ಆ್ಯಪ್ನಗರ

ಪ್ರವಾಸಿ ತಾಣ ಅಭಿವೃದ್ಧಿಗೆ ಸೂಚನೆ

ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಧಿಕಾರಿಗಳು ಗಮನಹರಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸೂಚಿಸಿದರು.

Vijaya Karnataka 1 Sep 2019, 5:00 am
ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಧಿಕಾರಿಗಳು ಗಮನಹರಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸೂಚಿಸಿದರು.
Vijaya Karnataka Web CKM-31SHIVUP3


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶನಿವಾರ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಸಭೆಯಲ್ಲಿ, ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಳ್ಳಲಾದ ಮೂಲ ಸೌಲಭ್ಯಗಳ ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾನ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.ಪ್ರವಾಸಿಗರು ಹೆಚ್ಚು ಭೇಟಿ ನೀಡುವ ಪ್ರಾಕೃತಿಕ, ಧಾರ್ಮಿಕ ಪ್ರವಾಸಿ ತಾಣಗಳ ಅಭಿವೃದ್ಧಿ, ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪರಿಸರಕ್ಕೆ ತೊಂದರೆಯಾಗದಂತೆ ಸಮಗ್ರ ಅಭಿವೃದ್ಧಿಗೆ ಇಲಾಖೆ 15 ದಿನದೊಳಗೆ ಡಿಪಿಆರ್‌ ಸಲ್ಲಿಸಬೇಕು ಎಂದು ಸೂಚಿಸಿದರು.

ಬಸವನಹಳ್ಳಿ ಕೆರೆ, ಹೊನ್ನಮ್ಮನಹಳ್ಳ, ಗಾಳಿಕೆರೆ, ಮಾಣಿಕ್ಯಾಧಾರ, ಸಿರಿಮನೆ ಫಾಲ್ಸ್‌, ಕಲ್ಲತ್ತಿಗಿರಿಗಳಲ್ಲಿಅಗತ್ಯ ಇರುವ ಮೂಲ ಸೌಲಭ್ಯಗಳನ್ನು ನೀಡುವ ಜತೆಗೆ ತೂಗು ಸೇತುವೆ ನಿರ್ಮಾಣ, ಕಾಂಕ್ರಿಟ್‌ ವಾಲ್‌, ರಸ್ತೆ ನಿರ್ಮಾಣ ಮಾಡುವಂತೆ ತಿಳಿಸಿದರು.

ಮಾಣಿಕ್ಯಾಧಾರದ ನೀರು ಸಾರ್ವಜನಿಕರಿಂದ ಅಶುದ್ಧವಾಗುತ್ತಿದೆ. ಅಲ್ಲಿಗೆ ತೆರಳುವ ಪ್ರವಾಸಿಗರು ಮೂಢನಂಬಿಕೆಯಿಂದ ಬಟ್ಟೆಗಳನ್ನು ನೀರಿನಲ್ಲಿಹಾಕುತ್ತಿದ್ದು, ಅದನ್ನು ಸಂಪೂರ್ಣ ನಿಷೇಧಿಸಬೇಕು. ಪ್ರತಿನಿತ್ಯ ಸ್ವಚ್ಛತಾ ಕಾರ‍್ಯ ನಡೆಸಬೇಕು ಎಂದು ಸೂಚಿಸಿದರು.

ಕೈಮರ ಚೆಕ್‌ಪೋಸ್ಟ್‌ನಲ್ಲಿಸುಂಕ ವಸೂಲು ಮಾಡುತ್ತಿದ್ದು, ಅದನ್ನು ಸಾರ್ವಜನಿಕ ಶೌಚಾಲಯ ನಿರ್ವಹಣೆಗೆ ಬಳಸಬೇಕು. ಅಕ್ರಮವಾಗಿ ನಿರ್ಮಾಣವಾಗಿರುವ ರೆಸಾರ್ಟ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದರು.ಸಖರಾಯಪಟ್ಟಣದ ಶಕುನ ರಂಗನಾಥಸ್ವಾಮಿ ದೇವಾಲಯದಲ್ಲಿನಿರ್ಮಿಸಿರುವ ತಂಗುದಾಣ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಕಾಮಗಾರಿ ತಕ್ಷಣ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ಅಪರ ಜಿಲ್ಲಾಧಿಕಾರಿ ಡಾ.ಕುಮಾರ್‌ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪ್ರಥಮ ಆದ್ಯತೆ : ಚಿಕ್ಕಮಗಳೂರು ಜಿಲ್ಲೆಯ ಮೊದಲ ಆದ್ಯತೆಯಾಗಿ ಅಯ್ಯನಕೆರೆ, ಬಸವನಹಳ್ಳಿ ಕೆರೆ, ಹಿರೇಕೊಳಲೆಕೆರೆ, ಕೋಟೆ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಕಲ್ಲತ್ತಿಗಿರಿ, ಅಮೃತಾಪುರ, ಸಿರಿಮನೆ ಫಾಲ್ಸ್‌, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರವನ್ನು ಪ್ರವಾಸಿ ಕೇಂದ್ರಗಳನ್ನಾಗಿ ಮಾಡುವ ನಿಟ್ಟಿನಲ್ಲಲಿ 15 ದಿನದಲ್ಲಿಡಿಪಿಆರ್‌ ಸಲ್ಲಿಸಬೇಕು. -ಸಿ.ಟಿ.ರವಿ, ಸಚಿವ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ