ಆ್ಯಪ್ನಗರ

ಮಂಡ್ಯ ಜನರ ಸೇವೆ ಮಾಡಲು ಸಿದ್ದನಾಗಿದ್ದೇನೆ: ನಿಖಿಲ್ ಕುಮಾರಸ್ವಾಮಿ

ನಾವು ನಂಬಿಕೊಂಡಿರುವ ಶೃಂಗೇರಿ ಶಾರದಾಂಬಿ ಹಾಗೂ ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇವೆ. ಹಿಂದಿನಿಂದಲೂ ಶ್ರೀಗಳ ಜತೆ ದೊಡ್ಡವರ ನಂಟು ಇದೆ. ಅವರ ಹಾಗೂ ಶಾರದಾಂಬೆಯ ಆಶೀರ್ವಾದದಿಂದ ನನ್ನ ತಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾರೆ

Vijaya Karnataka Web 7 Mar 2019, 11:01 am
ಚಿಕ್ಕಮಗಳೂರು: ಜನರ ನಾಡಿ ಮಿಡಿತ ಅರ್ಥ ಮಾಡಿಕೊಂಡಿದ್ದಕ್ಕೆ ಪಕ್ಷ ನನಗೆ ಟಿಕೆಟ್ ನೀಡಿದ್ದು, ಮಂಡ್ಯ ಜನರ ಸೇವೆ ಮಾಡಲು ಸಿದ್ಧನಾಗಿದ್ದೇನೆ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.
Vijaya Karnataka Web nikhil


ಶಾರದಾಂಬೆ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ನಂಬಿಕೊಂಡಿರುವ ಶೃಂಗೇರಿ ಶಾರದಾಂಬಿ ಹಾಗೂ ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇವೆ. ಹಿಂದಿನಿಂದಲೂ ಶ್ರೀಗಳ ಜತೆ ದೊಡ್ಡವರ ನಂಟು ಇದೆ. ಅವರ ಹಾಗೂ ಶಾರದಾಂಬೆಯ ಆಶೀರ್ವಾದದಿಂದ ನನ್ನ ತಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾರೆ ಎಂದರು.

ಮಂಡ್ಯ ಲೋಕಸಭೆ ಅಭ್ಯರ್ಥಿ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ಇದು ಜೆಡಿಎಸ್ ವರಿಷ್ಠರು ಹಾಗೂ ಕಾರ್ಯಕರ್ತರ ನಿರ್ಧಾರ. ಬಹುತೇಕ ಶಾಸಕರ ಜತೆ ಚರ್ಚಿಸಿ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದರು.

ಮಂಡ್ಯ ಜನತೆಯ ನಾಡಿ ಮಿಡಿತ ಅರ್ಥೈಸಿಕೊಂಡು ಪಕ್ಷ ಟಿಕೆಟ್ ನೀಡಲು ನಿರ್ಧರಿಸಿದೆ. ಅದರಂತೆ, ಮಂಡ್ಯ ಜನತೆಯ ಸೇವೆ ಮಾಡಲು ರೆಡಿಯಾಗಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ