ಆ್ಯಪ್ನಗರ

ಚಿಕ್ಕಮಗಳೂರಿನಲ್ಲಿ ಹಾಡಹಗಲೇ ಶೂಟೌಟ್‌: ಜ್ಯುವೆಲ್ಲರ್ಸ್ ಮಾಲೀಕ ಗಂಭೀರ

ಪಲ್ಸರ್ ಬೈಕ್‌ನಲ್ಲಿ ಬಂದಿದ್ದ ಮೂವರು ಸಿನಿಮೀಯ ರೀತಿಯಲ್ಲಿ ಅಂಗಡಿಗೆ ದಾಳಿ ನಡೆಸಿದ್ದು, ಶಾಪ್‌ ಮಾಲೀಕನಿಗೆ ಗನ್‌ ತೋರಿಸಿ ಚಿನ್ನಾಭರಣ ದೋಚಲು ಯತ್ನಿಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ನಿರಾರಿಸಿದ್ದು, ಯಾರಾದರೂ ಸಹಾಯಕ್ಕೆ ಬರುವಂತೆ ಜೋರಾಗಿ ಕೂಗಿದ್ದಾರೆ. ತಕ್ಷಣ ಜ್ಯುವೆಲ್ಲರ್‌ ಮಾಲಿಕನ ಮೇಲೆ ಫೈರಿಂಗ್ ಮಾಡಿದ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

Vijaya Karnataka Web 11 Jul 2020, 12:48 pm
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಾಡಹಗಲೇ ಗನ್ ಸದ್ದು ಕೇಳಿ ಬಂದಿದೆ.
Vijaya Karnataka Web Shootout in chikmagalur


ನಗರದಲ್ಲಿ ಚಿನ್ನದ ಅಂಗಡಿ ಮಾಲೀಕನ ಮೇಲೆ ಬೈಕ್‌ನಲ್ಲಿ ಬಂದ ಆಗಂತುಕರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಜ್ಯುವೆಲ್ಲರ್ಸ್ ಮಾಲೀಕ ಸ್ಥಿತಿ ಗಂಭೀರವಾಗಿದೆ. ನಗರದ ಖ್ಯಾತ ಉದ್ಯಮಿ ಎಂ.ಜಿ.ರಸ್ತೆಯಲ್ಲಿರುವ ಕೇಸರಿ ಜ್ಯುವೆಲ್ಲರ್ಸ್ ಮಾಲೀಕರ ಮೇಲೆ ಪಲ್ಸರ್‌ ಬೈಕ್‌ನಲ್ಲಿ ಬಂದ ಮೂವರು ದರೋಡೆಕೋರರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಗಮನಿಸಿ: ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ರಾತ್ರಿ ಸಂಚಾರಕ್ಕೆ ಬ್ರೇಕ್‌

ಪಲ್ಸರ್ ಬೈಕ್‌ನಲ್ಲಿ ಬಂದಿದ್ದ ಮೂವರು ಸಿನಿಮೀಯ ರೀತಿಯಲ್ಲಿ ಅಂಗಡಿಗೆ ದಾಳಿ ನಡೆಸಿದ್ದು, ಶಾಪ್‌ ಮಾಲೀಕನಿಗೆ ಗನ್‌ ತೋರಿಸಿ ಚಿನ್ನಾಭರಣ ದೋಚಲು ಯತ್ನಿಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ನಿರಾರಿಸಿದ್ದು, ಯಾರಾದರೂ ಸಹಾಯಕ್ಕೆ ಬರುವಂತೆ ಜೋರಾಗಿ ಕೂಗಿದ್ದಾರೆ. ತಕ್ಷಣ ಜ್ಯುವೆಲ್ಲರ್‌ ಮಾಲಿಕನ ಮೇಲೆ ಫೈರಿಂಗ್ ಮಾಡಿದ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಕೊರೊನಾ ನಡುವೆ ನಿರಂತರ ಸಭೆ; ಜನಪ್ರತಿನಿಧಿಗಳಿಂದ ಅಧಿಕಾರಿಗಳಿಗೆ ಪೀಕಲಾಟ

ಸದ್ಯ ಜ್ಯುವೆಲ್ಲರ್ಸ್ ಮಾಲೀಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರೀಶೀಲನೆ ನಡೆಸಿದ್ದಾರೆ. ಅಲ್ಲದೇ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕೊರೊನಾ ವೈರಸ್ ತಗುಲಿ ಮಹಿಳೆ ಸಾವು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ