ಆ್ಯಪ್ನಗರ

ಮಧ್ವರಾಜ್‌ ಹರಕೆಯ ಕುರಿ : ಜೀವರಾಜ್‌

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹರಕೆಯ ಕುರಿಯಾಗಿದ್ದು,ಚುನಾವಣೆ ನಂತರ ಅವರ ಪರಿಸ್ಥಿತಿ ಶೋಚನೀಯವಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಿ.ಎನ್‌.ಜೀವರಾಜ್‌ ಹೇಳಿದರು.

Vijaya Karnataka 6 Apr 2019, 5:00 am
ಶೃಂಗೇರಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಹರಕೆಯ ಕುರಿಯಾಗಿದ್ದು,ಚುನಾವಣೆ ನಂತರ ಅವರ ಪರಿಸ್ಥಿತಿ ಶೋಚನೀಯವಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಿ.ಎನ್‌.ಜೀವರಾಜ್‌ ಹೇಳಿದರು.
Vijaya Karnataka Web CKM-5SRI6


ಅವರು ತಾಲೂಕಿನಲ್ಲಿ ಶುಕ್ರವಾರ ಮೆಣಸೆ ಗ್ರಾಪಂ ಯ ಕಿಕ್ರೆಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದರು.ಮೂಲ ಕಾಂಗ್ರೆಸಿನವರಾದ ಅವರು ಇದೀಗ ಜೆಡಿಎಸ್‌ ಚಿಹ್ನೆಯಡಿ ಸ್ಪರ್ಧೆಗೆ ಇಳಿದಿದ್ದಾರೆ.ಇದರಿಂದ ಎರಡು ಪಕ್ಷ ದ ಕಾರ್ಯಕರ್ತರಲ್ಲೂ ಗೊಂದಲವಿದೆ.ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ಸುಳ್ಳಿನ ಆಶ್ವಾಸನೆ ನೀಡಲಾಗಿದೆ. ಬಡವರ ಖಾತೆಗೆ 72 ಸಾವಿರ ರೂ ಜಮಾ ಮಾಡಲಾಗುತ್ತದೆ ಎಂಬುದು ಸಾಧ್ಯವಿಲ್ಲದ ಮಾತು. ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ನರೇಂದ್ರ ಮೋದಿ ಸರಕಾರ ದೇಶಕ್ಕೆ ಅನಿವಾರ್ಯವಾಗಿದೆ.ಸಂಸದೆ ಶೋಭಾಕರಂದ್ಲಾಜೆ ಅವರನ್ನು ಬೆಂಬಲಿಸುವ ಮೂಲಕ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು. ಬಿಜೆಪಿ ಅಧ್ಯಕ್ಷ ಎಚ್‌.ಎಸ್‌.ನಟೇಶ್‌,ಜಿಪಂ ಮಾಜಿ ಸದಸ್ಯ ಎಂ.ಎಸ್‌.ರಂಗನಾಥ್‌,ಕುಂತೂರು ನಾಗೇಶ್‌,ರಾಜೇಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ