ಆ್ಯಪ್ನಗರ

ರಾಷ್ಟ್ರಧ್ವಜ, ರಾಷ್ಟ್ರಗೀತೆಗೆ ಗೌರವ ನೀಡಿ

ವಿದ್ಯಾರ್ಥಿಗಳು ರಾಷ್ಟ್ರಧ್ವಜ, ರಾಷ್ಟ್ರಗೀತೆ, ದೇಶಕ್ಕೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಜಗದೀಶಾಚಾರ್‌ ಹೇಳಿದರು.

Vijaya Karnataka 4 Aug 2019, 5:00 am
ಚಿಕ್ಕಮಗಳೂರು : ವಿದ್ಯಾರ್ಥಿಗಳು ರಾಷ್ಟ್ರಧ್ವಜ, ರಾಷ್ಟ್ರಗೀತೆ, ದೇಶಕ್ಕೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಜಗದೀಶಾಚಾರ್‌ ಹೇಳಿದರು.
Vijaya Karnataka Web CKM-3SHIVUP2


ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಭಾರತ ಸೇವಾದಳದ ಜ್ಞಾನಜ್ಯೋತಿ ಘಟಕದಿಂದ ನಗರದ ಆಜಾದ್‌ಪಾರ್ಕ್‌ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಜನನಿ ಮತ್ತು ಜನ್ಮಭೂಮಿ ಸ್ವರ್ಗಕ್ಕಿಂತ ಮಿಗಿಲು. ಅದನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ದೇಶ, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಅಗೌರವ ತೋರಿಸಬಾರದು. ಯುವಜನತೆ ದೇಶಭಕ್ತಿ ಮತ್ತು ದೇಶಪ್ರೇಮ ಮೈಗೂಡಿಸಿಕೊಂಡು ಸಮರ್ಪಣಾ ಮನೋಭಾವದಿಂದ ದುಡಿದರೆ ಮಾತ್ರ ದೇಶದ ಅಭಿವೃದ್ಧಿಯಾಗುತ್ತದೆ ಎಂದರು.

ಭಾರತ ಸೇವಾದಳದ ತಾಲೂಕು ಸಂಘಟಕ ಎಸ್‌.ಈ.ಲೋಕೇಶ್ವರಾಚಾರ್‌ ಮಾತನಾಡಿ, ರಾಷ್ಟ್ರಗೀತೆ, ರಾಷ್ಟ್ರಧ್ವಜ ತರಬೇತಿ ಶಿಬಿರವನ್ನು ಸೇವಾದಳ ಕಳೆದ 30 ವರ್ಷಗಳಿಂದ ನಡೆಸಿಕೊಂಡು ಬಂದಿದೆ. ರಾಷ್ಟ್ರಗೀತೆಯನ್ನು ಕ್ರಮಬದ್ಧವಾಗಿ ಹಾಡುವುದು, ರಾಷ್ಟ್ರಧ್ವಜ ಕಟ್ಟುವ ವಿಧಾನ, ಧ್ವಜಕ್ಷೇತ್ರ ನಿರ್ಮಾಣದ ಬಗ್ಗೆ ಕಲಿಸಲಾಗುವುದು ಎಂದು ಹೇಳಿದರು. ಮುಖ್ಯ ಶಿಕ್ಷಕಿ ಬಿ.ಆರ್‌.ಗೀತಾ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಕರ ಸಂಘದ ಖಜಾಂಚಿ ಕುಮಾರಸ್ವಾಮಿ, ಭಾರತ ಸೇವಾದಳದ ಜಿಲ್ಲಾ ಸಂಘಟಕ ಚಂದ್ರಕಾಂತ್‌, ಕುಮಾರಪ್ಪ, ಶಿಕ್ಷಕಿ ಗೀತಾ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ