ಆ್ಯಪ್ನಗರ

ಕಡೂರು ಸಮೀಪ ಚಿರತೆ ಹೆಜ್ಜೆ ಗುರುತು!

ಪಟ್ಟಣ ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಇರುವ ಉಳಕಿನಕಲ್ಲು ಕ್ರಾಸ್‌ ಬಳಿ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿವೆ ಎಂದು ಅರಣ್ಯ ಇಲಾಖೆ ಅಧಿಕಾರಿ ಪಲಾಕ್ಷ ಪ್ಪ ಮಾಹಿತಿ ನೀಡಿದ್ದಾರೆ.

Vijaya Karnataka 1 Feb 2019, 5:00 am
ಕಡೂರು : ಪಟ್ಟಣ ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಇರುವ ಉಳಕಿನಕಲ್ಲು ಕ್ರಾಸ್‌ ಬಳಿ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿವೆ ಎಂದು ಅರಣ್ಯ ಇಲಾಖೆ ಅಧಿಕಾರಿ ಪಲಾಕ್ಷ ಪ್ಪ ಮಾಹಿತಿ ನೀಡಿದ್ದಾರೆ.
Vijaya Karnataka Web CKM-31KDR2


ಪಟ್ಟಣದ ಉಳಕಿನಕಲ್ಲು ಸಮೀಪ ರೈತ ಲಕ್ಕಪ್ಪ ಅವರ ಹೊಲದಲ್ಲಿ ಚಿರತೆಯ ಹೆಜ್ಜೆ ಗುರುತುಗಳನ್ನು ಗುರುತಿಸಿದ ಕೆಲವು ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಚಿರತೆಯ ಹೆಜ್ಜೆ ಗುರುತುಗಳನ್ನು ದೃಢಪಡಿಸಿದ್ದಾರೆ. ಗ್ರಾಮಸ್ಥರು ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ತೋಟ, ಹೊಲಗಳಲ್ಲಿ ಎಚ್ಚರಿಕೆಯಿಂದ ಓಡಾಡಲು ಮನವಿ ಮಾಡಿದ್ದಾರೆ.

ಪಟ್ಟಣಕ್ಕೆ ಹೊಂದಿಕೊಂಡಿರುವ ಗ್ರಾಮಗಳಾದ ತುರುವನಹಳ್ಳಿ, ಬಂಟಗನಹಳ್ಳಿಯಲ್ಲಿಯಲ್ಲಿಯೂ ಸಹ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿವೆ. ಜನರು ಆತಂಕ ಪಡುವುದು ಬೇಡ. ಚಿರತೆ ಸೆರೆ ಹಿಡಿಯುವ ತನಕ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.

ತಾಲೂಕಿನಲ್ಲಿ ಸುಮಾರು 15ಕ್ಕೂ ಹೆಚ್ಚು ಚಿರತೆಗಳಿರುವ ಬಗ್ಗೆ ಮಾಹಿತಿ ಇದ್ದು. ತುರುವನಹಳ್ಳಿ, ನಿರ್ವಾಣಸ್ವಾಮಿ ಗುಡ್ಡ, ಬಂಟಗನಹಳ್ಳಿ, ಬಾಸೂರುಕಾವಲು ಹಾಗೂ ಬೀರೂರು ಸಮೀಪಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ಪುನಃ ಕಂಡು ಬಂದರೆ ಚಿರತೆ ಹಿಡಿಯಲು ಬೋನ್‌ ಬಳಸಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ