ಆ್ಯಪ್ನಗರ

ಪರಿಸರ ಉಳಿಸಲು ಅಳಿಲು ಸೇವೆ ಮಾಡಿ

ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ ಗಿಡನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾದ ಉಮೇಶ್‌.ಎಂ.ಅಡಿಗ ಹೇಳಿದರು.

Vijaya Karnataka 8 Jun 2019, 5:00 am
ಚಿಕ್ಕಮಗಳೂರು : ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ ಗಿಡನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾದ ಉಮೇಶ್‌.ಎಂ.ಅಡಿಗ ಹೇಳಿದರು.
Vijaya Karnataka Web CKM-7RUDRAP4


ಸಖರಾಯಪಟ್ಟಣ ಸಮೀಪದ ಸರಪನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.ದಿನದಿಂದ ದಿನಕ್ಕೆ ಪರಿಸರದಲ್ಲಿ ವಾಯುಮಾಲಿನ್ಯ ಉಂಟಾಗಿ ನೂರಾರು ರೋಗಗಳು ಆವರಿಸಿಕೊಂಡಿವೆ.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಿಲ್ಲೆಯಾದ್ಯಂತ 1.50 ಲಕ್ಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಾಣಿ, ಪಕ್ಷಿಗಳಿಂದ ಕೂಡಿದ ಕಾಡನ್ನು ಕಡಿದು ನಾಶ ಮಾಡಲಾಗುತ್ತಿದ್ದು, ಪ್ರಾಣಿಗಳು ಕಾಡನ್ನು ಬಿಟ್ಟು ನಾಡಿಗೆ ಬರುತ್ತಿವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪರಸರ ಉಳಿಸಲು ಅಳಿಲು ಸೇವೆ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಶ್ರೇಣಿ ನ್ಯಾಯಾಧೀಶ ಬಸವರಾಜ್‌ ಚೇಂಗಟಿ ಮಾತನಾಡಿ, ಪರಿಸರಕ್ಕೂ ಮತ್ತು ಮಾನವನಿಗೂ ಅವಿನಾನುಭಾವ ಸಂಬಂಧವಿದೆ. ಆ ಸಂಬಂಧವನ್ನು ಕಾಡು ಕಡಿಯುವ ಮೂಲಕ ಹಾಳು ಮಾಡಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್‌.ಎಸ್‌.ವೆಂಕಟೇಶ್‌ ಮಾತನಾಡಿ ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯಪರಿಸರದ ಜತೆಗೆ ಒಡನಾಟ ಇಟ್ಟುಕೊಂಡರೆ ಮಾತ್ರ ಪರಿಸರ ದಿನಾಚರಣೆಗೆ ಅರ್ಥ ಬರುತ್ತದೆ ಎಂದು ಹೇಳಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಎನ್‌.ವೇಣು ಅಧ್ಯಕ್ಷ ತೆ ವಹಿಸಿದ್ದರು.ಬಿಸಿಎಂ ಅಧಿಕಾರಿ ಮಂಜುನಾಥ್‌, ಕಾರ್ಯಕ್ರಮಾಧಿಕಾರಿ ತಾರಾನಾಥ್‌, ಉಪ ಅರಣ್ಯ ಸಂರಕ್ಷ ಣಾಧಿಕಾರಿ ಎಚ್‌.ಸಿ.ಕುಮಾರ್‌, ಸಹಾಯಕ ಅರಣ್ಯಾಧಿಕಾರಿ ಮುದ್ದಣ್ಣ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ