ಆ್ಯಪ್ನಗರ

ಪ್ರಕೃತಿ ವಿಕೋಪ ಮುನ್ನೆಚ್ಚರಿಕಾ ಕ್ರಮಕ್ಕೆ ಸಭೆ

ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಅತಿವೃಷ್ಟಿಯನ್ನು ಸಮನ್ವಯದಿಂದ ನಿಭಾಯಿಸಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

Vijaya Karnataka 19 Jun 2019, 5:00 am
ನರಸಿಂಹರಾಜಪುರ : ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಅತಿವೃಷ್ಟಿಯನ್ನು ಸಮನ್ವಯದಿಂದ ನಿಭಾಯಿಸಬೇಕು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
Vijaya Karnataka Web CKM-18NRP5


ತಾಲೂಕು ಕಚೇರಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಂಗಳವಾರ ನಡೆದ ಸಭೆ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿ ತಾಲೂಕಿನ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸದಂತೆ ಈ ವರ್ಷವೂ ಅದೇ ರೀತಿಯಾಗಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆಗಳಿಗೆ ಯಾರ ಅಪ್ಪಣೆಗೆ, ಆದೇಶಕ್ಕೆ ಕಾಯದೆ ತಮ್ಮ ಗಮನಕ್ಕೆ ತಂದು ತತ್‌ಕ್ಷ ಣವೇ ಕ್ರಮಕೈಗೊಳ್ಳಿ. ಅನುದಾನ ಬಿಡುಗಡೆ ಮಾಡಿಸಿಕೊಡುವ ಜವಾಬ್ದಾರಿ ನನ್ನದು ಎಂದರು.

ಮೆಸ್ಕಾಂ ಇಲಾಖೆಯವರು ಕೂಡಲೇ ಮಳೆ ಹೆಚ್ಚಾಗುವ ಮುನ್ನವೇ ಜಂಗಲ್‌ ಕಟ್ಟಾವು ಮಾಡಬೇಕು. ಅತಿಯಾದ ಮಳೆಗಾಳಿಗೆ ವಿದ್ಯುತ್‌ ಸಮಸ್ಯೆ ಎದುರಾಗಬಹುವುದು. ಆದ್ದರಿಂದ ವಿದ್ಯುತ್‌ ಕಂಬಗಳು ಹಾಗೂ ತಂತಿಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಮೆಸ್ಕಾಂ ಎಇಇ ಗೌತಮ್‌ಗೆ ಸೂಚಿಸಿದರು. ಇನ್ನು ರಸ್ತೆಯ ಬದಿಯಲ್ಲಿಯೇ ವಾಲಿರುವ ಮರಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ. ಸದಸ್ಯ ಪಿ.ಆರ್‌.ಸದಾಶಿವ ಮಾತನಾಡಿ, ಎಲ್ಲಾ ಇಲಾಖೆ ಅಧಿಕಾರಿಗಳೂ ಜನಪ್ರತಿನಿಧಿಗಳಿಗೆ ಸ್ಪಂಧಿಸಬೇಕು. ಗೌರವ ನೀಡಬೇಕು. ಯಾವ ಜನಪ್ರತಿನಿಧಿಯೂ ಕೂಡ ತನ್ನ ಸಮಸ್ಯೆಗಳನ್ನು ಅಧಿಕಾರಿಗಳ ಹತ್ತಿರ ಕೇಳುವುದಿಲ್ಲ. ಆವರ ಸಮಸ್ಯೆಗಳಿಗೆ ಪರಿಹಾರ ಕೇಳುತ್ತಾರೆ. ಇದನ್ನು ಅಧಿಕಾರಿಗಳು ಗಮನದಲ್ಲಿಟ್ಟುಕೊಳ್ಳಬೇಕು ಎಂದರು.

ಈ ಸಂದರ್ಭ ತಹಸೀಲ್ದಾರ್‌ ನಾಗರಾಜ್‌, ತಾ.ಪಂ. ಇಓ ಕೆ.ಹೊಂಗಯ್ಯ, ತಾಲೂಕಿನ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

====================
24x7 ತಂಡ
ತಾಲೂಕಿನಲ್ಲಿ ಪ್ರಕೃತಿ ವಿಕೋಪದಿಂದಾಗಬಹುವುದಾದ ಅನಾಹುತಗಳಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಅಪಾಯವನ್ನು ತಡೆಯಲು ತಾಲೂಕು ಮಟ್ಟದ ಅಧಿಕಾರಿಗಳ ತಂಡ ರಚಿಸಲಾಗುತ್ತಿದೆ. ಈ ತಂಡದಲ್ಲಿ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಇರುತ್ತಾರೆ. ಅವರು 24x7 ಕಾರ್ಯನಿರ್ವಹಿಸಬೇಕು.
-ಟಿ.ಡಿ.ರಾಜೇಗೌಡ, ಶಾಸಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ