ಆ್ಯಪ್ನಗರ

ಈ ಬಾರಿಯೂ ಮೋದಿ ಅಲೆಯಿಂದ ಜಾಸ್ತಿ ಮತ ಬರುತ್ತೆ: ಬಿಎಸ್‌ವೈ ವಿಶ್ವಾಸ

ವಿವಿಧ ಸಂಸ್ಥೆಗಳು ನಡೆಸಿರುವ ಎಲ್ಲ ಸಮೀಕ್ಷೆಗಳಲ್ಲಿ ಮತ್ತೆ ಮೋದಿಯೇ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿರುವುದಾಗಿ ತಿಳಿಸಿದರು.

Vijaya Karnataka Web 14 Mar 2019, 3:48 pm
ಚಿಕ್ಕಮಗಳೂರು: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅಲೆ ಇದ್ದು, ಕಳೆದ ಬಾರಿಗಿಂತ ಶೇ.10-12ರಷ್ಟು ಹೆಚ್ಚು ಮತಗಳು ಬರುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Vijaya Karnataka Web bsy


ಶೃಂಗೇರಿಯಲ್ಲಿ ಶಾರದಾಂಬೆ ದರ್ಶನದ ಬಳಿಕ ಮಾತನಾಡಿದ ಅವರು, ವಿವಿಧ ಸಂಸ್ಥೆಗಳು ನಡೆಸಿರುವ ಎಲ್ಲ ಸಮೀಕ್ಷೆಗಳಲ್ಲಿ ಮತ್ತೆ ಮೋದಿಯೇ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿರುವುದಾಗಿ ತಿಳಿಸಿದರು.

ಇದೇ 17ರಂದು ಕೋರ್ ಕಮಿಟಿ ಸಭೆ ನಡೆಯಲಿದ್ದು, 18ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಅದರಂತೆ, ರಾಜ್ಯದಲ್ಲಿ 22 ಕ್ಷೇತ್ರ ಗೆದ್ದೆ ಗೆಲುತ್ತೇವೆ ಎಂದು ಹೇಳಿದರು.

ಇಲ್ಲಿಯವರೆಗೂ ಮಂಡ್ಯ ರಾಜಕಾರಣದ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಹೇಳಿದ ಬಿಎಸ್‌ವೈ, ಅಂಬರೀಷ್ ಅವರ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅಬಿಮಾನವಿತ್ತು. ಆದರೆ, ಅವರು ತೀರಿ ಹೋದ ಬಳಿಕ ಕ್ಷೇತ್ರಕ್ಕೆ ಅಂಬಿ ಕೊಡುಗೆ ಏನು ಎಂದು ಪ್ರಶ್ನಿಸುತ್ತಿದ್ದಾರೆ. ಇದು ಸಿಎಂಗೆ ಶೋಭೆ ತರುವಂತದ್ದಲ್ಲ. ಮುಖ್ಯಮಂತ್ರಿಗಳು ಅಂಬರೀಷ್‌ಗೆ ಅಪಮಾನ ಮಾಡವಷ್ಟು ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದು ಕಿಡಿ ಕಾರಿದರು.

ಸಿಎಂ ಹೇಳಿಕೆಯಿಂದ ಮಂಡ್ಯ ಜನರು ಆಕ್ರೋಶಗೊಂಡಿದ್ದಾರೆ. ಅಲ್ಲಿಯ ವಾತಾವರಣ ಬೇರೆಯೇ ಇದೆ. ಸುಮಲತಾ ನಿರ್ಧಾರ ನೋಡಿ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ ಎಂದು ಹೇಳಿದರು.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದು ಮುಖಂಡರ ಮೈತ್ರಿಯೇ ಹೊರತು, ಕಾರ್ಯಕರ್ತರದಲ್ಲ ಎಂದರು. ಇನ್ನು ದೇವೇಗೌಡರ ಕಣ್ಣೀರು ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಎಸ್‌ವೈ, ಮೊಮ್ಮಗನಿಗೆ ಟಿಕೆಟ್ ಕೊಟ್ಟು ಮನೆ ಮಂದಿಯಲ್ಲ ಕಣ್ಣೀರು ಹಾಕುತ್ತಿದ್ದಾರೆ. ಈ ಕಣ್ಣೀರಿಗೆ ಅರ್ಥ ಇದ್ಯಾ. ಜನರನ್ನು ಮರುಳು ಮಾಡುವ ವ್ಯವಸ್ಥಿತಿ ಷಡ್ಯಂತ್ರ ಇದು ಎಂದು ಗುಡುಗಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ