ಆ್ಯಪ್ನಗರ

ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಇಲ್ಲ: ಶಾಸಕ

ತಾಲೂಕಿನಾದ್ಯಂತ ನಡೆಯುವ ಕಾಮಗಾರಿಗಳ ಗುಣಮಟ್ಟದ ವಿಚಾರದಲ್ಲಿ ಅಧಿಕಾರಿಗಳೊಂದಿಗೆ ರಾಜಿಯ ಪ್ರಶ್ನೆಯೇ ಇಲ್ಲ ಎಂದು ಶಾಸಕ ಡಿ.ಎಸ್‌.ಸುರೇಶ್‌ ಹೇಳಿದರು.

Vijaya Karnataka 26 Jun 2018, 8:56 pm
ತರೀಕೆರೆ: ತಾಲೂಕಿನಾದ್ಯಂತ ನಡೆಯುವ ಕಾಮಗಾರಿಗಳ ಗುಣಮಟ್ಟದ ವಿಚಾರದಲ್ಲಿ ಅಧಿಕಾರಿಗಳೊಂದಿಗೆ ರಾಜಿಯ ಪ್ರಶ್ನೆಯೇ ಇಲ್ಲ ಎಂದು ಶಾಸಕ ಡಿ.ಎಸ್‌.ಸುರೇಶ್‌ ಹೇಳಿದರು.
Vijaya Karnataka Web no compromise on work quality mla
ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಇಲ್ಲ: ಶಾಸಕ


ಪಟ್ಟಣದ ಡಿವಿಜಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕಾಮಗಾರಿಗಳಲ್ಲಿ ಯಾವುದಾದರೂ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. ಈ ಹಿಂದಿನ ತಮ್ಮ ಅವಧಿಯಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಂಡಿದ್ದು ಅದೇ ರೀತಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ತಾ.ಪಂ. ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್‌, ಪುರಸಭೆ ಅಧ್ಯಕ್ಷೆ ಟಿ.ಎಲ್‌.ಅಶ್ವಿನಿ, ಉಪಾಧ್ಯಕ್ಷೆ ಮಂಜುಳಾಬಾಯಿ, ಬಿಸಿಎಂ ಇಲಾಖೆಯ ವಿಸ್ತರಣಾಧಿಕಾರಿ ರಾಜೇಶ್ವರಿ, ಮೇಲ್ವಿಚಾರಕ ಕೃಷ್ಣಮೂರ್ತಿ, ಕುಡ್ಲೂರು ಗಿರೀಶ್‌, ಇಲಾಖೆ ಸಿಬ್ಬಂದಿ ಇನ್ನಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ