ಆ್ಯಪ್ನಗರ

ಪ್ಲಾಸ್ಟಿಕ್‌ ಬಳಕೆ ಪರಿಸರಕ್ಕೆ ಮಾರಕ

ಪ್ಲಾಸ್ಟಿಕ್‌ ಬಳಕೆಯಿಂದ ವಿಶ್ವದಾದ್ಯಂತ ಪರಿಸರದ ಮೇಲೆ ದುಶ್ಪರಿಣಾಮ ಬೀರಿದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷೆ ಬಿ.ಸಿ.ಗೀತಾ ಹೇಳಿದರು.

Vijaya Karnataka 7 Sep 2018, 5:00 am
ಬಾಳೆಹೊನ್ನೂರು: ಪ್ಲಾಸ್ಟಿಕ್‌ ಬಳಕೆಯಿಂದ ವಿಶ್ವದಾದ್ಯಂತ ಪರಿಸರದ ಮೇಲೆ ದುಶ್ಪರಿಣಾಮ ಬೀರಿದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷೆ ಬಿ.ಸಿ.ಗೀತಾ ಹೇಳಿದರು.
Vijaya Karnataka Web CKM-6BHR3


ಅವರು ಗುರುವಾರ ಬಾಳೆಹೊನ್ನೂರಿನಲ್ಲಿ ಬಿ.ಕಣಬೂರು ಗ್ರಾ.ಪಂ. ಹಮ್ಮಿಕೊಂಡಿದ್ದ ಪ್ಲಾಸ್ಟಿಕ್‌ ಮುಕ್ತ ಬಾಳೆಹೊನ್ನೂರು ಜಾಥಾ ಉದ್ಘಾಟಿಸಿ ಮಾತನಾಡಿದರು.

ಮಿತಿಮೀರಿದ ಪ್ಲಾಸ್ಟಿಕ್‌ ಬಳಕೆಯಿಂದ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಎಲ್ಲೆಂದರಲ್ಲಿ ಪ್ಲಾಸ್ಟಿಕ್‌ ಬಳಸಿ ಬಿಸಾಕುತ್ತಿದ್ದು ಪರಿಸರ ಮಾಲಿನ್ಯವಾಗಿದೆ. ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕೆಂದರು.

ತಾ.ಪಂ ಸದಸ್ಯ ಟಿ.ಎಂ.ನಾಗೇಶ್‌ ಮಾತನಾಡಿ, ಪ್ಲಾಸ್ಟಿಕ್‌ ಸುಡುವಿಕೆಯಿಂದ ಓಝೋನ್‌ ಪದರಕ್ಕೆ ಹಾನಿಯಾಗಲಿದ್ದು ಪ್ಲಾಸ್ಟಿಕ್‌ನ್ನು ವೈಜ್ಞಾನಿಕವಾಗಿ ನಾಶಪಡಿಸಬೇಕೆಂದರು.

ಜಿಲ್ಲಾ ಚುಸಾಪ ಅಧ್ಯಕ್ಷ ಯಜ್ಞಪುರುಷ ಭಟ್‌ ಮಾತನಾಡಿ, ಪ್ರಪಂಚದೆಲ್ಲೆಡೆ ಪ್ಲಾಸ್ಟಿಕ್‌ ನಿರ್ಬಂಧಕ್ಕೆ ಮುಂದಾಗಿದ್ದು ಸಮಯೋಚಿವಾಗಿದೆ. ಗ್ರಾ.ಪಂ ಮಟ್ಟದಲ್ಲೂ ಪರಿಸರ ಸ್ವಚ್ಛತೆ ಬಗ್ಗೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ. ಸರಕಾರವೇ ಪ್ಲಾಸ್ಟಿಕ್‌ ಉತ್ಪಾದನೆ ಮಾಡುವುದನ್ನು ಕಾನೂನಿನ ಮೂಲಕ ನಿರ್ಬಂಧಿಸಬೇಕೆಂದರು.

ಬಿ.ಕಣಬೂರು ಗ್ರಾ.ಪಂ ಅಧ್ಯಕ್ಷ ಮಹಮ್ಮದ್‌ ಹನೀಫ್‌ ಮಾತನಾಡಿ, ಪ್ಲಾಸ್ಟಿಕ್‌ ಬಳಕೆಯಿಂದಾಗುವ ಸಮಸ್ಯೆಗಳನ್ನು ಅರಿತುಕೊಂಡು ಪ್ಲಾಸ್ಟಿಕ್‌ ಮುಕ್ತ ಗ್ರಾ.ಪಂ, ಅನ್ನಾಗಿಸಲು ಗ್ರಾಮಸ್ತರು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಪ್ಲಾಸ್ಟಿಕ್‌ ಬಳಕೆ ಬಗ್ಗೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧಕ್ಷರಾದ ರತ್ನಮ್ಮ, ಹಾಗೂ ಸದಸ್ಯರು, ಪಿಡಿಒ ಸೋಮಶೇಖರ್‌, ರೋಟರಿ ಅಧ್ಯಕ್ಷ ಬಿ.ಎಂ.ಜಯರಾಂ, ಇನ್ನರ್‌ ವ್ಹೀಲ್‌ ಅಧ್ಯಕ್ಷೆ ಮೇನಕಾ ಜಯಪ್ರಕಾಶ್‌, ಲಯನ್ಸ್‌ ಅಧ್ಯಕ್ಷ ಮಂಜುನಾಥ್‌ ತುಪ್ಪೂರು, ಜೆ.ಸಿ ಅಧ್ಯಕ್ಷ ಮನುಕುಮಾರ್‌, ಹೋಬಳಿ ಕಸಾಪ ಅಧ್ಯಕ್ಷ ಸತೀಶ್‌ ಅರಳಿಕೊಪ್ಪ, ಆಟೊ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ರು ಪದಾಧಿಕಾರಿಗಳು, ಎಸ್‌ಜೆಆರ್‌ಸಿ ಕಾಲೇಜಿನ ಪ್ರಾಚಾರ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು, ಹಾಗೂ ಎನ್‌ಎಸ್‌ಎಸ್‌ ಘಟಕ, ಕಂದಾಯ ಹಾಗೂ ಪೊಲೀಸ್‌ ಇಲಾಖೆ ಸೇರಿದಂತೆ ವಿದ್ಯಾರ್ಥಿಗಳು ಸಂಘ ಸಂಸ್ಥೆ ಪದಾಧಿಕಾರಿಗಳು ಜಾಥದಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ