ಆ್ಯಪ್ನಗರ

ಯಾಂತ್ರೀಕೃತ ಕೃಷಿ ಆರ್ಥಿಕ ಪ್ರಗತಿ ಪೂರಕ

ಸಾಂಪ್ರದಾಯಿಕ ಕೃಷಿ ಕೈ ಬಿಟ್ಟು ಯಾಂತ್ರೀಕೃತ ಕೃಷಿಯನ್ನು ಅಳವಡಿಸಿಕೊಂಡರೆ ಆರ್ಥಿಕ ಪ್ರಗತಿ ಸಾಧಿಸಬಹುದು ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಸಲಹೆ ನೀಡಿದರು.

Vijaya Karnataka 23 Nov 2018, 5:00 am
ಆಲ್ದೂರು : ಸಾಂಪ್ರದಾಯಿಕ ಕೃಷಿ ಕೈ ಬಿಟ್ಟು ಯಾಂತ್ರೀಕೃತ ಕೃಷಿಯನ್ನು ಅಳವಡಿಸಿಕೊಂಡರೆ ಆರ್ಥಿಕ ಪ್ರಗತಿ ಸಾಧಿಸಬಹುದು ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಸಲಹೆ ನೀಡಿದರು.
Vijaya Karnataka Web CKM-22ALDUR1A


ಕೃಷಿ ಮತ್ತು ಕೃಷಿ ಸಂಭಂದಿತ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ದೊಡ್ಡಮಾಗರವಳ್ಳಿ ಗ್ರಾಮದ ಸಮುಧಾಯ ಭವನದಲ್ಲಿ ಗುರುವಾರ ಆಯೋಜಿಸಿದ್ದ ಆಲ್ದೂರು ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯಗಳು ಹಾಗೂ ಸಹಾಯ ಧನವನ್ನು ಬಳಕೆ ಮಾಡಿಕೊಳ್ಳಬೇಕು. ಕೃಷಿ ಇಲಾಖೆ ರೈತರಿಗೆ ಸಬ್ಸಿಡಿ ದರದಲ್ಲಿ ಕೃಷಿ ಯಂತ್ರಗಳನ್ನು ವಿತರಿಸುತ್ತಿದೆ. ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ರಾಜ್ಯ ಸರಕಾರ ರಸ್ತೆ ಅಭಿವೃದ್ಧಿಗೆ 30 ಕೋಟಿ ಬಿಡುಗಡೆ ಮಾಡಿದೆ. ಕ್ಷೇತ್ರಕ್ಕೂ ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಮೂಡಿಗೆರೆ ಕೃಷಿ ವಿಜ್ಞಾನ ಇಲಾಖೆಯ ಸಸ್ಯ ಸಂರಕ್ಷಣಾ ವಿಭಾಗದ ವಿಜ್ಞಾನಿ ಡಾ. ಗಿರೀಶ್‌ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಕೃಷಿಗೆ ಅತಿಯಾದ ರಾಸಾಯನಿಕ ಬಳಕೆಯಿಂದ ಭೂಮಿ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಇಳುವರಿ ಕಡಿಮೆಯಾಗುತ್ತಿದೆ. ಫಸಲಿನ ಕಟಾವು ಮುಗಿದ ಮೇಲೆ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿ, ಕಾಲ ಕಾಲಕ್ಕೆ ಮಣ್ಣು ಪರೀಕ್ಷೆ ಮಾಡಿಸುವುದರಿಂದ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರು.

ತಾ .ಪಂ. ಸದಸ್ಯೆ ಭವ್ಯ ನಟೇಶ್‌ ಮಾತನಾಡಿ, ರೈತರಿಗೆ ಸಬ್ಸಿಡಿ ದರದಲ್ಲಿ ಯಂತ್ರಗಳು ದೊರಕುತ್ತಿದ್ದು,ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಾವಯುವ ಕೃಷಿಕರಾದ ಚಂದ್ರಶೇಖರ್‌ ನಾರಣಾಪುರ ಹಾಗೂ ಅರವಿಂದ್‌ ಭೂತನಕಾಡು ಇವರು ಸಾವಯುವ ಕೃಷಿಯ ಬಗ್ಗೆ ,ಹಾಗೂ ತೋಟಗಾರಿಕಾ ಇಲಾಖಾ ಅಧಿಕಾರಿ ಪಾಪಣ್ಣ ಇಲಾಖೆಯಿಂದ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ವೆಂಕಟೇಶ ಚೌಹಾಣ್‌ ಪ್ರಾಸ್ತಾವಿಕ ಮಾತನಾಡಿದರು. ದೊಡ್ಡಮಾಗರವಳ್ಳಿ ಗ್ರಾ ಪಂ ಅಧ್ಯಕ್ಷೆ ಪುಷ್ಟ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿ ಮಾಹಿತಿಯುಳ್ಳ ಹಸ್ತಪ್ರತಿಯನ್ನು ಬಿಡುಗಡೆಮಾಡಲಾಯಿತು. ಔಷದಿ ಹಾಗೂ ಯಂತ್ರೋಪಕರಣಗಳ ಮಳಿಗೆಯನ್ನು ಉದ್ಘಾಟಿಸಲಾಯಿತು. ತಾ. ಪಂ . ಸದಸ್ಯರಾದ ರೇಖಾ ಅನಿಲ್‌,ದೀಪಾ ನಾಗೇಶ್‌, ದೊಡ್ಡಮಾಗರವಳ್ಳಿ ಗ್ರಾ. ಪಂ .ಉಪಾಧ್ಯಕ್ಷ ತುಂಗೇಶ್‌,ಸದಸ್ಯ ಪ್ರಸನ್ನ, ಚಿಕ್ಕಮಗಳೂರು ಕೃಷಿಕ ಸಮಾಜದ ಅಧ್ಯಕ್ಷ ಕುಮಾರಸ್ವಾಮಿ , ಆಲ್ದೂರು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಾದ ಮೇನಕಾ, ಶಾಂತಕುಮಾರ್‌, ಸಿಬ್ಬಂದಿಗಳಾದ ಬಿಂದು , ಸ್ಥಳೀಯರಾದ ನಾರಾಯಣ ಆಚಾರ್ಯ, ಸುದರ್ಶನ್‌, ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ