ಆ್ಯಪ್ನಗರ

ಶ್ರೀ ಶಾರದಾಂಬೆಗೆ ಪೂಜೆ ಸಲ್ಲಿಸಿದ ನಿಖಿಲ್‌

ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಮತ ಎಣಿಕೆ ಮುನ್ನ ದಿನವಾದ ಬುಧವಾರ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿದರು

Vijaya Karnataka 23 May 2019, 5:00 am
ಶೃಂಗೇರಿ : ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಮತ ಎಣಿಕೆ ಮುನ್ನ ದಿನವಾದ ಬುಧವಾರ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿದರು.
Vijaya Karnataka Web nikhil submitted worship to sri sharadamba
ಶ್ರೀ ಶಾರದಾಂಬೆಗೆ ಪೂಜೆ ಸಲ್ಲಿಸಿದ ನಿಖಿಲ್‌


ಬೆಳಗ್ಗೆ ಹೆಲಿಕ್ಯಾಪ್ಟರ್‌ ಮೂಲಕ ಆಗಮಿಸಿದ ಅವರು ಶ್ರೀ ಶಾರದಾ ಪೀಠಕ್ಕೆ ಆಗಮಿಸಿ ಶ್ರೀ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀಮಠದ ಹೊರ ಪ್ರಾಂಗಣದ ತೋರಣ ಗಣಪತಿ, ಶ್ರೀ ಶಂಕರಚಾರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಗುರುಭವನಕ್ಕೆ ತೆರಳಿ ಜಗದ್ಗುರು ಭಾರತೀತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಿಖಿಲ್‌ ಹಾಗೂ ಅನಿತಾ ಕುಮಾರಸ್ವಾಮಿ ಅವರನ್ನು ಶ್ರೀಮಠದ ಅಧಿಕಾರಿಗಳು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಚುನಾವಣೆ ಫಲಿತಾಂಶ ನನ್ನ ಪರವಾಗಿ ಬರುವ ಸಂಪೂರ್ಣ ವಿಶ್ವಾಸವಿದೆ. ಈ ಹಿನ್ನೆಲೆಯಲ್ಲಿ ತಾಯಿ ಶಾರದಾಂಬೆ ಹಾಗೂ ಜಗದ್ಗುರುಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ. ಯಾವುದೇ ಸಮೀಕ್ಷೆಯನ್ನು ಪರಿಗಣಿಸದೇ ಮತದಾರರು ಆಶೀರ್ವಾದ ಮಾಡಿದ್ದಾರೆ ಎಂಬ ನಂಬಿಕೆ ಹೊಂದಿದ್ದೇನೆ. 2004ರಲ್ಲಿ ಜೆಡಿಎಸ್‌ ಪಕ್ಷ ಕ್ಕೆ ಕೇವಲ 2 ಸ್ಥಾನ ಬರುತ್ತದೆ ಸಮೀಕ್ಷೆಗಳು ಎಂದು ಹೇಳಿದ್ದವು. ಆಗ 58 ಸ್ಥಾನ ಜೆಡಿಎಸ್‌ ಪಡೆದಿತ್ತು ಎಂದರು.

ಅನಿತಾ ಕುಮಾರಸ್ವಾಮಿ ಮಾತನಾಡಿ, ಪೀಠಕ್ಕೆ ಬಂದಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ನಾವು ಶ್ರೀಮಠದ ಭಕ್ತರಾಗಿ ನಿರಂತರವಾಗಿ ಇಲ್ಲಿಗೆ ಭೇಟಿ ನೀಡಿ ತಾಯಿಗೆ ಪೂಜೆ ಸಲ್ಲಿಸಿ, ಜಗದ್ಗುರುಗಳ ಆಶೀರ್ವಾದ ಪಡೆಯುತ್ತಿದ್ದೇವೆ. ರಾಜ್ಯದಲ್ಲಿ ಜೆಡಿಎಸ್‌ ಆರು ಸ್ಥಾನ ಪಡೆಯಲಿದೆ. ಮೈತ್ರಿ ಸರಕಾರ ರಚನೆಯಾದಲ್ಲಿಂದಲೂ ಬಿಜೆಪಿಯವರು ಸರಕಾರಕ್ಕೆ ಡೆಡ್‌ ಲೈನ್‌ ನೀಡುತ್ತಾ ಬಂದಿದ್ದಾರೆ. ಆದರೆ, ಸರಕಾರ ಸ್ಥಿರವಾಗಿದೆ. ಇದೇ ಪರಿಸ್ಥಿತಿ ಮುಂದುವರಿಯಲಿದೆ. ಸರಕಾರ ಪತನಗೊಳಿಸುವ ಬಿಜೆಪಿ ಆಸೆ ಈಡೇರದು ಎಂದರು.

ಸ್ಥಳಿಯ ಜೆಡಿಎಸ್‌ ಮುಖಂಡರಾದ ಕೆ.ಎಸ್‌.ರಮೇಶ್‌, ಭರತ್‌ಗೌಡ, ಚೇತನ್‌, ಅಭಿಲಾಷ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ