ಆ್ಯಪ್ನಗರ

ಒಳಿತು, ಕೆಡುಕು ಅರಿಯುವುದೇ ಕಾನೂನು ಪಾಲನೆ

ಕಾನೂನು ಉಲ್ಲಂಘಿಸಿ ನನಗೆ ಕಾನೂನಿನ ಬಗ್ಗೆ ತಿಳಿದಿಲ್ಲ ಎಂದು ಮನವಿ ಮಾಡಿದರೆ ನ್ಯಾಯಾಲಯ ಕ್ಷಮಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕಾನೂನು ತಿಳಿವಳಿಕೆ ಹೊಂದಬೇಕು ಎಂದು ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶ ಎ.ಎಸ್‌.ಸದಲಗೆ ಹೇಳಿದರು.

Vijaya Karnataka 25 May 2019, 5:00 am
ಚಿಕ್ಕಮಗಳೂರು : ಕಾನೂನು ಉಲ್ಲಂಘಿಸಿ ನನಗೆ ಕಾನೂನಿನ ಬಗ್ಗೆ ತಿಳಿದಿಲ್ಲ ಎಂದು ಮನವಿ ಮಾಡಿದರೆ ನ್ಯಾಯಾಲಯ ಕ್ಷಮಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕಾನೂನು ತಿಳಿವಳಿಕೆ ಹೊಂದಬೇಕು ಎಂದು ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶ ಎ.ಎಸ್‌.ಸದಲಗೆ ಹೇಳಿದರು.
Vijaya Karnataka Web CKM-24RUDRAP3


ನಗರದ ರಾಮಕೃಷ್ಣ ನರ್ಸಿಂಗ್‌ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಚಿತ್ತ ವಿಕಲತೆ ದಿನಾಚರಣೆಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕಾನೂನು ಕ್ಲಿಷ್ಠಕರವಾದಂತಹ ಸಮಸ್ಯೆಯಲ್ಲ. ಅಹಿತಕರ ಘಟನೆಗೆ ಅಸ್ಪದ ನೀಡದೆ ಸಮಾಜದಲ್ಲಿ ಯಾವುದು ಒಳಿತು, ಯಾವುದು ಕೆಡುಕು ಎಂಬುದನ್ನು ಅರಿತು ಬಾಳಿದರೆ ಸಾಕು ಅದೇ ಕಾನೂನು ಪಾಲಿಸಿದಂತೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್‌ ಚೇಂಗಟಿ ಮಾತನಾಡಿ, ವಿಶ್ವ ಮಾನಸಿಕ ಚಿತ್ತ ದಿನಾಚರಣೆಯನ್ನು 1986 ರಿಂದಲೇ ಆಚರಣೆ ಮಾಡುತ್ತಿದ್ದೇವೆ. ಆದರೂ ಸಹ ಮಾನಸಿಕ ಚಿತ್ತ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಸುಮಾರು ಎರಡೂವರೆ ಕೋಟಿಗಿಂತಲೂ ಅಧಿಕ ಜನರು ಈ ರೋಗದಿಂದ ಬಳಲುತ್ತಿರುವುದು ವಿಷಾದನೀಯ.ಇಂತಹ ಕಾಯಿಲೆಗೆ ಒಳಪಟ್ಟವರನ್ನು ಗುರುತಿಸಿ ಚಿಕಿತ್ಸೆಕೊಡಿಸುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಎಂದರು.

ರಾಮಕೃಷ್ಣ ನರ್ಸಿಂಗ್‌ ಕಾಲೇಜಿನ ಆಡಳಿತಾಧಿಕಾರಿ ಉಮಾಮಹೇಶ್ವರ್‌ ಅಧ್ಯಕ್ಷ ತೆ ವಹಿಸಿ ಮಾತನಾಡಿ,ಮಾನಸಿಕ ಸ್ಥಿರ ಆರೋಗ್ಯ ಹಾಗೂ ಮಾನಸಿಕ ವ್ಯಕ್ತಿಗಳ ಹಕ್ಕುಗಳ ಬಗ್ಗೆ ಹಲವು ವಿಷಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ವಿದ್ಯಾರ್ಥಿಗಳು ತಿಳಿದುಕೊಂಡಾಗ ಮಾತ್ರ ಭವಿಷ್ಯದಲ್ಲಿ ಬಹಳ ಉಪಯುಕ್ತವಾಗುತ್ತದೆ ಎಂದುಹೇಳಿದರು.

ಈ ಸಂದರ್ಭದಲ್ಲಿ ಮಾನಸಿಕ ಚಿತ್ತ ಕುರಿತ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಜಿಲ್ಲಾ ಆಸ್ಪತ್ರೆಯ ಮನೋಶಾಸ್ತ್ರಜ್ಞ ಡಾ. ವಿನಯ್‌ ಕುಮಾರ್‌, ಮನೋವ್ಯಾಧಿಯ ಕಾರಣಗಳು ಮತ್ತು ಚಿಕಿತ್ಸೆಗಳ ಬಗ್ಗೆ , ನ್ಯಾಯಾವಾದಿ ಕೆ.ಎನ್‌.ಚಂದ್ರಶೇಖರ್‌ ಮಾನಸಿಕ ಆರೋಗ್ಯ ಕಾಯಿದೆ ಬಗ್ಗೆ ಉಪನ್ಯಾಸ ನೀಡಿದರು. ಸಾಮಾಜಿಕ ಭದ್ರತಾ ನಿರೀಕ್ಷ ಕಿ ಶಶಿಕಲಾ, ಕಾಲೇಜಿನ ಪ್ರಾಚಾರ್ಯೆ ಪ್ರೀತಿ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ