ಆ್ಯಪ್ನಗರ

ಆರ್‌ಎಸ್‌ಎಸ್‌ ಅಣತಿಯಂತೆ ಕೇಂದ್ರ ಕರ್ತವ್ಯ

ಸಂವಿಧಾನದ ಬಗ್ಗೆ ನಂಬಿಕೆ ಇಲ್ಲದ ಕೇಂದ್ರ ಸರಕಾರ ಆರ್‌.ಎಸ್‌.ಎಸ್‌ ಅಣತಿಯಂತೆ ಕರ್ತವ್ಯ ನಿರ್ವಹಿಸುತ್ತಿದ್ದು, ಇದು ಅಪಾಯಕಾರಿ ಬೆಳವಣಿಗೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆರಾಧ್ಯ ಹೇಳಿದರು.

Vijaya Karnataka 3 May 2018, 5:00 am
ತರೀಕೆರೆ: ಸಂವಿಧಾನದ ಬಗ್ಗೆ ನಂಬಿಕೆ ಇಲ್ಲದ ಕೇಂದ್ರ ಸರಕಾರ ಆರ್‌.ಎಸ್‌.ಎಸ್‌ ಅಣತಿಯಂತೆ ಕರ್ತವ್ಯ ನಿರ್ವಹಿಸುತ್ತಿದ್ದು, ಇದು ಅಪಾಯಕಾರಿ ಬೆಳವಣಿಗೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆರಾಧ್ಯ ಹೇಳಿದರು.
Vijaya Karnataka Web rss rules modi government
ಆರ್‌ಎಸ್‌ಎಸ್‌ ಅಣತಿಯಂತೆ ಕೇಂದ್ರ ಕರ್ತವ್ಯ


ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು 2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯುವ ಶಕ್ತಿ ಕಾಂಗ್ರೆಸ್‌ ಪಕ್ಷ ಕ್ಕಿದೆ. ಹಾಗಾಗಿ ಕಾಂಗ್ರೆಸ್‌ನ್ನು ಬೆಂಬಲಿಸಬೇಕು ಎನ್ನುವುದು ಎಡರಂಗ ಪಕ್ಷ ಗಳ ತೀರ್ಮಾನವಾಗಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವಿರೋಧಿ ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್‌ ಪಕ್ಷ ಕ್ಕೆ ಬೆಂಬಲ ನೀಡುವ ತೀರ್ಮಾನವನ್ನು ಸಿಪಿಐ ರಾಷ್ಟ್ರೀಯ ಸಮಿತಿ ಕೈಗೊಂಡಿದೆ.

ಹಿಂದೂ ಮತ್ತು ಮುಸ್ಲಿಮರ ಮಧ್ಯೆ ಒಡಕುಂಟು ಮಾಡುವ ಹುನ್ನಾರ ಮತ್ತು ದಲಿತರ ಮೇಲಿನ ದೌರ್ಜನ್ಯ, ಕಾರ್ಮಿಕರ ಬಗ್ಗೆ ನಿರ್ಲಕ್ಷ ್ಯ ಭಾವನೆಯನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು. ಕಾರ್ಮಿಕ ಸಂಘಟನೆ ಮುಖಂಡ ಗುಣಶೇಖರ್‌ ಮಾತನಾಡಿ, ಕಾರ್ಮಿಕರ ಪರವಾಗಿರುವ ಕಾನೂನುಗಳನ್ನು ಬದಲಾವಣೆ ಮಾಡಲು ಹೊರಟಿರುವ ಬಿಜೆಪಿ ತನ್ನ ಅಧಿಕಾರವಧಿಯಲ್ಲಿ ಬಂಡವಾಳ ಶಾಹಿಗಳ ಪರವಾದ ಆರ್ಥಿಕ ನೀತಿ ರೂಪಿಸಿದೆ ಎಂದು ದೂರಿದರು.

ಮುಖಂಡ ತಾಳಿಕಟ್ಟೆ ಲೋಕೇಶ್‌, ಪುರಸಭೆ ಮಾಜಿ ಅಧ್ಯಕ್ಷ ಗೋಪಿಕುಮಾರ್‌ ಮಾತನಾಡಿದರು.ಪುರಸಭೆಯ ಉಪಾಧ್ಯಕ್ಷ ಅಶೋಕ್‌ಕುಮಾರ್‌, ಕಾಂಗ್ರೆಸ್‌ ಮುಖಂಡರುಗಳಾದ ಲೋಕೇಶ್ವರಪ್ಪ, ರವಿ ಶ್ಯಾನುಭೋಗ್‌, ಎಸ್‌.ಬಿ.ಗುರುಮೂರ್ತಿ, ಮಂಜುನಾಥ, ತಾ.ಪಂ.ಮಾಜಿ ಸದಸ್ಯ ಕುಮಾರನಾಯ್ಕ, ಮುಖಂಡ ಯೋಗೇಂದ್ರನಾಯ್ಕ ಇನ್ನಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ