ಆ್ಯಪ್ನಗರ

ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ

ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಶ್ರೀ ರಾಮಸೇನೆ, ದಲಿತ್‌ ಜನಸೇನಾ ಸಂಘಟನೆಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

Vijaya Karnataka 7 Aug 2018, 5:00 am
ಚಿಕ್ಕಮಗಳೂರು : ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಶ್ರೀ ರಾಮಸೇನೆ, ದಲಿತ್‌ ಜನಸೇನಾ ಸಂಘಟನೆಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
Vijaya Karnataka Web CKM-6RUDRAP2


ನಗರದ ಆಜಾದ್‌ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು, ಬಾಂಗ್ಲಾದೇಶದಿಂದ ನುಸುಳಿರುವ ಅಕ್ರಮ ವಲಸಿಗರನ್ನು ಮೊದಲು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಘೋಷಣೆ ಕೂಗಿದರು.

ಈ ಸಂದರ್ಭ ಶ್ರೀ ರಾಮಸೇನೆ ಜಿಲ್ಲಾಧ್ಯಕ್ಷ ರಂಜಿತ್‌ ಶೆಟ್ಟಿ ಮಾತನಾಡಿ, ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ಅಸ್ಸಾಂ ರಾಜ್ಯದಲ್ಲಿ ನಡೆದ ಪೌರತ್ವ ನೋಂದಣಿ ಅಭಿಯಾನದಲ್ಲಿ 40ಲಕ್ಷಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ನುಸುಳುಕೋರರು ಇರುವ ಅಘಾತಕಾರಿ ಸುದ್ದಿ ಹೊರಬಿದ್ದಿದೆ. ಇದೇ ರೀತಿ ದೇಶಾದ್ಯಂತ ಕೋಟ್ಯಂತರ ಬಾಂಗ್ಲಾ ನುಸುಳುಕೋರರು ಪಸರಿಸಿದ್ದು ತಕ್ಷಣವೇ ದೇಶದ್ರೋಹಿಗಳನ್ನು ಇಲ್ಲಿಂದ ಹೊರಹಾಕಬೇಕು ಎಂದು ಒತ್ತಾಯಿಸಿದರು.

ದೇಶದ ಆಂತರಿಕ ಭದ್ರತೆ, ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತಿತರ ಅನೇಕ ಕ್ಷೇತ್ರಗಳ ಮೇಲೆ ಆಕ್ರಮ ಬಾಂಗ್ಲಾದೇಶಿಗರು ಪರಿಣಾಮ ಬೀರಲಿದ್ದಾರೆ. ಈ ಬಗ್ಗೆ ಕೇಂದ್ರ ಸರಕಾರ ತಕ್ಷಣ ಕಾನೂನು ಕ್ರಮ ಕೈಗೊಂಡು ಅವರನ್ನು ದೇಶದಿಂದ ಹೊರಹಾಕಬೇಕು ಎಂದು ಆಗ್ರಹಿಸಿದರು.

ದಲಿತ್‌ ಜನಸೇನಾ ಸಂಘಟನೆಯ ಅನಿಲ್‌ ಆನಂದ್‌, ಶ್ರೀ ರಾಮಸೇನೆಯ ದಿಲೀಪ್‌ಶೆಟ್ಟಿ, ಮನೋಜ್‌, ಸಂದೀಪ್‌, ಪವನ್‌, ರಂಜಿತ್‌, ಚೇತನ್‌, ಶರತ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ