ಆ್ಯಪ್ನಗರ

ಮಕ್ಕಳ ರಕ್ಷ ಣೆಯಲ್ಲಿ ಸಾರ್ವಜನಿಕರು ಮುಂದಾಗಲಿ

ಮಕ್ಕಳನ್ನು ಉತ್ತಮ ಪ್ರಜೆಯನ್ನಾಗಿ ಮಾಡಲು ಮಕ್ಕಳ ರಕ್ಷ ಣಾ ಕಾರ್ಯದಲ್ಲಿ ಸಾರ್ವಜನಿಕರು ಮುಂದಾಗಬೇಕೆಂದು ಹಿರಿಯ ಸಿವಿಲ್‌ ನ್ಯಾಯಾಧೀಶೆ ಎಂ.ಎಸ್‌.ಶಶಿಕಲಾ ಹೇಳಿದರು.

Vijaya Karnataka 18 May 2019, 5:00 am
ಮೂಡಿಗೆರೆ : ಮಕ್ಕಳನ್ನು ಉತ್ತಮ ಪ್ರಜೆಯನ್ನಾಗಿ ಮಾಡಲು ಮಕ್ಕಳ ರಕ್ಷ ಣಾ ಕಾರ್ಯದಲ್ಲಿ ಸಾರ್ವಜನಿಕರು ಮುಂದಾಗಬೇಕೆಂದು ಹಿರಿಯ ಸಿವಿಲ್‌ ನ್ಯಾಯಾಧೀಶೆ ಎಂ.ಎಸ್‌.ಶಶಿಕಲಾ ಹೇಳಿದರು.
Vijaya Karnataka Web CKM-17MDG-P1


ಅವರು ಶುಕ್ರವಾರ ಚಿಕ್ಕಮಗಳೂರು ಮಕ್ಕಳ ಸಹಾಯವಾಣಿ 1098 ವತಿಯಿಂದ ವಿವಿಧ ಇಲಾಖೆ ಹಾಗೂ ಸಮಾಜ ಸೇವಾ ಸಂಸ್ಥೆ ಸಹಯೋಗದಲ್ಲಿ ಪಟ್ಟಣದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಮೇಲಿನ ದೌರ್ಜನ್ಯ, ಬಾಲ ಕಾರ್ಮಿಕರು ಸೇರಿದಂತೆ ನಾನಾ ಕಾರಣದಿಂದ ಬಹುತೇಕ ಮಕ್ಕಳು ತಮ್ಮ ಉಜ್ವಲ ಭವಿಷ್ಯದಿಂದ ವಂಚಿತರಾಗುತ್ತಿದ್ದಾರೆ. ಅಂತಹ ಮಕ್ಕಳು ಕಂಡರೆ ಕೂಡಲೇ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ತಿಳಿಸಿದರೆ ಅಂತಹ ಮಕ್ಕಳಿಗೆ ಉಜ್ವಲ ಭವಿಷ್ಯ ರೂಪಿಸಲು ಸಹಾಯ ಮಾಡಿದಂತಾಗುತ್ತದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ ಮಾತನಾಡಿ, ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳು, ಬಾಲ್ಯ ವಿವಾಹಕ್ಕೆ ಒಳಗಾಗುತ್ತಿರುವ ಮಕ್ಕಳು, ಬೀದಿ ಮಕ್ಕಳು, ವಿಶೇಷ ಅಗತ್ಯವುಳ್ಳ ಮಕ್ಕಳು, ಕಾಣೆಯಾದ ಮಕ್ಕಳು, ಬಾಲ ಕಾರ್ಮಿಕರು, ನಿರ್ಗತಿಕ ಮಕ್ಕಳು, ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾದ ಮಕ್ಕಳು ಕಂಡು ಬಂದರೆ ಮಕ್ಕಳ ಸಹಾಯವಾಣಿಗೆ ಕರೆ ಮಾಡುವಂತೆ ಸಲಹೆ ನೀಡಿದರು.ಪಿಎಸ್‌ಐ ಕೆ.ಟಿ.ರಮೇಶ್‌ ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷ ಣ ಘಟಕದ ಯು.ಪವಿತ್ರ, ಮಕ್ಕಳ ಸಹಾಯವಾಣಿ ಸಂಯೋಜಕಿ ಬಿ.ಎನ್‌.ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ