ಆ್ಯಪ್ನಗರ

ವಿದ್ಯಾರ್ಥಿಗಳಲ್ಲಿಸವಾಲು ಎದುರಿಸುವ ಛಾತಿ ಬೆಳೆಯಲಿ

ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ಕಷ್ಟ ಹಾಗೂ ಸವಾಲುಗಳನ್ನು ಎದುರಿಸುವ ಛಾತಿ ಬೆಳೆಸಿಕೊಳ್ಳಬೇಕು ಎಂದು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ಜಿಲ್ಲಾಮುಖ್ಯ ಆಯುಕ್ತ ಎಂ.ಎನ್‌.ಷಡಕ್ಷರಿ ಸಲಹೆ ಮಾಡಿದರು.

Vijaya Karnataka 15 Oct 2019, 5:00 am
ಚಿಕ್ಕಮಗಳೂರು: ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ಕಷ್ಟ ಹಾಗೂ ಸವಾಲುಗಳನ್ನು ಎದುರಿಸುವ ಛಾತಿ ಬೆಳೆಸಿಕೊಳ್ಳಬೇಕು ಎಂದು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ಜಿಲ್ಲಾಮುಖ್ಯ ಆಯುಕ್ತ ಎಂ.ಎನ್‌.ಷಡಕ್ಷರಿ ಸಲಹೆ ಮಾಡಿದರು.
Vijaya Karnataka Web 14SHIVUP2_35


ನಗರದ ಐಡಿಎಸ್‌ಜಿ ಕಾಲೇಜಿನಲ್ಲಿಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಪ್ರಸಕ್ತ ಸಾಲಿನ ಚಟುವಟಿಕೆಗಳಿಗೆ ಇತ್ತೀಚೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಷ್ಟ, ಸವಾಲುಗಳನ್ನು ಎದುರಿಸುವ ಛಾತಿ ಬೆಳೆಸಿಕೊಳ್ಳದಿದ್ದಲ್ಲಿಬದುಕಿನಲ್ಲಿಮುಂದೆ ಬರಲು ಸಾಧ್ಯವಾಗುವುದಿಲ್ಲ, ನಾವು ನಿಂತಲ್ಲೇ ನಿಂತಿರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಜಿಲ್ಲಾಆಯುಕ್ತೆ ಡಿ.ಎಸ್‌.ಮಮತಾ ಮಾತನಾಡಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನಲ್ಲಿವಿದ್ಯಾರ್ಥಿಗಳು ಸಮರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕು. ಬಡವರು, ಆಶಕ್ತರು ಮತ್ತು ಅಸಹಾಯಕರ ಸೇವೆ ಮಾಡಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ಎಸ್‌.ಇ.ನಟರಾಜ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸ್ವಾರ್ಥ ಬಿಟ್ಟು ಸಮಾಜಕ್ಕಾಗಿ ಬದುಕುವುದನ್ನು ಕಲಿಯಬೇಕು ಎಂದರು.

ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಜಿಲ್ಲಾತರಬೇತಿ ಆಯುಕ್ತೆ ಸಂಧ್ಯಾರಾಣಿ, ಸಂಚಾಲಕ ಎಚ್‌.ಆರ್‌.ನವೀನ್‌ ಕುಮಾರ್‌, ರೇಂಜರ್ಸ್ನ ಸಂವಹನಾಧಿಕಾರಿ ಸುಹಾನಾ ಸುಲ್ತಾನ್‌, ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಗಂಗಾಧರ್‌ ಹಾಜರಿದ್ದರು. ಸಚ್ಚಿನ್‌,ಚಂದನ ನಿರೂಪಿಸಿದರು. ಯೋಗೀಶ್‌ ಸ್ವಾಗತಿಸಿ, ಗೀತಾಂಜಲಿ ವಂದಿಸಿದರು.
---------
ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ಸಗಣಿ ಹುಳದಂತೆ ಬದುಕಬಾರದು. ಕ್ರಿಯಾಶೀಲ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ನನ್ನೊಬ್ಬನಿಂದ ಏನಾಗುತ್ತದೆ ಎಂಬ ಧೋರಣೆ ಬಿಟ್ಟು ನನ್ನಿಂದ ಎಲ್ಲವೂ ಸಾಧ್ಯವಾಗುತ್ತದೆ ಎಂಬ ಆತ್ಮವಿಶ್ವಾಸ ದೊಂದಿಗೆ ಸಮಾಜಸೇವಾ ಕಾರ್ಯಗಳಲ್ಲಿತೊಡಗಬೇಕು.
-ಎಂ.ಎನ್‌.ಷಡಕ್ಷರಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ