ಆ್ಯಪ್ನಗರ

ನಗರದಲ್ಲಿ ರಾಮನವಮಿ ಸಡಗರ

ನಗರದ ವಿವಿಧ ದೇವಾಲಯಗಳಲ್ಲಿ ಶನಿವಾರ ರಾಮನವಮಿಯನ್ನು ಭಕ್ತರು ಸಡಗರ, ಸಂಭ್ರಮದಿಂದ ಆಚರಿಸಿದರು.

Vijaya Karnataka 14 Apr 2019, 5:00 am
ಚಿಕ್ಕಮಗಳೂರು : ನಗರದ ವಿವಿಧ ದೇವಾಲಯಗಳಲ್ಲಿ ಶನಿವಾರ ರಾಮನವಮಿಯನ್ನು ಭಕ್ತರು ಸಡಗರ, ಸಂಭ್ರಮದಿಂದ ಆಚರಿಸಿದರು.
Vijaya Karnataka Web CKM-13ARAGAP3


ನಗರದ ನೇಕಾರ ಬೀದಿಯ ಕೋದಂಡರಾಮಚಂದ್ರಸ್ವಾಮಿ ದೇವಾಲಯದಲ್ಲಿ ವಾರ್ಷಿಕೋತ್ಸವ, ಶ್ರೀರಾಮನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ರಾಮನವಮಿ ಅಂಗವಾಗಿ ಮೂಲ ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಮಂಡಲ ಪೂಜೆ, ಶ್ರೀರಾಮ ತಾರಕ ಮೂಲಮಂತ್ರ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ, ವಸಂತ ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ವೇಣುಗೋಪಾಲ ದೇಗುಲ : ನಗರದ ಬಸವನಹಳ್ಳಿಯ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ರಾಮನವಮಿ ಉತ್ಸವ ಅಂಗವಾಗಿ ರಾಮೋತ್ಸವ ಸೇವಾ ಸಮಿತಿಯಿಂದ ಅಭಿಷೇಕ, ವಿಶೇಷ ಪೂಜೆ ನಡೆಯಿತು. ಭಕ್ತರಿಗೆ ಪಾನಕ, ಕೋಸಂಬರಿ ವಿತರಿಸಲಾಯಿತು. ಸಮಿತಿ ಅಧ್ಯಕ್ಷ ಕೆ.ಎನ್‌.ಪ್ರಭಾಕರ್‌, ಕಾರ‍್ಯದರ್ಶಿ ಎಸ್‌.ಶ್ರೀನಿವಾಸ್‌, ಖಜಾಂಚಿ ಜಯರಾಂ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ