ಆ್ಯಪ್ನಗರ

ಮಳೆ, ಕಾಫಿ ನಷ್ಟದ ಪರಿಹಾರಕ್ಕೆ ಕೆಜಿಎಫ್‌ ಆಗ್ರಹ

ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಕಾಫಿ ತೋಟದಲ್ಲಿ ಬೆಳೆಗಾರರಿಗೆ ನಷ್ಟ ಉಂಟಾಗಿದ್ದು ಕಾಫಿ ಮಂಡಳಿ ಸರಕಾರಕ್ಕೆ ನಷ್ಟದ ವರದಿ ನೀಡಿ ಪರಿಹಾರ ಕೊಡಿಸಬೇಕು ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟ ಆಗ್ರಹಿಸಿದೆ.

Vijaya Karnataka 13 Jun 2018, 5:00 am
ಚಿಕ್ಕಮಗಳೂರು : ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಕಾಫಿ ತೋಟದಲ್ಲಿ ಬೆಳೆಗಾರರಿಗೆ ನಷ್ಟ ಉಂಟಾಗಿದ್ದು ಕಾಫಿ ಮಂಡಳಿ ಸರಕಾರಕ್ಕೆ ನಷ್ಟದ ವರದಿ ನೀಡಿ ಪರಿಹಾರ ಕೊಡಿಸಬೇಕು ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟ ಆಗ್ರಹಿಸಿದೆ.
Vijaya Karnataka Web kgf demand for coffee loss
ಮಳೆ, ಕಾಫಿ ನಷ್ಟದ ಪರಿಹಾರಕ್ಕೆ ಕೆಜಿಎಫ್‌ ಆಗ್ರಹ


ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಬಿ.ಎಸ್‌.ಜೈರಾಂ, ಪ್ರಧಾನ ಕಾರ್ಯದರ್ಶಿ ತೀರ್ಥಮಲ್ಲೇಶ್‌ ಅವರು ಈ ಬಗ್ಗೆ ಹೇಳಿಕೆ ನೀಡಿ, ಕಾಫೀ ತೋಟಗಳಲ್ಲಿ ಬೃಹತ್‌ ಗಾತ್ರದ ಮರಗಳು, ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ವಿದ್ಯುತ್‌ ವ್ಯತ್ಯಯದಿಂದ ಈ ಭಾಗ ಕತ್ತಲೆಯ ಖಂಡವಾಗಿದೆ. ರಸ್ತೆಯಲ್ಲಿ ಭಾರಿ ಗಾತ್ರದ ಮರಗಳು ಬಿದ್ದಿರುವುದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ ಎಂದು ಹೇಳಿದ್ದಾರೆ.

ಮರ ಬಿದ್ದ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಕಾಫಿ ಗಿಡಗಳು ನಾಶವಾಗಿವೆ. ಕೆಲವೆಡೆ ತೋಟಗಳಲ್ಲಿ ಭೂಕುಸಿತ ಸಂಭವಿಸಿವೆ. ಮಳೆಯಿಂದ ಮುಂದಿನ ಕಾಫಿ ಪಸಲಿನ ಮೇಲೂ ದುಷ್ಪರಿಣಾಮ ಬೀರಲಿದೆ. ಜತೆಗೆ ಕಾಳು ಮೆಣಸು, ಬಾಳೆ, ಅಡಕೆ, ಏಲಕ್ಕಿ, ತೆಂಗು, ಬೆಳೆಗಳೂ ಸಹ ನಾಶವಾಗಿದೆ ಎಂದಿದ್ದಾರೆ.

ಜಿಲ್ಲಾಡಳಿತ ಕಾರ್ಯಪ್ರವೃತ್ತರಾಗಿ ಆಯಾ ಬೆಳೆಗನುಸಾರ ನಷ್ಟದ ಬಗ್ಗೆ, ಸಂಬಂಧಪಟ್ಟ ಆಯಾ ಇಲಾಖೆಗಳಿಂದ ವರದಿ ತಯಾರಿಸಿ ಉಂಟಾಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು ಎಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ