ಆ್ಯಪ್ನಗರ

ಮೀನುಗಾರರಿಗೆ ಸೌಲಭ್ಯ ಒದಗಿಸಲು ಆಗ್ರಹ

ಮೀನುಗಾರರಿಗೆ ಮೀನು ಸಾಕಣೆ ಮಾಡಲು ಶೂನ್ಯ ಬಡ್ಡಿದರದಲ್ಲಿಸಾಲ ನೀಡುವುದರ ಜತೆಗೆ ಮಾರುಕಟ್ಟೆ ವ್ಯವಸ್ಥೆ ಸೇರಿದಂತೆ ಎಲ್ಲರೀತಿಯ ಸೌಲಭ್ಯ ಒದಗಿಸಿಕೊಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಸಂಚಾಲಕ ಕೆ.ಸಿ.ವಸಂತಕುಮಾರ್‌ ಸರಕಾರವನ್ನು ಆಗ್ರಹಿಸಿದ್ದಾರೆ.

Vijaya Karnataka 24 Sep 2019, 5:00 am
ಚಿಕ್ಕಮಗಳೂರು: ಮೀನುಗಾರರಿಗೆ ಮೀನು ಸಾಕಣೆ ಮಾಡಲು ಶೂನ್ಯ ಬಡ್ಡಿದರದಲ್ಲಿಸಾಲ ನೀಡುವುದರ ಜತೆಗೆ ಮಾರುಕಟ್ಟೆ ವ್ಯವಸ್ಥೆ ಸೇರಿದಂತೆ ಎಲ್ಲರೀತಿಯ ಸೌಲಭ್ಯ ಒದಗಿಸಿಕೊಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಸಂಚಾಲಕ ಕೆ.ಸಿ.ವಸಂತಕುಮಾರ್‌ ಸರಕಾರವನ್ನು ಆಗ್ರಹಿಸಿದ್ದಾರೆ.
Vijaya Karnataka Web provide facilities to fishermen
ಮೀನುಗಾರರಿಗೆ ಸೌಲಭ್ಯ ಒದಗಿಸಲು ಆಗ್ರಹ


ನಗರದ ಲಕ್ಷಿತ್ರ್ಮೕಶ ಸಮುದಾಯ ಭವನದಲ್ಲಿಸೋಮವಾರ ಏರ್ಪಡಿಸಿದ್ದ ತಾಲೂಕು ಶ್ರೀಗಂಗಾ ಪ.ಜಾತಿ, ಪ.ವರ್ಗದ ಮೀನುಗಾರಿಕೆ ವಿವಿದೋದ್ದೇಶ ಸಹಕಾರ ಸಂಘದ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಮೀನು ಕೃಷಿ ಮಾಡಲು ಸರಕಾರ ಅಥವಾ ಇಲಾಖೆ ಕೆರೆ ಕೊಟ್ಟರಷ್ಟೇ ಸಾಲದು. ಅವರಿಗೆ ಎಲ್ಲರೀತಿಯ ವ್ಯವಸ್ಥೆ ಕಲ್ಪಿಸಬೇಕು. ಕೆರೆಗಳಲ್ಲಿಪಂಪ್‌ಸೆಟ್‌ ಮೂಲಕ ಅಕ್ರಮವಾಗಿ ನೀರು ಹೊಡೆಯುವುದನ್ನು ತಡೆಯಬೇಕು. ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಮೀನುಗಾರರ ಸಂಘದ ಸಭೆಗೆ ಹಾಜರಾಗಿ ಇಲಾಖೆಯಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ಪ.ಜಾತಿ, ಪ.ವರ್ಗದ ಮೀನುಗಾರರು ಆರ್ಥಿಕವಾಗಿ ಸಬಲರಾಗುವ ನಿಟ್ಟಿನಲ್ಲಿಕುಲಕಸುಬಿನ ಜತೆಗೆ ಬೇರೆ ವೃತ್ತಿಯನ್ನು ಮಾಡಬೇಕು ಎಂದು ಸಲಹೆ ಮಾಡಿದರು.

ಸಂಘದ ಅಧ್ಯಕ್ಷ ವಿ.ಧರ್ಮೇಶ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಸರಕಾರ ಮೀನುಗಾರಿಕೆ ಇಲಾಖೆಗೆ ಕೋಟ್ಯಂತರ ರೂ. ಹಣ ನೀಡುತ್ತಿದೆ. ಆದರೆ, ಮೀನುಗಾರರಿಗೆ ಈವರೆಗೂ ಯಾವುದೇ ಸಾಲ ಸೌಲಭ್ಯ ನೀಡಿಲ್ಲ. ಹಾಗಾಗಿ ಪ.ಜಾತಿ, ಪ.ವರ್ಗದ ಮೀನುಗಾರರು ಹಣವಿಲ್ಲದೆ ಕುಲಕಸುಬು ಮಾಡಲಾಗದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆ ಎಂದರು.

ಪ.ಜಾತಿ, ಪ.ವರ್ಗದ ಮೀನುಗಾರರು ಆರ್ಥಿಕವಾಗಿ ಸಬಲರಾಗಬೇಕಾದರೆ ಅವರಿಗೆ ರಾಜ್ಯದ ಯಾವುದೇ ಭಾಗದಲ್ಲಾದರೂ ಮೀನುಗಾರಿಕೆ ಮಾಡಲು ಅವಕಾಶ ನೀಡಬೇಕು. ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಚಂದ್ರಪ್ಪ, ಸಂಘದ ನಿರ್ದೇಶಕರಾದ ಮಂಜುನಾಥ್‌, ಟಿ.ರಾಮಚಂದ್ರ, ರಾಧಮ್ಮ, ಚಂದ್ರಪ್ಪ, ಸಿ.ಡಿ.ಕಾವ್ಯ, ದಿವ್ಯ, ಯಶೋಧರ ಹಾಜರಿದ್ದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ