ನಿವೇಶನ ರಹಿತರಿಗೆ ಹಕ್ಕುಪತ್ರ ನೀಡಲು ಆಗ್ರಹ
ಜಿಲ್ಲೆಯಲ್ಲಿರುವ ನಿರಾಶ್ರಿತರನ್ನು ಗುರುತಿಸಿ ಅವರಿಗೆ ನಿವೇಶನ ಮತ್ತು ಹಕ್ಕುಪತ್ರ ನೀಡಬೇಕು ಎಂದು ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka 15 Jul 2019, 5:00 am
ಚಿಕ್ಕಮಗಳೂರು : ಜಿಲ್ಲೆಯಲ್ಲಿರುವ ನಿರಾಶ್ರಿತರನ್ನು ಗುರುತಿಸಿ ಅವರಿಗೆ ನಿವೇಶನ ಮತ್ತು ಹಕ್ಕುಪತ್ರ ನೀಡಬೇಕು ಎಂದು ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ನಿರಾಶ್ರಿತರು ಕಳೆದ 10 ವರ್ಷದಿಂದ ಆಯಾ ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಹಾಕುತ್ತಲೇ ಇದ್ದಾರೆ. ಆದರೆ ಬೆರಳೆಣಿಕೆಯಲ್ಲಿ ನಿವೇಶನ ಹ್ಕುಪತ್ರ ನೀಡಲಾಗಿದೆ. ಸಹಸ್ರಾರು ಅರ್ಜಿಗಳು ವಿಲೇವಾರಿಗೆ ಬಾಕಿ ಇದ್ದು ಈ ಬಗ್ಗೆ ಪರಿಶೀಲಿಸಿ ಸರಕಾರಿ ಜಾಗ ಗುರುತಿಸಿ ಅರ್ಹತೆ ಆಧಾರದಲ್ಲಿ ಅವರಿಗೆ ಮನೆ ನಿರ್ಮಿಸಿಕೊಳ್ಳಲು ನಿವೇಶನ ನೀಡಬೇಕು. ಈ ಬಗ್ಗೆ ಅಧಿಕಾರಿಗಳು ಕ್ರಿಯಾಶೀಲರಾಗಬೇಕು ಎಂದು ತಾಕೀತು ಮಾಡಿದರು.
ಜಿ.ಪಂ. ಸದಸ್ಯೆ ಅಮಿತಾಮುತ್ತಪ್ಪ ಮಾತನಾಡಿ, ಅಧಿಕಾರಿಗಳಿಗೆ ಇಚ್ಛಾಶಕ್ತಿ ಇದ್ದಲ್ಲಿ ಬಡವರ ಸಮಸ್ಯೆಗಳನ್ನು ಬಗೆಹರಿಸಬಹುವುದು ಕಷ್ಟಸಾಧ್ಯವೇನಲ್ಲ. ಅನೇಕ ವರ್ಷದಿಂದ ಕೃಷ್ಣಪ್ಪ ಬಡಾವಣೆಗೆ ಮೂಲ ಸೌಕರ್ಯ ನೀಡದೆ ನಿರ್ಲಕ್ಷಿಸಲಾಗಿತ್ತು. ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದಾಗ ಅಲ್ಲಿನ ಮೂಲ ಸಮಸ್ಯೆಗೆ ಸ್ಪಂದಿಸಿ ಎಲ್ಲರಿಗೂ ಹಕ್ಕು ಪತ್ರ ನೀಡಿರುವುದು ಅತ್ಯಂತ ಸಂತೋಷದ ವಿಷಯ ಎಂದರು. ಈ ಸಂದರ್ಭಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಡಿ.ರೇವಣ್ಣ ಇತರೆ ಅಧಿಕಾರಿಗಳು ಹಾಜರಿದ್ದರು.
==========================
ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಸರಕಾರದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯವಾದರೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ದೂರು ನೀಡಬೇಕು.ಸಮಿತಿ ಸದಸ್ಯರು ಸ್ಥಳಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡಬೇಕು.
-ಶಿವಕುಮಾರ್ ,ಚಿಕ್ಕಮಗಳೂರು ಉಪವಿಭಾಗಾಧಿಕಾರಿ
ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ನಿರಾಶ್ರಿತರು ಕಳೆದ 10 ವರ್ಷದಿಂದ ಆಯಾ ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಹಾಕುತ್ತಲೇ ಇದ್ದಾರೆ. ಆದರೆ ಬೆರಳೆಣಿಕೆಯಲ್ಲಿ ನಿವೇಶನ ಹ್ಕುಪತ್ರ ನೀಡಲಾಗಿದೆ. ಸಹಸ್ರಾರು ಅರ್ಜಿಗಳು ವಿಲೇವಾರಿಗೆ ಬಾಕಿ ಇದ್ದು ಈ ಬಗ್ಗೆ ಪರಿಶೀಲಿಸಿ ಸರಕಾರಿ ಜಾಗ ಗುರುತಿಸಿ ಅರ್ಹತೆ ಆಧಾರದಲ್ಲಿ ಅವರಿಗೆ ಮನೆ ನಿರ್ಮಿಸಿಕೊಳ್ಳಲು ನಿವೇಶನ ನೀಡಬೇಕು. ಈ ಬಗ್ಗೆ ಅಧಿಕಾರಿಗಳು ಕ್ರಿಯಾಶೀಲರಾಗಬೇಕು ಎಂದು ತಾಕೀತು ಮಾಡಿದರು.
ಜಿ.ಪಂ. ಸದಸ್ಯೆ ಅಮಿತಾಮುತ್ತಪ್ಪ ಮಾತನಾಡಿ, ಅಧಿಕಾರಿಗಳಿಗೆ ಇಚ್ಛಾಶಕ್ತಿ ಇದ್ದಲ್ಲಿ ಬಡವರ ಸಮಸ್ಯೆಗಳನ್ನು ಬಗೆಹರಿಸಬಹುವುದು ಕಷ್ಟಸಾಧ್ಯವೇನಲ್ಲ. ಅನೇಕ ವರ್ಷದಿಂದ ಕೃಷ್ಣಪ್ಪ ಬಡಾವಣೆಗೆ ಮೂಲ ಸೌಕರ್ಯ ನೀಡದೆ ನಿರ್ಲಕ್ಷಿಸಲಾಗಿತ್ತು. ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದಾಗ ಅಲ್ಲಿನ ಮೂಲ ಸಮಸ್ಯೆಗೆ ಸ್ಪಂದಿಸಿ ಎಲ್ಲರಿಗೂ ಹಕ್ಕು ಪತ್ರ ನೀಡಿರುವುದು ಅತ್ಯಂತ ಸಂತೋಷದ ವಿಷಯ ಎಂದರು. ಈ ಸಂದರ್ಭಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಡಿ.ರೇವಣ್ಣ ಇತರೆ ಅಧಿಕಾರಿಗಳು ಹಾಜರಿದ್ದರು.
==========================
ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಸರಕಾರದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯವಾದರೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ದೂರು ನೀಡಬೇಕು.ಸಮಿತಿ ಸದಸ್ಯರು ಸ್ಥಳಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡಬೇಕು.
-ಶಿವಕುಮಾರ್ ,ಚಿಕ್ಕಮಗಳೂರು ಉಪವಿಭಾಗಾಧಿಕಾರಿ