ಚಿಕ್ಕಮಗಳೂರು: ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಯೋಗೇಶ್ (31) ಮೃತ ಪೇದೆ. ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಆದರೆ, ಪೇದೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕರ್ತವ್ಯನಿರತ ಪೊಲೀಸ್ ಪೇದೆ ನೆರಳಾಡುತ್ತಿರುವುದನ್ನು ಕಂಡು ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆಂದು ವೈದ್ಯರು ಖಚಿತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಪರೀಶ್ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯೋಗೇಶ್ (31) ಮೃತ ಪೇದೆ. ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಆದರೆ, ಪೇದೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕರ್ತವ್ಯನಿರತ ಪೊಲೀಸ್ ಪೇದೆ ನೆರಳಾಡುತ್ತಿರುವುದನ್ನು ಕಂಡು ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆಂದು ವೈದ್ಯರು ಖಚಿತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಪರೀಶ್ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.