ಆ್ಯಪ್ನಗರ

ಸರ್ವ ಜನಾಂಗದ ಅಭಿವೃದ್ಧಿ ಹರಿಕಾರ

ನಾಡ ಪ್ರಭು ಕೆಂಪೇಗೌಡ ಸರ್ವ ಜನಾಂಗದ ಅಭಿವೃದ್ಧಿಯ ಹರಿಕಾರರಾಗಿದ್ದರು ಎಂದು ಉಪನ್ಯಾಸಕಿ ದೀಪಾಹಿರೇಗುತ್ತಿ ಹೇಳಿದರು.

Vijaya Karnataka 2 Jul 2019, 6:32 pm
ಶೃಂಗೇರಿ:ನಾಡ ಪ್ರಭು ಕೆಂಪೇಗೌಡ ಸರ್ವ ಜನಾಂಗದ ಅಭಿವೃದ್ಧಿಯ ಹರಿಕಾರರಾಗಿದ್ದರು ಎಂದು ಉಪನ್ಯಾಸಕಿ ದೀಪಾಹಿರೇಗುತ್ತಿ ಹೇಳಿದರು.
Vijaya Karnataka Web CKM-30SRI3


ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಮತ್ತು ಒಕ್ಕಲಿಗರ ಸಂಘ ಜಂಟಿಯಾಗಿ ಭಾನುವಾರ ಏರ್ಪಡಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂದಿನ ಕಾಲದಲ್ಲಿಯೇ ದೂರದೃಷ್ಠಿ ಹೊಂದಿದ್ದ ಕೆಂಪೇಗೌಡರು ರಾಜ್ಯದ ರಾಜಧಾನಿ ಬೆಂಗಳೂರು ನಗರವನ್ನು ಅಚ್ಚುಕಟ್ಟಾಗಿ ಕಟ್ಟಿದ್ದರು. ಯಾವುದೇ ನದಿಯ ಆಸರೆ ಇಲ್ಲವಾಗಿದ್ದರಿಂದ ಅನೇಕ ಕೆರೆಕಟ್ಟೆ ನಿರ್ಮಿಸಿ, ಕೃಷಿ ಮತ್ತು ಅಭಿವೃದ್ಧಿಗೆ ದಾರಿದೀಪವಾದರು. ಅವರನ್ನು ಒಂದು ಜಾತಿಗೆ ಸೀಮಿತಗೊಳಿಸದೆ ಎಲ್ಲರೂ ಗೌರವಿಸಬೇಕು ಎಂದರು.

ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ವಿಶ್ವ ಮಾನ್ಯತೇ ಪಡೆದುಕೊಂಡಿರುವ ಬೆಂಗಳೂರು ನಗರವನ್ನು ನಿರ್ಮಿಸಿದ ಕೆಂಪೇಗೌಡ, ನಾಡನ್ನು ಕಟ್ಟುವವರಿಗೆ ಮಾದರಿಯಾಗಿದ್ದಾರೆ. ಕೆರೆಕಟ್ಟೆಗಳನ್ನು ವೈಜ್ಞಾನಿಕ ಮಾದರಿಯಲ್ಲಿ ನಿರ್ಮಿಸಿದ ಕೀರ್ತಿ ಅವರದ್ದು ಎಂದರು.

ಸಾನಿಧ್ಯ ವಹಿಸಿದ್ದ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥಸ್ವಾಮೀಜಿ, ಹದಿನೈದನೇ ಶತಮಾನದಲ್ಲಿ ಕೆಂಪೇಗೌಡರು ಸ್ಥಾಪಿಸಿದ ಬೆಂಗಳೂರು ಇಂದಿಗೂ ಜೀವಂತಿಕೆ ಉಳಿಸಿಕೊಂಡಿದೆ. ಜಾಗತಿಕ ಸ್ಥರದಲ್ಲಿ ವೈವಿಧ್ಯಮಯ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯ ಸರಕಾರ ನಾಡನ್ನು ಕಟ್ಟಿದ ಕೆಂಪೇಗೌಡರ ಜಯಂತಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.

ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಗೇರುಬೈಲು ಶಂಕರಪ್ಪ, ತಹಸೀಲ್ದಾರ್‌ ಭಾಗ್ಯಮ್ಮ, ತಾಪಂ ಕಾರ್ಯನಿರ್ವಹಣಾಧಿಕಾರಿ ಮೂಕಪ್ಪಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಎಂ.ಶ್ರೀನಿವಾಸ್‌, ತಾಪಂ ಉಪಾಧ್ಯಕ್ಷೆ ಚಂದ್ರಮತಿ, ಸದಸ್ಯ ಕೆ.ಆರ್‌.ವೆಂಕಟೇಶ್‌, ವಿದ್ಯಾರಣ್ಯಪುರ ಗ್ರಾಪಂ ಅಧ್ಯಕ್ಷ ರಾಜೇಶ್‌ ಶೆಟ್ಟಿ, ಕೆಲವಳ್ಳಿ ದೇವೇಂದ್ರ, ಅಶೋಕ್‌ ಹೆಗ್ಡೆ, ಸುಗಂಧಿನಿಕಾಡಪ್ಪಗೌಡ ಮತ್ತಿತರರು ಇದ್ದರು.

ಇದೇ ಸಂದರ್ಭ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ