ಆ್ಯಪ್ನಗರ

ಪೌರ ಕಾರ್ಮಿಕರಿಗೆ ಮಾದರಿ ಬಡಾವಣೆ

ಪೌರ ಕಾರ್ಮಿಕರಿಗೆ ಉಪ್ಪಳ್ಳಿಯಲ್ಲಿ ಮಾದರಿ ಬಡಾವಣೆಯನ್ನು ನಿರ್ಮಿಸಲಾಗುವುದು ಎಂದು ಶಾಸಕ ಸಿ.ಟಿ.ರವಿ ಹೇಳಿದರು.

Vijaya Karnataka 25 Dec 2018, 5:00 am
ಚಿಕ್ಕಮಗಳೂರು: ಪೌರ ಕಾರ್ಮಿಕರಿಗೆ ಉಪ್ಪಳ್ಳಿಯಲ್ಲಿ ಮಾದರಿ ಬಡಾವಣೆಯನ್ನು ನಿರ್ಮಿಸಲಾಗುವುದು ಎಂದು ಶಾಸಕ ಸಿ.ಟಿ.ರವಿ ಹೇಳಿದರು.
Vijaya Karnataka Web CKM-24aragap6


ಕೇಂದ್ರ ಮತ್ತು ರಾಜ್ಯ ಸರಕಾರದ ಗೃಹಭಾಗ್ಯ ಯೋಜನೆಯಡಿ ಉಪ್ಪಳ್ಳಿಯ ರಾಜೀವ್‌ಗಾಂಧಿ ಬಡಾವಣೆಯಲ್ಲಿ 5.48 ಕೋಟಿ ವೆಚ್ಚದಲ್ಲಿ ಪೌರ ಕಾರ್ಮಿಕರಿಗೆ 73 ಮನೆಗಳ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಪೌರ ಕಾರ್ಮಿಕರಿಗೆ ಸೂರು ಒದಗಿಸಿ ಕೊಡುವ ನಿಟ್ಟಿನಲ್ಲಿ ಈ ಮನೆಗಳನ್ನು ನಿರ್ಮಿಸಲಾಗುತ್ತಿದೆ. ನಿರ್ಮಾಣದ ಹೊಣೆಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಿದ್ದು, ಗುಣಮಟ್ಟದ ಕಾಮಗಾರಿ ಮಾಡುವಂತೆ ಸೂಚಿಸಲಾಗಿದೆ. ಉತ್ತಮ ರಸ್ತೆ, ಬೀದಿದೀಪ, ಕುಡಿವ ನೀರು, ಉದ್ಯಾನವನ ಸೇರಿದಂತೆ ಎಲ್ಲ ಮೂಲಸೌಲಭ್ಯ ಒದಗಿಸಿ ಸುಸಜ್ಜಿತ ಬಡಾವಣೆ ಮಾಡಲಾಗುವುದು. ಈ ಬಡಾವಣೆಯಲ್ಲಿ ನಿವೇಶನ ದೊರೆಯದ ಪೌರ ಕಾರ್ಮಿಕರಿಗೆ ಮುಂದಿನ ಹಂತದ ಬಡಾವಣೆಯಲ್ಲಿ ನೀಡಲಾಗುವುದು ಎಂದರು.

ನಗರಸಭೆ ಅಧ್ಯಕ್ಷೆ ಶಿಲ್ಪರಾಜಶೇಖರ್‌ ಮಾತನಾಡಿ, ಈ ಬಡಾವಣೆಯಲ್ಲಿ ಕಳೆದ ಕೆಲವು ವರ್ಷಗಳ ಹಿಂದೆ ನಗರಸಭೆಯಿಂದ ಪೌರ ಕಾರ್ಮಿಕರಿಗೆ ನಿವೇಶನ ನೀಡಲಾಗಿತ್ತು. ಪೌರ ಕಾರ್ಮಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಗರಸಭೆಯಿಂದ ಬಡಾವಣೆಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.

ಪೌರ ಕಾರ್ಮಿಕರು ಮತ್ತು ಪೌರ ಕಾರ್ಮಿಕರ ಸಂಘದಿಂದ ಶಾಸಕ ಸಿ.ಟಿ.ರವಿ ಅವರನ್ನು ಗೌರವಿಸಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೋಟೆ ರಂಗನಾಥ್‌, ನಗರಸಭೆ ಮಾಜಿ ಅಧ್ಯಕ್ಷ ಎಚ್‌.ಡಿ.ತಮ್ಮಯ್ಯ, ಸದಸ್ಯರಾದ ಟಿ.ರಾಜಶೇಖರ್‌, ಸುರೇಖಾ ಸಂಪತ್‌ರಾಜ್‌, ಆಯುಕ್ತೆ ತುಷಾರಮಣಿ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಎನ್‌.ಅಣ್ಣಯ್ಯ, ಉಪಾಧ್ಯಕ್ಷ ಸಿ.ಬಿ.ನಾಗರಾಜ್‌, ರಾಜೇಶ್‌, ಗಣೇಶ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ