ಆ್ಯಪ್ನಗರ

ಗುಂಡುಹಾರಿಸಿ ವ್ಯಕ್ತಿಯ ಹತ್ಯೆ

ಮುಳ್ಳಾರೆ ಗ್ರಾಮದಲ್ಲಿ ಗುಂಡು ಹಾರಿಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.

Vijaya Karnataka 12 Aug 2019, 9:49 pm
ಆಲ್ದೂರು (ಚಿಕ್ಕಮಗಳೂರು ತಾ.) : ಮುಳ್ಳಾರೆ ಗ್ರಾಮದಲ್ಲಿ ಗುಂಡು ಹಾರಿಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.
Vijaya Karnataka Web CKM-10ALDUR2


ಮುಳ್ಳಾರೆ ಗ್ರಾಮದ ಸುರೇಶ್‌(44) ಮೃತಪಟ್ಟವರು. ರಾಘವ ಗುಂಡುಹಾರಿಸಿ ಹತ್ಯೆ ಮಾಡಿದ ಆರೋಪಿ.

ಸುರೇಶ್‌ ಹಾಗೂ ರಾಘವ ಅವರ ಮಧ್ಯೆ ಜಮೀನಿನ ವಿಚಾರವಾಗಿ ಈ ಹಿಂದೆ ಹಲವು ಬಾರಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ವೈಷ್ಯಮ್ಯದ ಹಿನ್ನೆಲೆಯಲ್ಲಿ ಶನಿವಾರ ಸುರೇಶ್‌ ಅವರು ಕಾಫಿ ತೋಟದಲ್ಲಿ ಇದ್ದಾಗ ಅಲ್ಲಿಗೆ ಬಂದ ರಾಘವ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಪಿಎಸ್‌ಐ ರಾಘವೇಂದ್ರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೋಲಿಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಘಟನೆಗೆ ಸಂಭಂದಿಸಿದಂತೆ ಆಲ್ದೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ