ಆ್ಯಪ್ನಗರ

ಮೋಟಮ್ಮ ವಿರುದ್ಧ ಅವಹೇಳನ: ದೂರು

ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮೋಟಮ್ಮ ಅವರ ವಿರುದ್ಧ ಸಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್‌ ಮಾಡಿದ್ದರ ವಿರುದ್ಧ ಪಟ್ಟಣದ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

Vijaya Karnataka 8 May 2018, 5:00 am
ಮೂಡಿಗೆರೆ: ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮೋಟಮ್ಮ ಅವರ ವಿರುದ್ಧ ಸಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್‌ ಮಾಡಿದ್ದರ ವಿರುದ್ಧ ಪಟ್ಟಣದ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.
Vijaya Karnataka Web shocking against motamma complaint
ಮೋಟಮ್ಮ ವಿರುದ್ಧ ಅವಹೇಳನ: ದೂರು


ಮೋಟಮ್ಮ ಅವರು ಹೃದಯಾಘಾತದಿಂದ ನಿಧನಹೊಂದಿದ್ದಾರೆ ಎಂದು ಸಂದೇಶ ರವಾನಿಸಿದ್ದು, ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದೆ. ಸಂದೇಶ ರವಾನಿಸಿದ ವೀರೇಂದ್ರ ಭಗತ್‌ ಎಂಬುವವನ ವಿರುದ್ಧ ಕಾಂಗ್ರೆಸ್‌ ವಕ್ತಾರ ಎಂ.ಎಸ್‌.ಅನಂತ್‌ ಭಾನುವಾರ ದೂರು ಸಲ್ಲಿಸಿದ್ದಾರೆ.

ಮೋಟಮ್ಮ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕ್ಷೇತ್ರದೆಲ್ಲೆಡೆ ಮತಯಾಚನೆ ಮಾಡುತ್ತಿದ್ದು, ಗ್ರಾಮಗಳಲ್ಲಿ ಅವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಈ ಬಾರಿ ಸಿಪಿಐ ಪಕ್ಷ ಬೆಂಬಲ ನೀಡಿದ್ದರಿಂದ ಕಾಂಗ್ರೆಸ್‌ಗೆ ಹೆಚ್ಚಿನ ಬಲ ಸಿಕ್ಕಿದೆ. ಅಲ್ಲದೆ ಸಿಪಿಐ ಮುಖಂಡರೆಲ್ಲಾ ಕ್ಷೇತ್ರದೆಲ್ಲೆಡೆ ಪ್ರವಾಸಕ್ಕಿಳಿದು ಭರ್ಜರಿಯಾಗಿ ಮೋಟಮ್ಮ ಅವರ ಪರ ಮತಯಾಚನೆ ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ಅವರ ಗೆಲವು ನಿಶ್ಚಿತವೆಂದು ತಿಳಿದಿರುವುದರಿಂದ ಕಿಡಿಗೇಡಿಗಳು ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಮಾಹಿತಿಗಳನ್ನು ರವಾನಿಸುತ್ತಿದ್ದಾರೆ. ಅಂತಹವರ ವಿರುದ್ಧ ಚುನಾವಣೆ ಆಯೋಗ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅನಂತ್‌ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ