ಆ್ಯಪ್ನಗರ

ರಸ್ತೆ ದುರಸ್ತಿಗೆ ಪ್ರತಿಭಟನೆ ಎಚ್ಚರಿಕೆ

ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11ನೇ ವಾರ್ಡ್‌ನ ಎರಡು ರಸ್ತೆ ಸಂಪೂರ್ಣ ಗುಂಡಿಯಿಂದ ಕೂಡಿದ್ದು, ದುರಸ್ತಿ ಪಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Vijaya Karnataka 19 Jun 2019, 5:00 am
ಮೂಡಿಗೆರೆ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11ನೇ ವಾರ್ಡ್‌ನ ಎರಡು ರಸ್ತೆ ಸಂಪೂರ್ಣ ಗುಂಡಿಯಿಂದ ಕೂಡಿದ್ದು, ದುರಸ್ತಿ ಪಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
Vijaya Karnataka Web CKM-18MDG-P1


11ನೇ ವಾರ್ಡ್‌ನ ಜೆ.ಎಂ.ರಸ್ತೆಯಿಂದ ತತ್ಕೋಳ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ 4 ವರ್ಷದಿಂದ ದುರಸ್ತಿ ಕಂಡಿಲ್ಲ. ಪತ್ರಿನಿತ್ಯ ವಾಹನ ಚಾಲಕರು ಹರ ಸಾಹಸ ಪಡುವಂತಾಗಿದೆ. ಅಲ್ಲದೇ ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಂಡು ವಾಹನಗಳು ಗುಂಡಿಯ ಮೇಲೆಯೆ ಸಂಚರಿಸುವುದರಿಂದ ಕೊಳಚೆ ನೀರು ಅಕ್ಕಪಕ್ಕದಲ್ಲಿರುವ ಮನೆಗಳಿಗೆ ಹಾರುತ್ತಿದೆ.

ಇದೇ ವಾರ್ಡ್‌ನ ಕುವೆಂಪು ನಗರದಲ್ಲಿ ಕಳೆದ ನಾಲ್ಕೈದು ವರ್ಷದಿಂದ ರಸ್ತೆ ಗುಂಡಿ ಬಿದ್ದಿದೆ. ಜನರು ದುರಸ್ತಿ ಕಾಣದೆ ಪ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಬಾರಿ ನಗರೋತ್ಥಾನ ಯೋಜನೆಯಡಿ ಪ.ಪಂ.ಯಿಂದ ಪಟ್ಟಣದ ಅನೇಕ ರಸ್ತೆಗಳನ್ನು ಕಾಂಕ್ರಿಟೀಕರಣಗೊಳಿಸಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈ ಸಂದರ್ಭ ಪಟ್ಟಣ ವ್ಯಾಪ್ತಿಯಲ್ಲಿ ಗುಂಡಿ ಬಿದ್ದ ರಸ್ತೆಗಳನ್ನು ಬಿಟ್ಟು ಉತ್ತಮ ರಸ್ತೆಗಳಿಗೆ ಕಾಂಕ್ರಿಟ್‌ ಹಾಕಿ ರಸ್ತೆ ನಿರ್ಮಿಸಲಾಗಿತ್ತು. 11ನೇ ವಾರ್ಡ್‌ ರಸ್ತೆ ದುರಸ್ಥಿಪಡಿಸಲಾಗುವುದು ಎಂದು ಹೇಳಿ ವರ್ಷ ಕಳೆದರೂ ದುರಸ್ಥಿಗೊಳಿಸಿಲ್ಲ. ಹಾಗಾಗಿ ರಸ್ತೆ ದುರಸ್ಥಿ ಕಾರ್ಯ ನಡೆಸದಿದ್ದರೆ ಬಾಳೆ ಗಿಡ ನೆಟ್ಟು ಪ್ರತಿಭಟಿಸುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ