ಆ್ಯಪ್ನಗರ

ಪ್ರೀತಿ ನಿರಾಕರಿಸಿದ್ದಕ್ಕೆ ಚಾಕು ಇರಿದ

ಪ್ರೀತಿಯನ್ನು ನಿರಾಕರಿಸಿದಕ್ಕೆ ಪಾಗಲ್‌ ಪ್ರೇಮಿಯೊಬ್ಬ ತನ್ನ ಪ್ರೇಯಸಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಬಾಳೆಹೊನ್ನೂರು ಸಮೀಪದ ಮಾಗುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ಗೋಡು ಸಮೀಪದ ನಡೆದಿದೆ.

Vijaya Karnataka 19 Sep 2019, 5:00 am
ಬಾಳೆಹೊನ್ನೂರು (ಚಿಕ್ಕಮಗಳೂರು) : ಪ್ರೀತಿಯನ್ನು ನಿರಾಕರಿಸಿದಕ್ಕೆ ಪಾಗಲ್‌ ಪ್ರೇಮಿಯೊಬ್ಬ ತನ್ನ ಪ್ರೇಯಸಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಬಾಳೆಹೊನ್ನೂರು ಸಮೀಪದ ಮಾಗುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ಗೋಡು ಸಮೀಪದ ನಡೆದಿದೆ.
Vijaya Karnataka Web knife stabbed for refusing love
ಪ್ರೀತಿ ನಿರಾಕರಿಸಿದ್ದಕ್ಕೆ ಚಾಕು ಇರಿದ


ಸಮೀಪದ ಖಾಂಡ್ಯ ಹೋಬಳಿಯ ಯುವತಿಗೆ ಬಾಳೆಹೊನ್ನೂರು ಸಮೀಪದ ಆಡುವಳ್ಳಿ ಗ್ರಾ.ಪಂ. ವ್ಯಾಪ್ತಿಯ ಗಡಿಗೇಶ್ವರ ಗ್ರಾಮದ ಮಿಥುನ್‌ ತನ್ನನ್ನು ಪ್ರೀತಿಸುವಂತೆ ಪೀಡಿಸುತಿದ್ದ. ಆದರೆ ಆತನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಳು. ಇದರಿಂದ ಮನನೊಂದ ಯುವಕ ಮಾಗುಂಡಿ ಸಮೀಪದ ಮಹಲ್ಗೋಡು ಬಳಿ ಯುವತಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಸುದ್ದಿ ತಿಳಿದ ಕೂಡಲೇ ಸ್ಥಳೀಯರು ಯುವತಿಯನ್ನು ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪರಿಶೀಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಾರಿಯಾದ ಮಿಥುನ್‌ಗಾಗಿ ಪೋಲೀಸರು ಹುಡುಕಾಟ ನಡೆಸಿದ್ದಾರೆ. ಬಾಳೆಹೊನ್ನುರು ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ