ಆ್ಯಪ್ನಗರ

ಮಲೆನಾಡು ಭಾಗದಲ್ಲಿ ಕೊರೊನಾ ನಡುವೆ ಇಲಿಜ್ವರದ ಭೀತಿ

ಕೊರೊನಾ, ಡೆಂಗ್ಯು ನಡುವೆ ಈಗ ಇಲಿ ಜ್ವರದ ಭೀತಿಯೂ ಶುರುವಾಗಿದೆ. ಮಲೆನಾಡಿನ ಹಲವು ಭಾಗಗಳಲ್ಲಿ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡು ಜನ ಆತಂಕದಲ್ಲಿರುವಾಗಲೇ ಇಲಿ ಜ್ವರದ ಸಮಸ್ಯೆ ಎದುರಾಗಿದೆ.

Vijaya Karnataka 30 Jul 2020, 12:35 pm
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೊರೊನಾ ನಡುವೆ ಇಲಿಜ್ವರದ ಭೀತಿಯೂ ಶುರುವಾಗಿದೆ. ನರಸಿಂಹರಾಜಪುರ ತಾಲೂಕಿನಲ್ಲಿ ಇಲಿಜ್ವರದಿಂದ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೂ ಇಲಿಜ್ವರ ಇರುವುದು ದೃಢಪಟ್ಟಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ನರಸಿಂಹರಾಜಪುರ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಇದುವರೆಗೆ ಎರಡು ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿದೆ. 54 ವರ್ಷದ ವ್ಯಕ್ತಿಯೊಬ್ಬರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ವೈದ್ಯಕೀಯ ವರದಿಯಲ್ಲಿ ಇಲಿಜ್ವರ ಇರುವುದು ದೃಢಪಟ್ಟಿದೆ.

ತಾಲೂಕಿನ 30 ವರ್ಷದ ಯುವಕನೊಬ್ಬ ಇಲಿಜ್ವರಕ್ಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲೆನಾಡಿನ ಹಲವು ಹಳ್ಳಿಗಳಲ್ಲೂ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡು ಜನ ಆತಂಕದಲ್ಲಿರುವಾಗಲೇ ಇಲಿಜ್ವರದ ಭೀತಿ ಎದುರಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ