ಆ್ಯಪ್ನಗರ

ಡಿಕೆ ಶಿವಕುಮಾರ್‌ ಅವರದ್ದು ಗಟ್ಟಿ ಹೃದಯ: ಕೆಪಿಸಿಸಿ ಅಧ್ಯಕ್ಷರನ್ನು ಹಾಡಿಹೊಗಳಿದ ರಂಭಾಪುರಿ ಶ್ರೀ

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ನಿಯೋಜಿತ ಅಧ್ಯಕ್ಷ ಡಿಕೆ ಶಿವಕುಮಾರ್‌ ಚಿಕ್ಕಮಗಳೂರಿನ ಎನ್‌.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಪೀಠಕ್ಕೆ ಗುರುವಾರ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದುಕೊಂಡರು.

Vijaya Karnataka 19 Mar 2020, 3:03 pm

ಚಿಕ್ಕಮಗಳೂರು: ‘ಡಿಕೆ ಶಿವಕುಮಾರ್‌ ಅವರದ್ದು ಗಟ್ಟಿ ಹೃದಯ’ ಎಂಬುದಾಗಿ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳ ಹಾಡಿಹೊಗಳಿದ್ದಾರೆ.
Vijaya Karnataka Web DK Shivakumar


ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ನಿಯೋಜಿತ ಅಧ್ಯಕ್ಷ ಡಿಕೆ ಶಿವಕುಮಾರ್‌ ಎನ್‌.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಪೀಠಕ್ಕೆ ಗುರುವಾರ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದುಕೊಂಡರು.

ಈ ವೇಳೆ ಶ್ರೀಗಳು, “ಡಿಕೆ ಶಿವಕುಮಾರ್‌ ಅವರಿಗೆ ಕಾಂಗ್ರೆಸ್ ನಲ್ಲಿ ಹೆಚ್ಚಿನ ಜವಾಬ್ದಾರಿ, ಉನ್ನತ ಸ್ಥಾನಗಳು ದೊರೆಯಲಿ. ಎಲ್ಲ ವರ್ಗದ ಜನ ಸಮುದಾಯದ ಜೊತೆ ಶಿವಕುಮಾರ್‌ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅವರು, ಎಷ್ಟೇ ಕಷ್ಟ ಬಂದರೂ ಎದುರಿಸುವ ಗಟ್ಟಿ ಹೃದಯ ಉಳ್ಳವರು. ಜಾತಿ ಸಂಘರ್ಷಕ್ಕೆ ಕೊನೆ ಹಾಡಿ, ಬಡಜನರನ್ನು ಮೇಲಕ್ಕೆತ್ತುವ ಕೆಲಸ ಡಿಕೆ ಶಿವಕುಮಾರ್‌ರಿಂದ ಆಗಲಿ. ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ದೇವರು ಅವರಿಗೆ ಶಕ್ತಿ ನೀಡಲಿ,” ಎಂದು ಹರಸಿದರು.

ಕೊರೊನಾ ಹಿನ್ನೆಲೆ, ಬ್ಯಾಂಕ್‌ಗಳ EMIಗೆ ವಿನಾಯಿತಿ ನೀಡುವಂತೆ ಸರಕಾರಕ್ಕೆ ಡಿಕೆಶಿ ಮನವಿ

ಇದಕ್ಕೂ ಮೊದಲು ಕೆಪಿಸಿಸಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಎನ್‌.ಆರ್‌.ಪುರ ತಾಲೂಕಿನ ರಂಭಾಪುರಿ ಪೀಠಕ್ಕೆ ಆಗಮಿಸಿದ ಶಿವಕುಮಾರ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಕೋರಿದರು. ನಂತರ ರಂಭಾಪುರಿ ಪೀಠದ ವೀರಭದ್ರಸ್ವಾಮಿಗೆ ಡಿಕೆಶಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಡಾ.ವೀರಸೋಮೇಶ್ವರ ಜಗದ್ಗುರುಗಳ ಆರ್ಶಿವಾದ ಪಡೆದು, 15 ನಿಮಿಷಗಳ ಕಾಲ ಶ್ರೀಗಳೊಂದಿಗೆ ಮಾತುಕತೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ