ಆ್ಯಪ್ನಗರ

ಶೃಂಗೇರಿಯಲ್ಲಿ ಶಾಸಕರಿಂದ ಮನೆಮನೆ ಪ್ರಚಾರ

ಪಟ್ಟಣ ಪಂಚಾಯಿತಿ ಜನತೆ ಈ ಬಾರಿ ಬದಲಾವಣೆ ಬಯಸಿದ್ದು, ಈ ಬಾರಿ ಕಾಂಗ್ರೆಸ್‌ಗೆ ಪೂರ್ಣ ಬಹುಮತ ನೀಡುವ ವಿಶ್ವಾಸವಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

Vijaya Karnataka 21 May 2019, 5:00 am
ಶೃಂಗೇರಿ : ಪಟ್ಟಣ ಪಂಚಾಯಿತಿ ಜನತೆ ಈ ಬಾರಿ ಬದಲಾವಣೆ ಬಯಸಿದ್ದು, ಈ ಬಾರಿ ಕಾಂಗ್ರೆಸ್‌ಗೆ ಪೂರ್ಣ ಬಹುಮತ ನೀಡುವ ವಿಶ್ವಾಸವಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
Vijaya Karnataka Web CKM-20SRI6


ಸೋಮವಾರ ಪ.ಪಂ. ವ್ಯಾಪ್ತಿಯ ವಿವಿಧ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳೊಂದಿಗೆ ಚುನಾವಣೆ ಪ್ರಚಾರ ನಡೆಸಿದರು.

ಶ್ರೀ ಮಠಕ್ಕೆ ಬರುತ್ತಿರುವ ಸಹಸ್ರಾರು ಭಕ್ತರನ್ನು ಗಮನದಲ್ಲಿಟ್ಟುಕೊಂಡು ಸ್ವಚ್ಛ ಶೃಂಗೇರಿ ಕಾಂಗ್ರೆಸ್‌ನ ಮೊದಲ ಆದ್ಯತೆಯಾಗಿದೆ. ಪಟ್ಟಣದ ಅಭಿವೃದ್ಧಿಗೆ ಸರಕಾರ ಈ ಬಾರಿ ಹೆಚ್ಚಿನ ಅನುದಾನ ನೀಡಿದ್ದು, ಇದರಿಂದ ಪಟ್ಟಣ ಮತ್ತು ಸುತ್ತ ಮುತ್ತಲಿನ ಪ್ರದೇಶ ಸಂಪೂರ್ಣವಾಗಿ ಅಭಿವೃದ್ಧಿಯಾಗುತ್ತಿದೆ. ಮಲ್ಲಿಕಾರ್ಜುನ ಬೀದಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದರೊಂದಿಗೆ ಪಟ್ಟಣದ ಎಲ್ಲಾ ರಸ್ತೆ ಅಭಿವೃದ್ಧಿಯಾಗಿದೆ. ತುಂಗಾ ನದಿಯ ಪಾವಿತ್ರ್ಯತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವುದು. ಪಪಂ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು ನೀಡುವುದು ಸೇರಿದಂತೆ ಪಟ್ಟಣಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪ.ಪಂ. ವ್ಯಾಪ್ತಿಯ ಮತದಾರರ ಮನೆ ಮನೆಗೆ ತೆರಳಿ ಮತ ಯಾಚಿಸಲಾಯಿತು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಟರಾಜ್‌, ಪಟ್ಟಣ ಕಾಂಗ್ರೆಸ್‌ ಅಧ್ಯಕ್ಷ ದಿನೇಶ್‌ ಶೆಟ್ಟಿ, ಮುಖಂಡರಾದ ವಿಜಯಕುಮಾರ್‌ ಅಭ್ಯರ್ಥಿಗಳಾದ ಉಮೇಶ್‌ ಪುದುವಾಳ್‌, ಲತಾ, ಆಶಾಶೆಟ್ಟಿ, ಸೌಮ್ಯವಿಜಯಕುಮಾರ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ