ಚಿಕ್ಕಮಗಳೂರು : ಕಂದಾಯ, ಅರಣ್ಯ ಇಲಾಖೆಗಳ ಜಂಟಿ ಸರ್ವೆ ಕಾರ್ಯ ಸಂಪೂರ್ಣವಾಗಿದ್ದು, ಭೂಮಿ ವಹಿಸಿಕೊಡುವ ಬಗ್ಗೆ ತಾಳೆ ಪ್ರಕ್ರಿಯೆ ಬಾಕಿ ಉಳಿದಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.
ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಜಂಟಿ ಸರ್ವೆ ಕಾರ್ಯ ಜಿಲ್ಲಾದ್ಯಂತ ಪೂರ್ಣಗೊಂಡಿದೆ. ದಾಖಲೆಯಲ್ಲಿರುವ ವಿಸ್ತೀರ್ಣಕ್ಕೂ, ವಾಸ್ತವದ ವಿಸ್ತೀರ್ಣಕ್ಕೂ ಕೆಲವೆಡೆ ವ್ಯತ್ಯಾಸಗಳು ಕಂಡು ಬಂದಿವೆ. ಈ ವಿಚಾರವಾಗಿ ಅರಣ್ಯ ಮತ್ತು ಕಂದಾಯ ಇಲಾಖೆಯ ಹೊಂದಾಣಿಕೆ ಸಭೆ ಒಂದು ಬಾರಿ ನಡೆದಿದೆ. ಸೋಮವಾರ ಮತ್ತೊಂದು ಸಭೆ ನಡೆಯಲಿದೆ. ನಂತರ ಕಂದಾಯ ಹಾಗೂ ಅರಣ್ಯ ಇಲಾಖೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕಾರ್ಯ ಪೂರ್ಣಗೊಳಿಸಲಾಗುವುದು ಎಂದರು.
ಭದ್ರಾ ನದಿಯಲ್ಲಿ ರಾರಯಫ್ಟಿಂಗ್ ನಡೆಸಲು ನೀಡಿರುವ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ತಮಗೆ ದೂರು ಬಂದಿದೆ. ಪರಿಶೀಲನೆ ನಡೆಸಲಾಗಿದೆ. ಕಾನೂನು ತಜ್ಞರ ವರದಿ ಕೇಳಲಾಗಿದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಳೆ ಕುಂಠಿತ
ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಬಂದಿಲ್ಲ. ಒಟ್ಟಾರೆ ಜಿಲ್ಲೆಯಲ್ಲಿ ಜನವರಿ 1ರಿಂದ ಜು.10ರವರೆಗೆ 637 ಮಿ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಆದರೆ 423 ಮಿ.ಮೀ. ಮಾತ್ರ ಮಳೆ ಆಗಿದೆ. ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ಮೂಡಿಗೆರೆ, ಕೊಪ್ಪ, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ನದಿ ನೀರುಗಳಲ್ಲಿ ಹರಿವು ಹೆಚ್ಚಾಗಿದೆ. ತಾವು ಸಹ ಕೆಲವೆಡೆ ಪ್ರವಾಸ ಮಾಡಿ ಪರಿಶೀಲಿಸಿದ್ದು, ಎಲ್ಲಿಯೂ ಪ್ರವಾಹದ ಭೀತಿ ಎದುರಾಗಿಲ್ಲ. ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಮಳೆಗಾಲ ಆರಂಭವಾಗಿದ್ದರೂ ಈಗಲೂ ಬಯಲು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದ್ದು, ಈಗಲೂ 83 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ 33 ಗ್ರಾಮಗಳು, ಕಡೂರು ತಾಲೂಕಿನ 46 ಹಾಗೂ ತರೀಕೆರೆ ತಾಲೂಕಿನ 4 ಗ್ರಾಮಗಳಿಗೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗುತ್ತಿದೆ. ಸರಕಾರದ ಆದೇಶದನ್ವಯ ಪ್ರತಿ 15 ದಿನಗಳಿಗೊಮ್ಮೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದವರಿಗೆ ಬಿಲ್ ಪಾವತಿಸಲಾಗುತ್ತಿದೆ ಎಂದರು.
2018-19ನೇ ಸಾಲಿನಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದವರಿಗೆ ಈವರೆಗೂ ಬಿಲ್ ಪಾವತಿಸಿಲ್ಲ. ಸರಕಾರದ ಆದೇಶದನ್ವಯ ನೀರು ಪೂರೈಕೆ ಆಗಿಲ್ಲ ಎಂಬ ಕಾರಣಕ್ಕೆ ತಡೆಹಿಡಿಯಲಾಗಿತ್ತು. ಈಗ ಉಪವಿಭಾಗಾಧಿಕಾರಿ, ತಹಸೀಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ನೀರು ಸರಬರಾಜು ಮಾಡಿರುವುದನ್ನು ಖಚಿತಪಡಿಸಿಕೊಂಡು ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ಬಗ್ಗೆ ಪರಿಶೀಲಿಸುತ್ತಿದ್ದು, ಅವರು ವರದಿ ಸಲ್ಲಿಸಿದ ಕೂಡಲೆ ಬಿಲ್ ಪಾವತಿಸಲಾಗುವುದು. ಹಣದ ಕೊರತೆ ಇಲ್ಲ ಎಂದರು.ಅಪರ ಜಿಲ್ಲಾಧಿಕಾರಿ ಡಾ.ಕುಮಾರ್ ಹಾಜರಿದ್ದರು.
ಕುದುರೆಮುಖ ಚರ್ಚೆ ವಿಷಯ
ಕುದುರೆಮುಖದ ಟೌನ್ಶಿಪ್ ಅನ್ನು ಕಳಸ ತಾಲೂಕು ಕಚೇರಿ ಸೇರಿದಂತೆ ಮತ್ತಿತರೆ ಕಚೇರಿ ಕಟ್ಟಡಗಳಿಗೆ ಬಳಸಿಕೊಳ್ಳುವ ಬಗ್ಗೆ ನಿರ್ಣಯವಾಗಿಲ್ಲ. ಅದು ಈಗಲೂ ಕೇವಲ ಚರ್ಚೆಯ ವಿಷಯ ಅಷ್ಟೆ. ಟೌನ್ಶಿಪ್ ಸ್ಥಳದ ಬಗ್ಗೆ ಕೆಲವು ತೊಡಕುಗಳಿದ್ದು, ಈ ಬಗ್ಗೆ ಕಾರ್ಕಳ ಉಪ ಅರಣ್ಯ ಸಂರಕ್ಷ ಣಾಧಿಕಾರಿಯೊಂದಿಗೆ ಕಾನೂನು ನಿಯಮಗಳ ಬಗ್ಗೆ ಚರ್ಚಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪರಿಶೀಲಿಸಿ ತೀರ್ಪಿಗೆ ಒಳಪಟ್ಟೆ ಆ ಸ್ಥಳವನ್ನು ಬಳಸಿಕೊಳ್ಳಬೇಕಾಗಿದೆ. ಎಲ್ಲ ವಿಚಾರಗಳನ್ನು ಪರಿಶೀಲಿಸಿ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗುವುದು. ಈ ಕುರಿತಂತೆ ಯಾವುದೇ ನಿರ್ಣಯ ಕೈಗೊಂಡಿಲ್ಲ. ತೀರ್ಮಾನ ಕೈಗೊಳ್ಳುವ ಮೊದಲು ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆದುಕೊಳ್ಳಲಾಗುವುದು. ಅಂತಹ ನಿರ್ಣಯ ಸರಕಾರದ್ದು ಎಂದು ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಜಂಟಿ ಸರ್ವೆ ಕಾರ್ಯ ಜಿಲ್ಲಾದ್ಯಂತ ಪೂರ್ಣಗೊಂಡಿದೆ. ದಾಖಲೆಯಲ್ಲಿರುವ ವಿಸ್ತೀರ್ಣಕ್ಕೂ, ವಾಸ್ತವದ ವಿಸ್ತೀರ್ಣಕ್ಕೂ ಕೆಲವೆಡೆ ವ್ಯತ್ಯಾಸಗಳು ಕಂಡು ಬಂದಿವೆ. ಈ ವಿಚಾರವಾಗಿ ಅರಣ್ಯ ಮತ್ತು ಕಂದಾಯ ಇಲಾಖೆಯ ಹೊಂದಾಣಿಕೆ ಸಭೆ ಒಂದು ಬಾರಿ ನಡೆದಿದೆ. ಸೋಮವಾರ ಮತ್ತೊಂದು ಸಭೆ ನಡೆಯಲಿದೆ. ನಂತರ ಕಂದಾಯ ಹಾಗೂ ಅರಣ್ಯ ಇಲಾಖೆಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕಾರ್ಯ ಪೂರ್ಣಗೊಳಿಸಲಾಗುವುದು ಎಂದರು.
ಭದ್ರಾ ನದಿಯಲ್ಲಿ ರಾರಯಫ್ಟಿಂಗ್ ನಡೆಸಲು ನೀಡಿರುವ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ತಮಗೆ ದೂರು ಬಂದಿದೆ. ಪರಿಶೀಲನೆ ನಡೆಸಲಾಗಿದೆ. ಕಾನೂನು ತಜ್ಞರ ವರದಿ ಕೇಳಲಾಗಿದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಳೆ ಕುಂಠಿತ
ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಬಂದಿಲ್ಲ. ಒಟ್ಟಾರೆ ಜಿಲ್ಲೆಯಲ್ಲಿ ಜನವರಿ 1ರಿಂದ ಜು.10ರವರೆಗೆ 637 ಮಿ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಆದರೆ 423 ಮಿ.ಮೀ. ಮಾತ್ರ ಮಳೆ ಆಗಿದೆ. ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ಮೂಡಿಗೆರೆ, ಕೊಪ್ಪ, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ನದಿ ನೀರುಗಳಲ್ಲಿ ಹರಿವು ಹೆಚ್ಚಾಗಿದೆ. ತಾವು ಸಹ ಕೆಲವೆಡೆ ಪ್ರವಾಸ ಮಾಡಿ ಪರಿಶೀಲಿಸಿದ್ದು, ಎಲ್ಲಿಯೂ ಪ್ರವಾಹದ ಭೀತಿ ಎದುರಾಗಿಲ್ಲ. ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಮಳೆಗಾಲ ಆರಂಭವಾಗಿದ್ದರೂ ಈಗಲೂ ಬಯಲು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದ್ದು, ಈಗಲೂ 83 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ 33 ಗ್ರಾಮಗಳು, ಕಡೂರು ತಾಲೂಕಿನ 46 ಹಾಗೂ ತರೀಕೆರೆ ತಾಲೂಕಿನ 4 ಗ್ರಾಮಗಳಿಗೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗುತ್ತಿದೆ. ಸರಕಾರದ ಆದೇಶದನ್ವಯ ಪ್ರತಿ 15 ದಿನಗಳಿಗೊಮ್ಮೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದವರಿಗೆ ಬಿಲ್ ಪಾವತಿಸಲಾಗುತ್ತಿದೆ ಎಂದರು.
2018-19ನೇ ಸಾಲಿನಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದವರಿಗೆ ಈವರೆಗೂ ಬಿಲ್ ಪಾವತಿಸಿಲ್ಲ. ಸರಕಾರದ ಆದೇಶದನ್ವಯ ನೀರು ಪೂರೈಕೆ ಆಗಿಲ್ಲ ಎಂಬ ಕಾರಣಕ್ಕೆ ತಡೆಹಿಡಿಯಲಾಗಿತ್ತು. ಈಗ ಉಪವಿಭಾಗಾಧಿಕಾರಿ, ತಹಸೀಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ನೀರು ಸರಬರಾಜು ಮಾಡಿರುವುದನ್ನು ಖಚಿತಪಡಿಸಿಕೊಂಡು ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ಬಗ್ಗೆ ಪರಿಶೀಲಿಸುತ್ತಿದ್ದು, ಅವರು ವರದಿ ಸಲ್ಲಿಸಿದ ಕೂಡಲೆ ಬಿಲ್ ಪಾವತಿಸಲಾಗುವುದು. ಹಣದ ಕೊರತೆ ಇಲ್ಲ ಎಂದರು.ಅಪರ ಜಿಲ್ಲಾಧಿಕಾರಿ ಡಾ.ಕುಮಾರ್ ಹಾಜರಿದ್ದರು.
ಕುದುರೆಮುಖ ಚರ್ಚೆ ವಿಷಯ
ಕುದುರೆಮುಖದ ಟೌನ್ಶಿಪ್ ಅನ್ನು ಕಳಸ ತಾಲೂಕು ಕಚೇರಿ ಸೇರಿದಂತೆ ಮತ್ತಿತರೆ ಕಚೇರಿ ಕಟ್ಟಡಗಳಿಗೆ ಬಳಸಿಕೊಳ್ಳುವ ಬಗ್ಗೆ ನಿರ್ಣಯವಾಗಿಲ್ಲ. ಅದು ಈಗಲೂ ಕೇವಲ ಚರ್ಚೆಯ ವಿಷಯ ಅಷ್ಟೆ. ಟೌನ್ಶಿಪ್ ಸ್ಥಳದ ಬಗ್ಗೆ ಕೆಲವು ತೊಡಕುಗಳಿದ್ದು, ಈ ಬಗ್ಗೆ ಕಾರ್ಕಳ ಉಪ ಅರಣ್ಯ ಸಂರಕ್ಷ ಣಾಧಿಕಾರಿಯೊಂದಿಗೆ ಕಾನೂನು ನಿಯಮಗಳ ಬಗ್ಗೆ ಚರ್ಚಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪರಿಶೀಲಿಸಿ ತೀರ್ಪಿಗೆ ಒಳಪಟ್ಟೆ ಆ ಸ್ಥಳವನ್ನು ಬಳಸಿಕೊಳ್ಳಬೇಕಾಗಿದೆ. ಎಲ್ಲ ವಿಚಾರಗಳನ್ನು ಪರಿಶೀಲಿಸಿ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗುವುದು. ಈ ಕುರಿತಂತೆ ಯಾವುದೇ ನಿರ್ಣಯ ಕೈಗೊಂಡಿಲ್ಲ. ತೀರ್ಮಾನ ಕೈಗೊಳ್ಳುವ ಮೊದಲು ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆದುಕೊಳ್ಳಲಾಗುವುದು. ಅಂತಹ ನಿರ್ಣಯ ಸರಕಾರದ್ದು ಎಂದು ಸ್ಪಷ್ಟಪಡಿಸಿದರು.