ಆ್ಯಪ್ನಗರ

ಕಡೂರು ಪುರಸಭೆ, 4 ಪಟ್ಟಣ ಪಂಚಾಯಿತಿಗೆ ಚುನಾವಣೆ

ಕಡೂರು ಪುರಸಭೆ, ಕೊಪ್ಪ, ಶೃಂಗೇರಿ, ಮೂಡಿಗೆರೆ ಮತ್ತು ನರಸಿಂಹರಾಜಪುರ ಪಟ್ಟಣ ಪಂಚಾಯಿತಿಗಳಿಗೆ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.

Vijaya Karnataka 3 May 2019, 5:00 am
ಚಿಕ್ಕಮಗಳೂರು : ಕಡೂರು ಪುರಸಭೆ, ಕೊಪ್ಪ, ಶೃಂಗೇರಿ, ಮೂಡಿಗೆರೆ ಮತ್ತು ನರಸಿಂಹರಾಜಪುರ ಪಟ್ಟಣ ಪಂಚಾಯಿತಿಗಳಿಗೆ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.
Vijaya Karnataka Web kadur municipality election to 4 town panchayats
ಕಡೂರು ಪುರಸಭೆ, 4 ಪಟ್ಟಣ ಪಂಚಾಯಿತಿಗೆ ಚುನಾವಣೆ


ಚಿಕ್ಕಮಗಳೂರು ನಗರಸಭೆ, ತರೀಕೆರೆ ಮತ್ತು ಬೀರೂರು ಪುರಸಭೆಗಳ ಅವಧಿ ಮುಗಿದಿದ್ದರೂ ಮೀಸಲಾತಿ ಹಂಚಿಕೆ ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಇವುಗಳಿಗೆ ಚುನಾವಣೆ ಘೋಷಣೆ ಮಾಡಿಲ್ಲ.ಕಡೂರು ಪುರಸಭೆಯ 23 ಸ್ಥಾನ, ಕೊಪ್ಪ ಪಟ್ಟಣ ಪಂಚಾಯಿತಿ-11, ಶೃಂಗೇರಿ ಪಟ್ಟಣ ಪಂಚಾಯಿತಿ-11, ಮೂಡಿಗೆರೆ ಪಟ್ಟಣ ಪಂಚಾಯಿತಿ-11 ಹಾಗೂ ನರಸಿಂಹರಾಜಪುರ ಪಟ್ಟಣ ಪಂಚಾಯಿತಿಯ 11 ಸ್ಥಾನಗಳಿಗೆ ಮೇ 29ರಂದು ಚುನಾವಣೆ ನಡೆಯಲಿದೆ.

ಚುನಾವಣಾ ಆಯೋಗ ಮೇ 2ರಂದು ದಿನಾಂಕ ಪ್ರಕಟಿಸಿದ್ದು, ತಕ್ಷಣದಿಂದಲೇ ನೀತಿಸಂಹಿತೆ ಜಾರಿಗೆ ಬರಲಿದ್ದು, ಮೇ 31ರವರೆಗೆ ಜಾರಿಯಲ್ಲಿರುತ್ತದೆ. ಮೇ 9ರಂದು ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಸಲು ಮೇ 16 ಕೊನೆದಿನ.

ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಮೇ 20 ಕೊನೆದಿನ. ಮೇ 29ರಂದು ಮತದಾನ ನಡೆಯಲಿದ್ದು, ಅಗತ್ಯವಿದ್ದರೆ ಮೇ 30ರಂದು ಮರು ಮತದಾನ ನಡೆಯಲಿದೆ. ಮೇ 31ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಲೋಕಸಭೆ ಚುನಾವಣೆಯ ನೀತಿಸಂಹಿತೆ ಮೇ 23ರವರೆಗೆ ಜಾರಿಯಲ್ಲಿದೆ. ಈ ನಡುವೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ದಿನಾಂಕವೂ ಘೋಷಣೆಯಾಗಿದ್ದು, ಇಡೀ ತಿಂಗಳು ನೀತಿಸಂಹಿತೆ ಜಾರಿಯಲ್ಲಿರುತ್ತದೆ. ಲೋಕಸಭೆ ಚುನಾವಣೆ ಪ್ರಕ್ರಿಯೆ ಇನ್ನೂ ಪೂರ್ಣಗೊಳ್ಳದ ಕಾರಣ ಈಗಾಗಲೇ ರಚಿಸಿರುವ ಎಫ್‌ಎಸ್‌ಟಿ ತಂಡಗಳು ಎಂದಿನಂತೆ ಕಾರ‍್ಯ ನಿರ್ವಹಿಸಲಿವೆ.

ವಾರ್ಡ್‌ವಾರು ಮೀಸಲಾತಿ ಹಂಚಿಕೆಯಲ್ಲಿ ಲೋಪ ಮಾಡಲಾಗಿದೆ ಎಂದು ಆರೋಪಿಸಿ ಕೆಲವರು ಕೋರ್ಟ್‌ ಮೆಟ್ಟಿಲೇರಿದ್ದರಿಂದ ಚಿಕ್ಕಮಗಳೂರು ನಗರಸಭೆ, ತರೀಕೆರೆ ಮತ್ತು ಬೀರೂರು ಪುರಸಭೆ ಚುನಾವಣೆ ವಿಳಂಬವಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ