ಮೂಡಿಗೆರೆ : ಮಹಾಮಳೆ ಪ್ರವಾಹದಲ್ಲಿ ನಿರಾಶ್ರಿತರಾದವರ ಬಗ್ಗೆ ರಾಜ್ಯ ಸರಕಾರ ಗಂಭೀರವಾದ ಕಾಳಜಿ ವಹಿಸಿದಂತೆ ಕಾಣುತ್ತಿಲ್ಲ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರಕಾರ ಮುಂದಾಗಬೇಕೆಂದು ಮಾಜಿ ಸಚಿವೆ ಮೋಟಮ್ಮ ಒತ್ತಾಯಿಸಿದರು.
ಅವರು ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವಂತಿಕೆ ಇಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಬಳಸಿ ರಾಜ್ಯದಲ್ಲಿ 25 ಬಿಜೆಪಿ ಸಂಸದರು ಲೋಕಸಭೆಗೆ ಪ್ರವೇಶಿಸಿರುವುದರಿಂದ ರಾಜ್ಯಕ್ಕೆ ಕೇಂದ್ರದಿಂದ ಪರಿಹಾರದ ಅನುದಾನ ಕೊಡಲು ಪ್ರಧಾನಿ ಮುಂದೆ ಬರುತ್ತಿಲ್ಲ. ಅತಿವೃಷ್ಟಿ ಸಂದರ್ಭದಲ್ಲಿ ರಾಜಕೀಯ ಬೇಳೆ ಬೇಯಿಸದೇ ಉಭಯ ಸರಕಾರಗಳು ಮನೆ, ಜಮೀನು ಕಳೆದುಕೊಂಡು ನಿರಾಶ್ರಿತರಾದವರ ಬಗ್ಗೆ ಕಾಳಜಿ ವಹಿಸಬೇಕೆಂದು ಹೇಳಿದರು.
ಜಮೀನು ಕಳೆದುಕೊಂಡವರಿಗೆ ಎಕರೆಗೆ ಕನಿಷ್ಟ 1ಲಕ್ಷ ರೂ. ಹಾಗೂ ಮನೆ ಕಳೆದುಕೊಂಡವರಿಗೆ ಪ್ರಾಥಮಿಕವಾಗಿ ತಕ್ಷ ಣಕ್ಕೆ 10 ಸಾವಿರ ರೂ. ಪರಿಹಾರ ನೀಡಬೇಕು. ಜಿಲ್ಲೆಯಾದ್ಯಂತ ಕೂಲಿ ಕಾರ್ಮಿಕರು ಕಾಫಿ ತೋಟಗಳಲ್ಲಿ ಕೆಲಸವಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ. ತುತ್ತು ಊಟಕ್ಕೂ ಪರದಾಡುತ್ತಿದ್ದಾರೆ. ತೋಟದ ಮಾಲೀಕರು ತೋಟವನ್ನೇ ಕಳೆದುಕೊಂಡು ಕೂಲಿ ಕೆಲಸ ಕೊಡಲು ಆಗದೇ ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೂಲಿ ಕಾರ್ಮಿಕರಿಗೆ ಊಟದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಬೇಕು. ಅನ್ನಭಾಗ್ಯ ಯೋಜನೆಯಲ್ಲಿ ರಾಜ್ಯ ಸರಕಾರ ನೀಡುತ್ತಿರುವ ಉಚಿತ ಅಕ್ಕಿ ಯೋಜನೆಯನ್ನು ಮುಂದುವರೆಸಬೇಕೆಂದು ಒತ್ತಾಯಿಸಿದರು.
ಸಚಿವರೇ ಇಲ್ಲದೆ ರಾಜ್ಯ ಸರಕಾರವೇ ಸಂಕಟಕ್ಕೆ ಸಿಲುಕಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲೆಗೆ ಇದೂವರೆಗೂ ಭೇಟಿ ನೀಡಲಿಲ್ಲ. ಕೇಂದ್ರ ಸರಕಾರ ಕೂಡಲೆ ರಾಜ್ಯಕ್ಕೆ ಅಗತ್ಯ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಅವರು ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವಂತಿಕೆ ಇಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಬಳಸಿ ರಾಜ್ಯದಲ್ಲಿ 25 ಬಿಜೆಪಿ ಸಂಸದರು ಲೋಕಸಭೆಗೆ ಪ್ರವೇಶಿಸಿರುವುದರಿಂದ ರಾಜ್ಯಕ್ಕೆ ಕೇಂದ್ರದಿಂದ ಪರಿಹಾರದ ಅನುದಾನ ಕೊಡಲು ಪ್ರಧಾನಿ ಮುಂದೆ ಬರುತ್ತಿಲ್ಲ. ಅತಿವೃಷ್ಟಿ ಸಂದರ್ಭದಲ್ಲಿ ರಾಜಕೀಯ ಬೇಳೆ ಬೇಯಿಸದೇ ಉಭಯ ಸರಕಾರಗಳು ಮನೆ, ಜಮೀನು ಕಳೆದುಕೊಂಡು ನಿರಾಶ್ರಿತರಾದವರ ಬಗ್ಗೆ ಕಾಳಜಿ ವಹಿಸಬೇಕೆಂದು ಹೇಳಿದರು.
ಜಮೀನು ಕಳೆದುಕೊಂಡವರಿಗೆ ಎಕರೆಗೆ ಕನಿಷ್ಟ 1ಲಕ್ಷ ರೂ. ಹಾಗೂ ಮನೆ ಕಳೆದುಕೊಂಡವರಿಗೆ ಪ್ರಾಥಮಿಕವಾಗಿ ತಕ್ಷ ಣಕ್ಕೆ 10 ಸಾವಿರ ರೂ. ಪರಿಹಾರ ನೀಡಬೇಕು. ಜಿಲ್ಲೆಯಾದ್ಯಂತ ಕೂಲಿ ಕಾರ್ಮಿಕರು ಕಾಫಿ ತೋಟಗಳಲ್ಲಿ ಕೆಲಸವಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ. ತುತ್ತು ಊಟಕ್ಕೂ ಪರದಾಡುತ್ತಿದ್ದಾರೆ. ತೋಟದ ಮಾಲೀಕರು ತೋಟವನ್ನೇ ಕಳೆದುಕೊಂಡು ಕೂಲಿ ಕೆಲಸ ಕೊಡಲು ಆಗದೇ ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೂಲಿ ಕಾರ್ಮಿಕರಿಗೆ ಊಟದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಬೇಕು. ಅನ್ನಭಾಗ್ಯ ಯೋಜನೆಯಲ್ಲಿ ರಾಜ್ಯ ಸರಕಾರ ನೀಡುತ್ತಿರುವ ಉಚಿತ ಅಕ್ಕಿ ಯೋಜನೆಯನ್ನು ಮುಂದುವರೆಸಬೇಕೆಂದು ಒತ್ತಾಯಿಸಿದರು.
ಸಚಿವರೇ ಇಲ್ಲದೆ ರಾಜ್ಯ ಸರಕಾರವೇ ಸಂಕಟಕ್ಕೆ ಸಿಲುಕಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲೆಗೆ ಇದೂವರೆಗೂ ಭೇಟಿ ನೀಡಲಿಲ್ಲ. ಕೇಂದ್ರ ಸರಕಾರ ಕೂಡಲೆ ರಾಜ್ಯಕ್ಕೆ ಅಗತ್ಯ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.