ಆ್ಯಪ್ನಗರ

ಚಿಕ್ಕಮಗಳೂರು: ಕೋಳಿ ಆಸೆಗೆ ಬಂದು ಬೋನಿಗೆ ಬಿದ್ದ ಚಿರತೆ

ಕೋಳಿ ಹಿಡಿಯಲು ಬಂದು ವ್ಯಕ್ತಿ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಹಿಡಿಯುವಲ್ಲಿ ಚಿಕ್ಕಮಗಳೂರು ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸೆರೆಸಿಕ್ಕ ಚಿರತೆಯನ್ನು ಭದ್ರಾ ಅಭಯಾರಣ್ಯಕ್ಕೆ ಬಿಡಲಾಗಿದೆ.

Vijaya Karnataka Web 15 Nov 2019, 2:22 pm
ಚಿಕ್ಕಮಗಳೂರು: ತಾಲೂಕಿನ ಮಲ್ಗಾರ್ ಗ್ರಾಮದಲ್ಲಿ ಕೋಳಿ ಹಿಡಿಯಲು ಬಂದ ಚಿರತೆಯೊಂದು ಬೋನಿಗೆ ಬಿದ್ದಿರುವ ಘಟನೆ ಶುಕ್ರವಾರ ನಡೆದಿದೆ.
Vijaya Karnataka Web leopard


ಕಳೆದ ಎರಡು ದಿನಗಳ‌ ಹಿಂದೆ ಇಲ್ಲಿನ ನಿವಾಸಿ ಚಂದ್ರೇಗೌಡ ಎಂಬುವರ ಕೋಳಿ ಗೂಡಿಗೆ ನುಗ್ಗಿದ್ದ ಚಿರತೆ ಕೋಳಿ ಹಿಡಿದಿತ್ತು. ಮಾತ್ರವಲ್ಲ ಚಂದ್ರೇಗೌಡ ಅವರ ಮೇಲೂ ದಾಳಿ ಮಾಡಿ ಗಾಯಗೊಳಿಸಿತ್ತು.

ಕಳೆದ ಒಂದು ವಾರದಿಂದ ಚಿರತೆಯನ್ನು ಕಂಡಿದ್ದ ಗ್ರಾಮಸ್ಥರಲ್ಲಿ ಆತಂಕ ಮೂಡಿತ್ತು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಸಹಾಯದಿಂದ ಬೋನಿನಲ್ಲಿ ಕೋಳಿ ಇಡಲಾಯ್ತು. ಹೀಗಾಗಿ ಕೋಳಿ ಆಸೆಗೆ ಮತ್ತೆ ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.

ಭದ್ರಾ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ನಡೆಸಿರುವ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಸೆರೆ ಹಿಡಿದ ಚಿರತೆಯನ್ನು ಹೆಬ್ಬೆ ಸಮೀಪದ ಭದ್ರಾ ಅಭಯಾರಣ್ಯಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಿಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ