಇಲಾಖೆಯ ಅಧೀಕ್ಷ ಕ ಅಭಿಯಂತರ ರಾಜಕುಮಾರ ರೆಡ್ಡಿ ಭಾಗವಹಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ