ಆ್ಯಪ್ನಗರ

ಗುಣಮಟ್ಟದ ಕಾಮಗಾರಿಗೆ ನಿಗಾ ವಹಿಸಿ

ವಸತಿ ನಿಲಯಗಳು, ಅಂಗನವಾಡಿ ಕಟ್ಟಡ ಸೇರಿದಂತೆ ಕಾಮಗಾರಿಗಳು ಗುಣಮಟ್ಟದಿಂದ ನಡೆಯುವಂತೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿಗಾ ವಹಿಸಬೇಕು ಎಂದು ಜಿ.ಪಂ. ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಆರ್‌.ಆನಂದಪ್ಪ ಹೇಳಿದರು.

Vijaya Karnataka 16 Jun 2019, 5:00 am
ಚಿಕ್ಕಮಗಳೂರು : ವಸತಿ ನಿಲಯಗಳು, ಅಂಗನವಾಡಿ ಕಟ್ಟಡ ಸೇರಿದಂತೆ ಕಾಮಗಾರಿಗಳು ಗುಣಮಟ್ಟದಿಂದ ನಡೆಯುವಂತೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿಗಾ ವಹಿಸಬೇಕು ಎಂದು ಜಿ.ಪಂ. ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಆರ್‌.ಆನಂದಪ್ಪ ಹೇಳಿದರು.
Vijaya Karnataka Web CKM-15shivup4


ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಾಮಾನ್ಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ರೈಸ್‌ ಸಂಸ್ಥೆಯಿಂದ ನಿರ್ಮಿಸುತ್ತಿರುವ ಮುರಾರ್ಜಿ ದೇಸಾಯಿ ಶಾಲೆಗಳ ಕಟ್ಟಡ ಕಾಮಗಾರಿಗಳು ಕಳಪೆಯಾಗಿರುವ ಬಗ್ಗೆ ದೂರುಗಳಿವೆ. ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಬೇಕು ಎಂದು ಸೂಚಿಸಿದರು.

ಜಿ.ಪಂ. ಸದಸ್ಯೆ ಕವಿತಾಲಿಂಗರಾಜು ಮಾತನಾಡಿ, ಕೃಷಿ ಇಲಾಖೆಯಿಂದ ಜೂನ್‌ ತಿಂಗಳ ಅಂತ್ಯದ ಹೊತ್ತಿಗೆ ಕೃಷಿ ಅಭಿಯಾನ ಪ್ರಾರಂಭಿಸಿ ರೈತರಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಜಿ.ಪಂ. ಸದಸ್ಯ ವಿಜಯಕುಮಾರ್‌ ಮಾತನಾಡಿದರು. ಸದಸ್ಯರಾದ ರೇಣುಕಮ್ಮ, ಕೆ.ಜಿ.ರಾಧ, ಲಕ್ಕಮ್ಮಸಿದ್ದಪ್ಪ, ಮುಖ್ಯ ಕಾರ‍್ಯ ನಿರ್ವಹಣಾಧಿಕಾರಿ ಎಸ್‌.ಅಶ್ವತಿ, ಉಪ ಕಾರ‍್ಯದರ್ಶಿ ರಾಜಗೋಪಾಲ್‌ ಹಾಜರಿದ್ದರು.
......................
ಕೃಷಿ ಮತ್ತು ತೋಟಗಾರಿಕೆ ಇಲಾಖೆಯವರು ಅಂತರ್ಜಲ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ನೀರು ಹರಿಯುವ ಜಾಗದಲ್ಲಿ ಪ್ರತಿ ಗ್ರಾಮಗಳಲ್ಲೂ ಚೆಕ್‌ ಡ್ಯಾಂ ಮಾಡಿ ನೀರು ಸಂಗ್ರಹಿಸುವುದರಿಂದ ಅಂತರ್ಜಲ ಹೆಚ್ಚಾಗುತ್ತದೆ. ಈ ಬಗ್ಗೆ ಗಮನಹರಿಸಬೇಕು. ಅಧಿಕಾರಿಗಳು ಇಲಾಖೆಯ ಮಾಹಿತಿ ಮತ್ತು ಅನುಪಾಲನಾ ವರದಿಯನ್ನು ಸಭೆಗೆ ಬಂದಾಗ ನೀಡುತ್ತಿರುವುದು ಸರಿಯಲ್ಲ. ಒಂದು ವಾರದ ಮೊದಲೇ ಕಚೇರಿಯಲ್ಲಿ ವರದಿ ತಯಾರು ಮಾಡಿ ಕೊಡಬೇಕು ಎಂದು ಜಿ.ಪಂ. ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಆರ್‌.ಆನಂದಪ್ಪ ತಾಕೀತು ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ