ಆ್ಯಪ್ನಗರ

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

ಗೌರವ ಧನ ಹೆಚ್ಚಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತರು ನಗರದಲ್ಲಿ ಗುರವಾರ ಪ್ರತಿಭಟನೆ ನಡೆಸಿದರು.

Vijaya Karnataka 5 Jul 2019, 5:00 am
ಚಿಕ್ಕಮಗಳೂರು: ಗೌರವ ಧನ ಹೆಚ್ಚಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತರು ನಗರದಲ್ಲಿ ಗುರವಾರ ಪ್ರತಿಭಟನೆ ನಡೆಸಿದರು.
Vijaya Karnataka Web protest demanding increase in honors
ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ


ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ನಗರದ ಬೋಳರಾಮೇಶ್ವರ ದೇವಾಲಯದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಹಲವಾರು ಕಾರ್ಯರ್ತರು ಬೇಡಿಕೆ ಬಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಸಂಘದ ಜಿಲ್ಲಾಧ್ಯಕ್ಷೆ ತಾರಾಕೃಷ್ಣ ಮಾತನಾಡಿ, ಆಶಾ ಕಾರ್ಯಕರ್ತರಿಗೆ ರಾಜ್ಯ, ಕೇಂದ್ರ ಸರಕಾರಗಳೆರಡೂ ಸೇರಿ ಕನಿಷ್ಠ ಮಾಸಿಕ ವೇತನ 12 ಸಾವಿರ ರೂ. ನಿಗದಿ ಮಾಡಬೇಕು. ಆಶಾ ಸಾಫ್ಟ್‌ ಅಥವಾ ಆರ್‌ಸಿಎಚ್‌ ಪೋರ್ಟಲ್‌ಗೆ ಆಶಾ ಪ್ರೋತ್ಸಾಹಧನ ಜೋಡಣೆ ಮಾಡುತ್ತಿರುವುದನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ಕಳೆದ 9 ತಿಂಗಳಿಂದ ಬಾಕಿ ಇರುವ ಎಂಸಿಟಿಎಸ್‌ ಪ್ರೋತ್ಸಾಹಧನ ನೀಡುವುದು, ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆ, ನಿವೃತ್ತಿ ಹೊಂದುವ ಕಾರ್ಯಕರ್ತರಿಗೆ ಪಿಂಚಣಿ, ಇಡಿಗಂಟು ನೀಡುವುದು, ಪ್ರಧಾನಮಂತ್ರಿ ಜೀವನಜ್ಯೋತಿ ಮತ್ತು ಸುರಕ್ಷಾ ಭಿಮಾ ಯೋಜನೆ ಜಾರಿ, ಹೆರಿಗೆ ರಜೆಯಲ್ಲಿ ಮಾಸಿಕ ಗೌರವಧನ, ನಿಗದಿತ ಸಮಯಕ್ಕೆ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಸಲಹೆ ಗಾರ ಶಿವಪ್ರಕಾಶ್‌ ಮಾತನಾಡಿ, ಕೇಂದ್ರ ಮಾರ್ಗಸೂಚಿಯಂತೆ ನಗರ ಆಶಾ ಕಾರ್ಯಕರ್ತರಿಗೆ ಎರಡೂವರೆ ಸಾವಿರ ಜನಸಂಖ್ಯೆಗೆ ಮಾತ್ರ ಕಾರ್ಯನಿರ್ವಹಿಸಲು ಮಿತಿ ನೀಡಬೇಕು. ಸಂಘದೊಂದಿಗೆ ಎನ್‌ಎಚ್‌ಎಂ, ಆಯುಕ್ತರು ಈ ಹಿಂದಿನ ಸಭೆಗಳಲ್ಲಿ ತೆಗೆದುಕೊಂಡಿರುವ ನಿರ್ಣಯಗಳನ್ನು ಪಾಸು ಮಾಡಬೇಕು ಹಾಗೂ ಕರ್ನಾಟಕ ಸರಕಾರದ ಆದೇಶದಂತೆ ಪ್ರತಿ 3 ತಿಂಗಳಿಗೊಮ್ಮೆ ಆಶಾ ಕುಂದುಕೊರತೆ ನಿವಾರಣಾ ಸಭೆಯನ್ನು ಸಂಘದ ಪದಧಕಾರಿಗಳೊಂದಿಗೆ ನಡೆಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಾರ್ಯದರ್ಶಿ ಮೈನಾ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ