ಆ್ಯಪ್ನಗರ

ಪಿಕಪ್‌ ವಾಹನ ಪಲ್ಟಿ: ಮಹಿಳೆ ಸಾವು

ಸಮೀಪ ಬೇಗೂರು ಗೇಟ್‌ನಿಂದ ಆಸಂದಿ ಗ್ರಾಮಕ್ಕೆ ತೆರಳುತ್ತಿದ್ದ ಪಿಕಪ್‌ ವಾಹನ ಪಲ್ಟಿಯಾಗಿ ಮಹಿಳೆ ಮೃತಪಟ್ಟು 11 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

Vijaya Karnataka 13 Feb 2018, 5:00 am

ಅಜ್ಜಂಪುರ: ಸಮೀಪ ಬೇಗೂರು ಗೇಟ್‌ನಿಂದ ಆಸಂದಿ ಗ್ರಾಮಕ್ಕೆ ತೆರಳುತ್ತಿದ್ದ ಪಿಕಪ್‌ ವಾಹನ ಪಲ್ಟಿಯಾಗಿ ಮಹಿಳೆ ಮೃತಪಟ್ಟು 11 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

ತರೀಕೆರೆ ವೀಣಾ (35) ಮೃತಪಟ್ಟವರು. ಬೇಗೂರಿನಿಂದ ಆಸಂದಿಯ ಸಂಬಂಧಿಕರ ಮನೆಗೆ ತಮ್ಮ ಮಕ್ಕಳೊಂದಿಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಜತೆಯಲ್ಲಿ ಅಂತರಗಟ್ಟೆ ನಂದೀಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ 7 ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ 4 ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

ಚಾಲಕ ಪ್ರವೀಣನನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ. ವಿದ್ಯಾರ್ಥಿನಿಗೆ ಕೈ ಮುರಿದರೆ, ಇನ್ನೋರ್ವ ವಿದ್ಯಾರ್ಥಿ ಕೈಗೆ ಪೆಟ್ಟು ಬಿದ್ದಿದೆ.

ಗಾಯಾಳುಗಳಿಗೆ ಅಜ್ಜಂಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಾಳುಗಳ ಮನೆಗೆ ಭೇಟಿ ನೀಡಿದ ಪ್ರಾಂಶುಪಾಲ ಹಾ.ಚನ್ನಬಸಪ್ಪ ಸಾಂತ್ವನ ಹೇಳಿ, ತೀವ್ರವಾಗಿ ಕೈ ಮುರಿದ ಇಬ್ಬರಿಗೆ ಮಾರ್ಚ್‌ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ