ಆ್ಯಪ್ನಗರ

ಘಟಬಂಧನ್‌ ಗಟ್ಟಿಗೊಳ್ಳಲು ಮೋದಿ ಕಾರಣ

ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತ, ಸರ್ವಾಧಿಕಾರಿ ಧೋರಣೆಯ ಪ್ರತಿಫಲವೇ ಮಹಾಘಟಬಂಧನ್‌ ಗಟ್ಟಿಯಾಗಲು ಕಾರಣ ಎಂದು ಜೆಡಿಎಸ್‌ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ , ಮಾಜಿ ಶಾಸಕ ವೈ.ಎಸ್‌.ವಿ ದತ್ತ ಹೇಳಿದರು.

Vijaya Karnataka 5 Feb 2019, 5:00 am
ಕಡೂರು: ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತ, ಸರ್ವಾಧಿಕಾರಿ ಧೋರಣೆಯ ಪ್ರತಿಫಲವೇ ಮಹಾಘಟಬಂಧನ್‌ ಗಟ್ಟಿಯಾಗಲು ಕಾರಣ ಎಂದು ಜೆಡಿಎಸ್‌ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ , ಮಾಜಿ ಶಾಸಕ ವೈ.ಎಸ್‌.ವಿ ದತ್ತ ಹೇಳಿದರು.
Vijaya Karnataka Web CKM-4KDR2


ಅವರು ಪಟ್ಟಣದ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ 5 ರಾಜ್ಯಗಳಲ್ಲಿ ಸೋತು ಸುಣ್ಣವಾಗಿರುವ ಮೋದಿಗೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಜಾತ್ಯತೀತ ಮತಗಳು ಚದುರಿ ಹೋಗಬಾರದೆಂದು ರಾಷ್ಟ್ರ ಮಟ್ಟದಲ್ಲಿ ಪ್ರಾದೇಶಿಕ ಪಕ್ಷ ಗಳು ಹೊಂದಾಣಿಕೆಯಾಗಿವೆ. ಇದರಿಂದ ಉತ್ತಮ ಫಲಿತಾಂಶವೂ ಬಂದಿದೆ. ಅದೇ ರೀತಿ ರಾಜ್ಯದಲ್ಲಿ ಕಾಂಗ್ರೆಸ್‌ ಜತೆ ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆಯನ್ನು ಮಾಡುವುದು ಶತಸಿದ್ಧ ಇದರಲ್ಲಿ ಯಾವುದೇ ಗೊಂದಲ ಬೇಡ ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಫೆ.8ರಂದು ಬಜೆಟ್‌ ಮಂಡಿಸುವುದೇ ಇಲ್ಲ ಎಂಬ ಬಿಜೆಪಿ ಮುಖಂಡರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ದತ್ತ, ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ . ಆದರೆ, ಅದಕ್ಕೆ ಕನಿಷ್ಟ ಜ್ಞಾನವೂ ಇಲ್ಲ. ಈಗಾಗಲೇ ನಾಲ್ಕೈದು ಬಾರಿ ಪ್ರಯತ್ನ ಮಾಡಿ ಮಾನ ಕಳೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಹೊಂದಾಣಿಕೆಯಾಗುವುದು ಖಚಿತ. ಜೆಡಿಎಸ್‌ ಪಕ್ಷ ವು ವಿಜಯಪುರ, ಹುಬ್ಭಳ್ಳಿ ಧಾರವಾಡ, ಶಿವಮೊಗ್ಗ, ಮಂಡ್ಯ, ಹಾಸನ, ಬೆಂಗಳೂರು ಸೇರಿದಂತೆ ಇನ್ನು ಕೆಲವಾರು ಕಡೆ ಪಕ್ಷ ದ ಆಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿದೆ. ಪಕ್ಷ ದ ಹಿರಿಯರು ಮುಂದೆ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಪ್ರಚಾರ ಸಮಿತಿ ಅಧ್ಯಕ್ಷ ರಾಗಿ ನಾವು ಮುಂದಿನ 100 ದಿನಗಳಿಗೆ ಅನೇಕ ಸಭೆಗಳನ್ನು ಆಯೋಜಿಸಿದ್ದು ವಿಜಯಪುರದಲ್ಲಿ ಇದೇ 10ರಂದು ದಲಿತರ ಸಮಾವೇಶ ನಡೆಸಲಿದೆ. ಫೆ. 17-18ರಂದು ಹುಬ್ಬಳ್ಳಿಯಲ್ಲಿ ರೈತರ ಸಮಾವೇಶ ನಡೆಯಲಿದೆ ಎಂದರು.

ನಗರ ಘಟಕದ ಅಧ್ಯಕ್ಷ ಭಂಡಾರಿ ಶ್ರೀನಿವಾಸ್‌, ತಾಲೂಕು ಜೆಡಿಎಸ್‌ ಉಪಾಧ್ಯಕ್ಷ ಜಿಗಣೆಹಳ್ಳಿ ನೀಲಕಂಠಪ್ಪ, ಶೂದ್ರಶ್ರೀನಿವಾಸ್‌, ಬಿಳುವಾಲ ಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ