ಆ್ಯಪ್ನಗರ

ದೇಶಭಕ್ತರನ್ನು ಹುಟ್ಟುಹಾಕಿದ ಸಂಸ್ಥೆ ಭಾರತ ಸೇವಾದಳ

ಶಿಕ್ಷ ಕ ಸಮುದಾಯ ಸೇವಾ ಮತ್ತು ಅರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸುವ ಮೂಲಕ ಭಾರತ ಸೇವಾದಳವನ್ನು ಉಳಿಸಿ ಬೆಳೆಸಬೇಕು ಎಂದು ಮಾಜಿ ಶಾಸಕ ಐ.ಬಿ.ಶಂಕರ್‌ ಮನವಿ ಮಾಡಿದರು.

Vijaya Karnataka 26 Jun 2019, 5:00 am
ಚಿಕ್ಕಮಗಳೂರು: ಶಿಕ್ಷ ಕ ಸಮುದಾಯ ಸೇವಾ ಮತ್ತು ಅರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸುವ ಮೂಲಕ ಭಾರತ ಸೇವಾದಳವನ್ನು ಉಳಿಸಿ ಬೆಳೆಸಬೇಕು ಎಂದು ಮಾಜಿ ಶಾಸಕ ಐ.ಬಿ.ಶಂಕರ್‌ ಮನವಿ ಮಾಡಿದರು.
Vijaya Karnataka Web CKM-25RUDRAP4


ನಗರದ ಆಜಾದ್‌ ಪಾರ್ಕ್‌ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಭಾರತ ಸೇವಾದಳದ ಶಿಕ್ಷ ಕರ ಮಿಲಾಪ್‌ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಸೇವಾದಳ ಸ್ವಾತಂತ್ರ್ಯ ಹೋರಾಟಗಾರರು ಮತ್ತು ದೇಶಭಕ್ತರನ್ನು ಹುಟ್ಟು ಹಾಕಿದ ಸಂಸ್ಥೆ. ಸ್ವಾತಂತ್ರ್ಯ ಚಳುವಳಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಸಾತ್‌ ಕೊಟ್ಟ ಏಕೈಕ ಸಂಸ್ಥೆ ಎಂದರು.

ಭಾರತ ಸೇವಾದಳಕ್ಕೆ ಶಿಕ್ಷ ಕರೇ ಅಡಿಗಲ್ಲು. ಅದನ್ನು ಉಳಿಸಿ ಬೆಳೆಸುವುದು ಅವರಿಂದ ಮಾತ್ರ ಸಾಧ್ಯ ಎಂದ ಅವರು ಶಿಕ್ಷ ಕ ವೃಂದ ಆ ಹೊಣೆಗಾರಿಕೆಯನ್ನು ಹೊರಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಸೇವಾದಳದ ಶಾಖೆಗಳನ್ನು ಎಲ್ಲ ಶಾಲೆಗಳಲ್ಲೂ ತೆರೆಯಬೇಕು. ಆ ಮೂಲಕ ಇಂದಿನ ಪೀಳಿಗೆಯಲ್ಲಿ ದೇಶಭಕ್ತಿ. ರಾಪ್ಟ್ರಪ್ರೇಮ ಶಿಸ್ತನ್ನು ಬೆಳೆಸಬೇಕು ಎಂದು ಸಲಹೆ ಮಾಡಿದರು.

ತಾಲೂಕು ಕ್ರೀಡಾಧಿಕಾರಿ ರವಿಕುಮಾರ್‌ ಮಾತನಾಡಿ, ಸೇವಾದಳದ ಶಿಕ್ಷ ಕರು ಮಕ್ಕಳಲ್ಲಿ ರಾಷ್ಟ್ರಭಕ್ತಿ, ದೇಶಪ್ರೇಮ, ಶಿಸ್ತು, ಸೇವಾಮನೋಭಾವ ಮತ್ತು ನಾಯಕತ್ವ ಗುಣ ಬೆಳೆಸುವ ಮೂಲಕ ದೇಶವನ್ನು ಅಭಿವೃದ್ದಿ ಪಡಿಸಬೇಕು ಎಂದು ಹೇಳಿದರು.

ಭಾರತ ಸೇವಾದಳದ ತಾಲೂಕು ಅಧ್ಯಕ್ಷ ಬಿ.ಆರ್‌.ಜಗದೀಶ್‌ ಮಾತನಾಡಿ, ಶಿಕ್ಷ ಕರು ಭಾರತ ಸೇವಾದಳವನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆಯನ್ನು ಹೊತ್ತರೆ ಮಾತ್ರ ಆ ಸಂಸ್ಥೆ ಮುಂದಿನ ಪೀಳಿಗೆಗೆ ಉಳಿಯುತ್ತದೆ ಎಂದರು.

ಭಾರತ ಸೇವಾದಳದ ಮಾಜಿ ದಳಪತಿ ಶಿವಕುಮಾರ್‌, ಇತ್ತೀಚೆಗೆ ನಡೆದ ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ಜಿಲ್ಲಾ ದೈಹಿಕ ಶಿಕ್ಷ ಕರ ಸಂಘದ ಅಧ್ಯಕ್ಷ ಮಹೇಶ್ವರಪ್ಪ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಭಾರತ ಸೇವಾದಳದ ಜಿಲ್ಲಾ ಕಾರ್ಯದರ್ಶಿ ಹಂಪಯ್ಯ, ಖಜಾಂಚಿ ಜಗದೀಶಾಚಾರ್‌, ಜಿಲ್ಲಾ ಸಂಘಟಕ ಚಂದ್ರಕಾಂತ್‌, ಸದಸ್ಯ ಶಾಂತಕುಮಾರ್‌, ಮುಖ್ಯ ಶಿಕ್ಷ ಕಿ ಬಿ.ಆರ್‌.ಗೀತಾ, ತಾಲೂಕು ದೈಹಿಕ ಶಿಕ್ಷ ಕರ ಸಂಘದ ಅಧ್ಯಕ್ಷ ಕಾಳಯ್ಯ ಹಾಜರಿದ್ದರು.

ಸೇವಾದಳದ ತಾಲೂಕು ಸಂಘಟಕ ಎಸ್‌.ಈ.ಲೋಕೇಶ್ವರಾಚಾರ್‌ ನಿರೂಪಿಸಿ, ಶಿಕ್ಷ ಕ ಪುಂಡರೀಕ ಸ್ವಾಗತಿಸಿದರು. ಶಂಕರೇಗೌಡ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ