ಆ್ಯಪ್ನಗರ

ನೈತಿಕತೆ ಕೊರತೆಯಿಂದ ಅಪರಾಧ ಹೆಚ್ಚಳ

ನೈತಿಕತೆ ಕೊರತೆಯಿಂದ ಸಮಾಜದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟಲು ಪೊಲೀಸ್‌ ಇಲಾಖೆ ಮುಂದಾಗಬೇಕು ಎಂದು ಕಾರ್ಮಿಕ ನ್ಯಾಯಾಲಯದ ಅಧ್ಯಕ್ಷಾಧಿಕಾರಿ ನ್ಯಾಯಾಧೀಶ ಎ.ಎಸ್‌.ಸದಲಗೆ ಹೇಳಿದರು.

Vijaya Karnataka 12 Jan 2019, 5:00 am
ಚಿಕ್ಕಮಗಳೂರು : ನೈತಿಕತೆ ಕೊರತೆಯಿಂದ ಸಮಾಜದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟಲು ಪೊಲೀಸ್‌ ಇಲಾಖೆ ಮುಂದಾಗಬೇಕು ಎಂದು ಕಾರ್ಮಿಕ ನ್ಯಾಯಾಲಯದ ಅಧ್ಯಕ್ಷಾಧಿಕಾರಿ ನ್ಯಾಯಾಧೀಶ ಎ.ಎಸ್‌.ಸದಲಗೆ ಹೇಳಿದರು.
Vijaya Karnataka Web ckm-11rudrap7


ನಗರದ ಎಸ್ಪಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷ ಣಾ ಘಟಕದ ಆಶ್ರಯದಲ್ಲಿ ಬಾಲನ್ಯಾಯ ಪೋಕ್ಸೋ ಕಾಯಿದೆ ಬಗ್ಗೆ ಶುಕ್ರವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಕಲ್ಯಾಣಕ್ಕೆ ಸರಕಾರ ಹಲವು ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಜಾರಿಗೊಳಿಸುವ ಮೂಲಕ ಕಾನೂನಿಗೆ ಗೌರವ ಕೊಡಬೇಕು. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದಾಗ ಯಾವುದೇ ತೊಂದರೆ ಉದ್ಭವಿಸುವುದಿಲ್ಲ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಧೀಶ ಬಸವರಾಜ ಚೇಂಗಟಿ ಮಾತನಾಡಿ, ನಮಗೆ ಗೊತ್ತಿರುವ ವಿಷಯ ನಮ್ಮ ಮೆದುಳು ಮನನ ಮಾಡಿಕೊಳ್ಳಲು ತರಬೇತಿ ಅವಶ್ಯಕವಾಗಿದೆ. ಇದನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷಿದಾರರು ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳಲು ಹಿಂಜರಿಯುತ್ತಿದ್ದಾರೆ. ಅವರಿಗೆ ದೈರ್ಯ ತುಂಬುವ ಕೆಲಸ ಪೊಲೀಸ್‌ ಇಲಾಖೆ ಮಾಡಬೇಕು. ಕಾನೂನಿನ ತಿಳಿವಳಿಕೆ ಇಲ್ಲದವರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಚಿತವಾಗಿ ಕಾನೂನು ಸೇವೆ ಒದಗಿಸಲಿದೆ ಎಂದು ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಜಿ.ಸುಬ್ರಹ್ಮಣ್ಯ ಮಾತನಾಡಿ, ತರಬೇತಿ ಕಾರ್ಯಾಗಾರವು ನಿಮ್ಮನ್ನು ಎಚ್ಚರಿಸುವ ಜತೆಗೆ ಕಾರ್ಯನಿರ್ವಹಿಸಲು ಉತ್ತೇಜನ ನೀಡಲು ಸಹಕಾರಿಯಾಗಲಿದೆ. ಮಕ್ಕಳ ಕಲ್ಯಾಣ ಸಮಿತಿ ಹಾಗೂ ಪೊಲೀಸ್‌ ಇಲಾಖೆ ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ಪಾಂಡೆ ಅಧ್ಯಕ್ಷ ತೆ ವಹಿಸಿದ್ದರು. ಬಾಲನ್ಯಾಯ ಮಂಡಳಿ ಸದಸ್ಯ ಎಚ್‌.ಸಿ.ನಟರಾಜ್‌, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್‌.ಎಸ್‌.ವೆಂಕಟೇಶ್‌, ಜಿಲ್ಲಾ ಮಕ್ಕಳ ರಕ್ಷ ಣಾಧಿಕಾರಿ ಎಸ್‌.ಎನ್‌.ಶಿವಪ್ರಕಾಶ್‌ ಮತ್ತಿತರರು ಹಾಜರಿದ್ದರು. ಮಂಗಳೂರಿನ ಶಾಂತಿ ಸಂದೇಶ ಟ್ರಸ್ಟ್‌ ನಿರ್ದೇಶಕಿ ಸಿಸ್ಟರ್‌ ಡುಲ್ಸೀನ ಕ್ರಾಸ್ತ ಬಾಲ ನ್ಯಾಯ (ಮಕ್ಕಳ ಪಾಲನೆ-ಪೋಷಣೆ) ಕಾಯಿದೆ-2015ರ ಬಗ್ಗೆ ಉಪನ್ಯಾಸ ನೀಡಿದರು. ಉಮಾಶಂಕರ್‌ ಪ್ರಾರ್ಥಿಸಿ, ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಸತ್ಯನಾರಾಯಣ್‌ ಸ್ವಾಗತಿಸಿದರು. ಜಯಶೀಲಾ ನಿರೂಪಿಸಿದರು.

==============================
ಇಂದಿನ ಯುವಜನಾಂಗ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡದೆ ಟಿವಿ, ಮೊಬೈಲ್‌, ಫೇಸ್‌ ಬುಕ್‌, ವಾಟ್ಸಾಪ್‌ ಬಳಕೆಯಿಂದ ದಾರಿ ತಪ್ಪುತ್ತಿದೆ. ಅವರಿಗೆ ಉತ್ತಮ ಮಾರ್ಗದರ್ಶನ ನೀಡುವುದರ ಜತೆಗೆ ನೈತಿಕತೆ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ಪೋಷಕರದ್ದಾಗಿದೆ.
-ಎ.ಎಸ್‌.ಸದಲಗೆ,ನ್ಯಾಯಾಧೀಶ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ