ಆ್ಯಪ್ನಗರ

ಪ್ಲಾಸ್ಟಿಕ್‌ ಅಕ್ರಮ ದಾಸ್ತಾನು: ಕ್ರಮದ ಎಚ್ಚರಿಕೆ

ಪಟ್ಟಣದ ಕೆಲವು ಗೋಡೌನ್‌ಗಳಲ್ಲಿ ಅಕ್ರಮ ಪ್ಲಾಸ್ಟಿಕ್‌ ವಸ್ತುಗಳನ್ನು ಸಂಗ್ರಹಿಸಿಟ್ಟಿರುವ ಮಾಹಿತಿ ಬಂದಿದ್ದು, ದಾಳಿ ನಡೆಸಿ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಪುರಸಭೆ ಮುಖ್ಯಾಧಿಕಾರಿ ಗಿರೀಶ್‌ ಎಚ್ಚರಿಕೆ ನೀಡಿದರು.

Vijaya Karnataka 19 Jul 2019, 5:00 am
ತರೀಕೆರೆ : ಪಟ್ಟಣದ ಕೆಲವು ಗೋಡೌನ್‌ಗಳಲ್ಲಿ ಅಕ್ರಮ ಪ್ಲಾಸ್ಟಿಕ್‌ ವಸ್ತುಗಳನ್ನು ಸಂಗ್ರಹಿಸಿಟ್ಟಿರುವ ಮಾಹಿತಿ ಬಂದಿದ್ದು, ದಾಳಿ ನಡೆಸಿ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಪುರಸಭೆ ಮುಖ್ಯಾಧಿಕಾರಿ ಗಿರೀಶ್‌ ಎಚ್ಚರಿಕೆ ನೀಡಿದರು.
Vijaya Karnataka Web plastic illicit inventory warning of action
ಪ್ಲಾಸ್ಟಿಕ್‌ ಅಕ್ರಮ ದಾಸ್ತಾನು: ಕ್ರಮದ ಎಚ್ಚರಿಕೆ


ಪಟ್ಟಣದ ಕನಕ ಕಲಾ ಭವನದಲ್ಲಿ ಪ್ಲಾಸ್ಟಿಕ್‌ ಸಂಪೂರ್ಣ ನಿಷೇಧ ಕುರಿತು ಗುರುವಾರ ಏರ್ಪಡಿಸಲಾಗಿದ್ದ ಉದ್ಯಮಿಗಳು, ವರ್ತಕರು, ವ್ಯಾಪಾರಸ್ಥರ ಸಭೆಯಲ್ಲಿ ಮಾತನಾಡಿದರು. ಪರಿಸರ ಸಂರಕ್ಷ ಣೆಗಾಗಿ ರಾಷ್ಟ್ರೀಯ ಹಸಿರು ಪೀಠದ ಆದೇಶದ ಪ್ರಕಾರ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಪರಿಸರ ಅಧಿಕಾರಿ ಇ.ಪ್ರಕಾಶ್‌ ಮಾತನಾಡಿ, ಮೂಲದಲ್ಲಿಯೇ ಕಸ ವಿಂಗಡಣೆ ವ್ಯವಸ್ಥಿತವಾಗಿ ಆಗುತ್ತಿಲ್ಲ. ಪರಿಸರದ ಸಂರಕ್ಷ ಣೆಗಾಗಿ ಪ್ರತಿಯೊಬ್ಬರೂ ಮನೆಗಳಲ್ಲಿಯೇ ಕಸ ವಿಂಗಡಿಸುವ ಮೂಲಕ ಸ್ವಚ್ಚತೆ ಕಾಪಾಡುವಲ್ಲಿ ಪುರಸಭೆಗೆ ಸಹಕರಿಸಬೇಕು ಎಂದು ಹೇಳಿದರು. ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ಹಾಗೂ ಇನ್ನಿತರ ಆಹಾರ ಪದಾರ್ಥಗಳನ್ನು ತಯಾರಿಸಲು ಪ್ಲಾಸ್ಟಿಕ್‌ ಬಳಸುತ್ತಿರುವ ಮಾಹಿತಿ ಇದೆ. ಅಂತವರ ವಿರುದ್ಧ ಪರಿಸರ ಸಂರಕ್ಷ ಣಾ ಕಾಯಿದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಪರಿಸರ ಎಂಜಿನಿಯರ್‌ ತಾಹಿರಾ ತಸ್ನೀಮ್‌, ಹಿರಿಯ ಆರೋಗ್ಯ ನಿರೀಕ್ಷ ಕ ಮಹೇಶ್‌, ಕಿರಿಯ ಆರೋಗ್ಯ ನಿರೀಕ್ಷ ಕ ನಾಗಪ್ಪ ಇದ್ದರು. ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಕಳೆದ ಕೆಲವು ದಿನಗಳಿಂದ ಪ್ಲಾಸ್ಟಿಕ್‌ ನಿಷೇಧ ಮಾಡಿ ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ