ಆ್ಯಪ್ನಗರ

ಮತ್ತೊಮ್ಮೆ ಮೋದಿ ಪ್ರಧಾನಿ ಮಾಡಲು ಶ್ರಮ ಹಾಕಿ : ಜೀವರಾಜ್‌

ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಕಾರ್ಯಕರ್ತರು ಹೆಚ್ಚು ಶ್ರಮ ಹಾಕಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಎನ್‌.ಜೀವರಾಜ್‌ ಮನವಿ ಮಾಡಿದರು.

Vijaya Karnataka 14 Feb 2019, 5:00 am
ಚಿಕ್ಕಮಗಳೂರು: ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಕಾರ್ಯಕರ್ತರು ಹೆಚ್ಚು ಶ್ರಮ ಹಾಕಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಎನ್‌.ಜೀವರಾಜ್‌ ಮನವಿ ಮಾಡಿದರು.
Vijaya Karnataka Web CKM-13RUDRAP2


ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.ಮುಂಬರುವ ಲೋಕಸಭಾ ಚುನಾಚಣೆಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ಶಾ ಹಾಗೂ ರಾಜ್ಯಧ್ಯಕ್ಷ ಬಿ.ಎಸ್‌.ಯಡಿಯೂರ್ಪ ಅವರ ಮಾರ್ಗದರ್ಶನದಲ್ಲಿ ಚುನಾವಣಾ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿವೆ. ಕೇಂದ್ರ ಸರಕಾರದ ಯೋಜನೆಗಳ ಪಟ್ಟಿ ತಯಾರಿಸಿ ಬೂತ್‌ ಮಟ್ಟದ ಕಾಯರ್ಕರಿಗೆ ನೀಡಲಾಗಿದೆ. ಇದನ್ನು ಫಲಾನುಭವಿಗಳಿಗೆ ಮನವರಿಕೆ ಮಾಡಿ ಪಕ್ಷ ಸಂಘಟನೆ ಬಲಪಡಿಸಬೇಕು ಎಂದರು.

ಕೇಂದ್ರ ಸರಕಾರ ಜಾರಿಗೆ ತಂದ ಆಯುಷ್ಮಾನ್‌ ಭಾರತ ಯೋಜನೆಯಡಿ ಜಿಲ್ಲೆಯ 1,739 ಫಲಾನುಭವಿಗಳು 7.59 ಕೋಟಿ ರೂ. ನೆರವು ಪಡೆದಿದ್ದಾರೆ. ಉಜ್ವಲ ಯೋಜನೆಯಡಿ ಜಿಲ್ಲೆಯ 25,626 ಕುಟುಂಬಗಳು ಪ್ರಯೋಜನ ಪಡೆದಿವೆ. ಮಾರ್ಚ್‌ ಅಂತ್ಯದೊಳಗೆ 3,897 ಕುಟುಂಬ ಗ್ಯಾಸ್‌ ಸಂಪರ್ಕ ಪಡೆಯಲಿವೆ. ಆದರೆ, ಕೇಂದ್ರ ಸರಕಾರದ ಯೋಜನೆ ಹಣ ಬಳಸಿ, ರಾಜ್ಯ ಸರಕಾರ ಆರೋಗ್ಯ ಕರ್ನಾಟಕ, ಅನಿಲಭಾಗ್ಯ ಎಂದು ಹೆಸರು ಬದಲಿಸಿ ಜನಸಾಮಾನ್ಯರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಕಾರ್ಯಕರ್ತರು ನಿಷ್ಠೆಯಿಂದ ಕೆಲಸ ಮಾಡಬೇಕು. ದೀನದಯಾಳ್‌ ವಿದ್ಯುತ್‌ ಯೋಜನೆಯ ಸಂಪೂರ್ಣ ಹಣ ಕೇಂದ್ರ ಸರಕಾರದ್ದು. ರಾಜ್ಯ ಸರಕಾರ ತನ್ನ ಯೋಜನೆ ಎಂದು ಹೇಳಿಕೊಳ್ಳುತ್ತಿದೆ. ದೀನದಯಾಳ್‌ ಹೆಸರನ್ನು ಬೆಳೆಸುವ ದೊಡ್ಡ ಬುದ್ಧಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಬಂದಿದೆ ಎಂದು ವ್ಯಂಗ್ಯವಾಡಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಉಪಾಧ್ಯಕ್ಷ ಕೆ.ಆರ್‌. ಆನಂದಪ್ಪ, ಸಂಘಟನಾ ಕಾರ್ಯದರ್ಶಿ ಗಣೇಶ್‌ ರಾಯರ್‌, ವರಸಿದ್ಧಿ ವೇಣುಗೋಪಾಲ್‌, ಪ್ರೇಮ್‌ ಕುಮಾರ್‌, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಸಿಂತಾ ಅನಿಲ್‌ಕುಮಾರ್‌, ರವೀಂದ್ರ ಬೆಳವಾಡಿ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ